ಗ್ರಾಮವಾಸ್ತವ್ಯ ಕನಿಷ್ಠ ವೆಚ್ಚದ ಕಾರ್ಯಕ್ರಮ: ಕುಮಾರಸ್ವಾಮಿ ಸ್ಪಷ್ಟನೆ
ರಾಯಚೂರು, ಜೂನ್ 26: ಕೋಟ್ಯಂತರ ಹಣವನ್ನು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ವೆಚ್ಚ ಮಾಡಲಾಗುತ್ತಿದೆ ಎಂಬ ವಿರೋಧಿಗಳ ದೂರಿಗೆ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು ನನ್ನ ಗ್ರಾಮವಾಸ್ತವ್ಯ ಅತ್ಯಂತ ಕನಿಷ್ಠ ವೆಚ್ಚದ ಕಾರ್ಯಕ್ರಮ ಎಂದು ಹೇಳಿದ್ದಾರೆ.
ರಾಯಚೂರಿನ ಮಾನ್ವಿ ತಾಲ್ಲೂಕಿನ ಕರೆಗುಡ್ಡದಲ್ಲಿ ಗ್ರಾಮ ವಾಸ್ತವ್ಯದಲ್ಲಿರುವ ಅವರು, ನನ್ನ ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಡಳಿತ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳುಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲು ನಿಯಮಾವಳಿಗಳಂತೆ ವ್ಯವಸ್ಥೆ ಮಾಡಿರುತ್ತಾರೆ. ಈ ವೆಚ್ಚವನ್ನು ಗ್ರಾಮವಾಸ್ತವ್ಯಕ್ಕೆ ಜೋಡಣೆ ಮಾಡುವುದು ಸರಿಯಲ್ಲ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಗ್ರಾಮವಾಸ್ತವ್ಯಕ್ಕೆ ಸಂಬಂಧಿಸಿದಂತೆ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದೆ ಎಂಬ ಆರೋಪಗಳಿಗೆ ಸ್ಪಷ್ಟೀಕರಣ ನೀಡಿರುವ ಮುಖ್ಯಮಂತ್ರಿಗಳು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಜನತಾದರ್ಶನ ನಡೆಸಲು ಜನರ ಅನುಕೂಲಕ್ಕಾಗಿ ವೇದಿಕೆ, ಆಸನಗಳ ವ್ಯವಸ್ಥೆ ಸೇರಿದಂತೆ ಇನ್ನೀತರ ವ್ಯವಸ್ಥೆ ಮಾಡಲಾಗಿರುತ್ತದೆ ಎಂದರು.

ಗ್ರಾಮವಾಸ್ತವ್ಯ ಇಲ್ಲದಿದ್ದರೂ ಶಿಷ್ಟಾಚಾರದ ಪ್ರಕಾರ ಕ್ರಮ ಜರುಗಿಸುತ್ತಾರೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ನಡೆಸಿಕೊಂಡು ಬಂದಿರುವ ಮತ್ತು ಹಿಂದಿನ ಮುಖ್ಯಮಂತ್ರಿಗಳು ನಡೆಸಿಕೊಂಡು ಬಂದ ಪರಂಪರೆ ಎಂದು ಅವರು ವಿವರಿಸಿದ್ದಾರೆ.
ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಶಾಲೆಯಲ್ಲಿ ನಿದ್ರಿಸಲು ಕನಿಷ್ಠ ಸೌಲಭ್ಯ, ಶಾಲೆಗೆ ಅನುಕೂಲವಾಗುವಂತೆ ಶೌಚಾಲಯ ನಿರ್ಮಿಸುವಂತೆ ಸೂಚಿಸಿದ್ದಾಗಿ ಅವರು ತಿಳಿಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications