ಕೈಕೊಟ್ಟ ಮಳೆ: ತರಕಾರಿ ಬೆಲೆ ದುಪ್ಪಟ್ಟು, ರಾಯಚೂರು ಮಾರುಕಟ್ಟೆಯಲ್ಲಿ ಇಂದಿನ ದರ ಎಷ್ಟು?
ರಾಯಚೂರು, ಜೂನ್ 29: ಮುಂಗಾರು ಮುನಿಸಿನಿಂದಾಗಿ ಜಿಲ್ಲೆಯಲ್ಲಿ ತರಕಾರಿ ಉತ್ಪಾದನೆ ಕಡಿಮೆಯಾಗಿದ್ದು ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳದಿಂದಾಗಿ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಪ್ರಸಕ್ತ ವರ್ಷ ಕೃಷಿ ಚಟುವಟಿಕೆ ಆರಂಭಿಸಲು ಮಳೆರಾಯನ ಅವಕೃಪೆ ಹೆಚ್ಚಿದೆ. ಹೀಗಾಗಿ ತರಕಾರಿ, ಹಣ್ಣುಗಳ ದಾಸ್ತಾನು ನಿಧಾನವಾಗಿ ಕಡಿಮೆಯಾಗುತ್ತಿದೆ.
ಆಷಾಢ ಮಾಸಕ್ಕೂ ಮುನ್ನ ಹಲವಾರು ಸಮಾರಂಭಗಳು ನಡೆಯುತ್ತಿದ್ದು ಕಾರ್ಯಕ್ರಮಗಳಿಗೆ ಹೇರಳವಾಗಿ ತರಕಾರಿಗಳು ಮಾರಾಟವಾಗುತ್ತಿರುವುದರಿಂದ ತರಕಾರಿಗಳ ಕೊರತೆಯಾಗಿದೆ. ಹೀಗಾಗಿ ಬೆಲೆ ಜಾಸ್ತಿಯಾಗಿದ್ದು ಗ್ರಾಹಕರು ಹೆಚ್ಚು ಹಣ ಕೊಟ್ಟು ಖರೀದಿಸುವಂತಾಗಿದೆ.

ಜಿಲ್ಲೆಯ ಗ್ರಾಮೀಣ ಭಾಗ ಸೇರಿದಂತೆ ಪಕ್ಕದ ಆಂಧ್ರಪ್ರದೇಶ , ತೆಲಂಗಾಣ ರಾಜ್ಯದ ತರಕಾರಿ ರಾಯಚೂರು ಮಾರುಕಟ್ಟೆಗೆ ಪ್ರತಿ ನಿತ್ಯವೂ ಬರುತ್ತಿತ್ತು. ಆದರೆ ಮಳೆ ಕೊರತೆಯಿಂದ ಮಾರುಕಟ್ಟೆಗೆ ತರಕಾರಿ ಬರುತ್ತಿಲ್ಲ. ಕೇವಲ ಬೋರ್ ವೆಲ್ ಹೊಂದಿದ ರೈತರು ಮಾತ್ರ ತರಕಾರಿ ಬೆಳೆದ ಫಲವಾಗಿ ಕಡಿಮೆ ಪ್ರಮಾಣದಲ್ಲಿ ತರಕಾರಿ ಬರುತ್ತಿರುವುದರಿಂದ ದರದಲ್ಲಿ ಹೆಚ್ಚಳ ಕಂಡು ಬಂದಿದೆ.
ಮಳೆ ಕೊರತೆಯಿಂದ ಪಕ್ಕದ ರಾಜ್ಯದಿಂದ ತರಕಾರಿ ಮಾರುಕಟ್ಟೆಗೆ ಸರಿಯಾಗಿ ಬಾರದೇ ಇರುವುದರಿಂದ ತರಕಾರಿ ಬೆಲೆ ಗಗನಕ್ಕೇರಿದ್ದು ಗ್ರಾಹಕರು ದುಪಟ್ಟು ದರಕ್ಕೆ ಖರೀದಿಸುವಚಿತಾಗಿದೆ. ನಗರದ ತರಕಾರಿ ಉಸ್ಮಾನಿಯ ಮಾರುಕಟ್ಟೆಯಲ್ಲಿ ಬಿನ್ಸ್ ಕೆ.ಜಿ.ಗೆ 130 ರೂಪಾಯಿ , ಹಸಿಮೆಣಿಸಿನಕಾಯಿ ಕೆ.ಜಿ.ಗೆ 80 ರೂಪಾಯಿ, ಟೊಮೊಟೊ ಕೆ.ಜಿ.ಗೆ 80 ರೂಪಾಯಿ, 50 ನಿಂಬೆಹಣ್ಣಿಗೆ 100 ರೂಪಾಯಿ , ಹೂಕೋಸು ಒಂದಕ್ಕೆ 50 ರೂಪಾಯಿ , 10ಕೆ.ಜಿ. ಚವಳಿಕಾಯಿಗೆ 250 ರೂಪಾಯಿ , ಜವಾರಿ ಚವಳಿಕಾಯಿ 10 ಕೆ.ಜಿ.ಗೆ 400 ರೂಪಾಯಿ , ಡೊಣ್ಣಗಾಯಿ ಮೆಣಿಸಿನಕಾಯಿ 10 ಕೆ.ಜಿ.ಗೆ 400 ರೂಪಾಯಿ , 5 ಕೆ.ಜಿ.ಹಿರೇಕಾಯಿಗೆ 250 ರೂಪಾಯಿ ಇದೆ. ಈರುಳ್ಳಿ , ಆಲೂಗಡ್ಡೆ ಬೆಲೆ ಯಲ್ಲಿ ಗ್ರಾಹಕರಲ್ಲಿ ನಿರಾಳತೆ ಮೂಡಿಸುವ ಬೆಲೆ ಕಾಯ್ದುಕೊಂಡಿದೆ. ಆಲೂಗಡ್ಡೆ ಕೆ.ಜಿ.ಗೆ 50 ರೂಪಾಯಿ , ಕೆ.ಜಿ.ಗೆ ಕ್ಯಾರಟ್ 60 ರೂಪಾಯಿ ಬೆಲೆ ನಿಗದಿ ಮಾಡಲಾಗಿದೆ.

ಸೊಪ್ಪಿನ ದರ ಕೇಳಿದರೆ ಅಚ್ಚರಿಯಾಗಲಿದೆ. ಒಂದು ಕೊತ್ತಂಬರಿ ಸೊಪ್ಪಿಗೆ 20 ರೂಪಾಯಿ , 5 ಕಟ್ಟು ಪುಂಡಿಪಲ್ಲೆ ಸೊಪ್ಪಿಗೆ 25 ರೂಪಾಯಿ ಮುಟ್ಟಿದೆ. ಕಳೆದ ವಾರದ ಹಿಂದೆ 10 ರೂಪಾಯಿಗೆ 5 ಕಟ್ಟು ಮಾರುತ್ತಿದ್ದ ಮೆಂತೆ ಸೊಪ್ಪು ಒಂದು ಕಟ್ಟಿಗೆ 30 ರೂಪಾಯಿಗೆ ತಲುಪಿದೆ. ಹೀಗೆ ಪಾಲಕ್ , ಸಬ್ಬಸಗಿ ಸೊಪ್ಪುಗಳ ದರದಲ್ಲೂ ಹೆಚ್ಚಳವಾಗಿದೆ.
ಮಳೆ ಕೊರತೆಯಿಂದ ಪರದಾಡುವ ರೈತರು ತಮ್ಮ ಜಮೀನಿನಲ್ಲಿ ಅಷ್ಟಿಷ್ಟು ನೀರಿನಲ್ಲಿ ತರಕಾರಿ ಬೆಳೆದು ಮಾರುಕಟ್ಟೆಗೆ ತಂದರೂ ಸರಿಯಾದ ಬೆಲೆ ಸಿಗುತ್ತಿಲ್ಲ. ಇದರಿಂದ ತರಕಾರಿ ಬೆಲೆ ಏರಿಕೆಯಾಗಿದೆ. ಆದರೆ ಇದರಿಂದ ರೈತರಿಗೆ ಹೆಚ್ಚಿನ ಪ್ರಯೋಜನವಾಗಿಲ್ಲ. ಬೆಳೆದ ಬೆಳೆಗಳು ಹಾಳಾಗಿ ಹೆಚ್ಚಿನ ಬೆಲೆ ಸಿಕ್ಕರೂ ಲಾಭ ಮರೀಚಿಕೆಯಾಗಿದೆ. ಇರುವ ಬೆಳೆ ರಕ್ಷಿಸಿಕೊಳ್ಳಲು ಹರ ಸಾಹಸ ಮಾಡುವಂತಾಗಿದ್ದು ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಹೊರೆಯಾಗುತ್ತಿದೆ.
ಕಳೆದ ವರ್ಷ ಮುಂಗಾರು ಪ್ರವೇಶದ ಆರಂಭದಲ್ಲಿ ಹೆಚ್ಚಿನ ಮಳೆಯಾಗಿತ್ತು. ಆದರೆ ಈ ಬಾರಿ ಮಳೆ ಕೊರತೆಯಿಂದ ತರಕಾರಿ ಬೆಳೆದಿಲ್ಲ. ಹೀಗಾಗಿ ಮಾರುಕಟ್ಟೆಯಲ್ಲಿ ತರಕಾರಿ ಕೊರತೆಯಿಂದ ದರ ಹೆಚ್ಚಾಗಿದೆ ಎಂದು ರಾಯಚೂರು ಉಸ್ಮಾನಿಯ ತರಕಾರಿ ಮಾರುಕಟ್ಟೆ ಅಧ್ಯಕ್ಷ ಎನ್.ಮಹಾವೀರ ಹೇಳಿದರು.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications