Get Updates
Get notified of breaking news, exclusive insights, and must-see stories!

ಫೋಟೋ ತೆಗಿತೀನಿ ಅಂತೇಳಿ ಪತಿಯನ್ನೇ ನದಿಗೆ ಬೀಳಿಸಿದ ಪಾಪಿ ಪತ್ನಿ; ವಿಡಿಯೋ ಭಾರೀ ವೈರಲ್‌

ರಾಯಚೂರು, ಜುಲೈ 12: ಭಾರೀ ಮಳೆ ಮುಂದುವರೆದ ಹಿನ್ನೆಲೆ ರಾಜ್ಯದ ಹಲವೆಡೆ ಹಳ್ಳ-ಕೊಳ್ಳ, ನದಿಗಳು, ಜಲಪಾತಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇಂತಹ ಪ್ರದೇಶಗಳಲ್ಲಿ ಯುವಕ-ಯುವತಿಯರು ರೀಲ್ಸ್‌ ಮಾಡಿ ಪ್ರಾಣ ಕಳೆದುಕೊಂಡ ಘಟನೆಗಳು ನಡೆದಿವೆ. ಈ ನಡುವೆಯೇ ಫೋಟೋ ಕ್ಲಿಕ್ಕಿಸುವ ನೆಪದಲ್ಲಿ ಪತ್ನಿ ತನ್ನ ಪತಿಯನ್ನೇ ನದಿಗೆ ತಳ್ಳಿದ ವಿಚಿತ್ರ ಘಟನೆಯೊಂದು ನಡೆದಿದೆ.

ಇತ್ತೀಚಿನ ದಿನಗಳಲ್ಲಿ ಅನೈತಿಕ ಸಂಬಂಧ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆ ಗಂಡ ಹೆಂಡತಿಯನ್ನು ಕೊಚ್ಚಿ ಕೊಲೆ ಮಾಡಿದಂತಹ ಸುಮಾರು ಘಟನೆಗಳು ನಡೆದಿವೆ. ಆದರೆ, ಇದೀಗ ಫೋಟೋ ಶೂಟ್ ನೆಪದಲ್ಲಿ ಪತ್ನಿಯೇ ತನ್ನ ಪತಿಯನ್ನ ನದಿಗೆ ತಳ್ಳಿದ ಘಟನೆ ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದೆ. ಈ ದೃಶ್ಯ ಕಂಡಂತಹ ಅಲ್ಲಿನ ಸ್ಥಳೀಯರು ತಕ್ಷಣವೇ ಹಗ್ಗಗಳ ಸಹಾಯದಿಂದ ಆತನನ್ನ ರಕ್ಷಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Wife Pushes Husband into River During Photo Shoot video virl

ರಾಯಚೂರಿನ ಶಕ್ತಿನಗರ ನಿವಾಸಿ ತಾತಪ್ಪ ನೀರಿಗೆ ಬಿದ್ದ ಪತಿ ಆಗಿದ್ದು, ಅವರ ಪತ್ನಿ ಗದ್ದೆಮ್ಮ ಅವರೇ ನೀರಿಗೆ ತಳ್ಳಿದವರಾಗಿದ್ದಾರೆ. ನೀರಿಗೆ ಬಿದ್ದ ತಕ್ಷಣ ನದಿಯಲ್ಲಿ ಈಜಿ ಕಲ್ಲು ಬಂಡೆಯ ಮೇಲೆ ನಿಂತು ಯಾರಾದರೂ ಇದ್ದೀರಾ.. ಕಾಪಾಡಿ.. ಕಾಪಾಡಿ ಎಂದು ಕೂಗಾಡಿದ್ದಾನೆ. ಆಗ ಬ್ರಿಡ್ಜ್ ಕಂ ಬ್ಯಾರೇಜ್ ಮಾರ್ಗದಲ್ಲಿ ಹೊರಟಿದ್ದ ಬುಲೆರೋ ವಾಹನದಲ್ಲಿದ್ದವರು ಮತ್ತು ಕೆಬಿಜೆಎನ್‌ಎಲ್ ಸಿಬ್ಬಂದಿ, ಸ್ಥಳೀಯರು ನದಿಗೆ ಹಗ್ಗ ಎಸೆದು ತಾತಪ್ಪ ಅವರನ್ನು ರಕ್ಷಣೆ ಮಾಡಿದ್ದಾರೆ.

ಇನ್ನು ನದಿಯಿಂದ ಹೊರಗೆ ಬಂದ ಪತಿ ತನ್ನ ಪತ್ನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಫೋನ್‌ ಕರೆ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಕಳೆದೆರಡು ದಿನಗಳ ಹಿಂದೆ ನಡೆದಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಪತಿಯ ಆರೋಪವೇನು?: ಯಾದಗಿರಿಯ ಈ ದಂಪತಿಗಳು ಕಳೆದ ಏಪ್ರಿಲ್‌ 10ರಂದು ವಿವಾಹ ಆಗಿದ್ದರು. ಮದುವೆಯಾಗಿ ಮೂರೇ ತಿಂಗಳಿನಲ್ಲಿ ಸಂಸಾರದಲ್ಲಿ ಬಿರುಕು ಕಾಣಿಸಿಕೊಂಡು, ಜಗಳ ಆಡುತ್ತಿದ್ದರು. ಆ ಜಗಳವನ್ನೇ ಕಾರಣವಾಗಿಕೊಂಡು ಈ ಕೆಲಸ ಮಾಡಿದ್ದಾಳೆ ಎಂದು ತಾತಪ್ಪ ಆರೋಪ ಮಾಡಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ಪತಿ ತಾತಪ್ಪ, ಪತ್ನಿಯನ್ನು ನಂಬಿ ಫೋಟೋ ತೆಗೆಸಿಕೊಳ್ಳಲು ನಿಂತುಕೊಂಡಿದ್ದೆ. ಆದರೆ ಆಕೆ ನನ್ನನ್ನು ನದಿಗೆ ತಳ್ಳಿದಳು ಎಂದು ತಾತಪ್ಪ ಪತ್ನಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಪತ್ನಿ ನಾನು ಅವರನ್ನು ತಳ್ಳಿಲ್ಲ. ಅವರೇ ಕಾಲು ಜಾರಿ ನದಿಗೆ ಬಿದ್ದರು ಎಂದು ಹೇಳುವ ಮೂಲಕ ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾರೆ. ಸದ್ಯ ಈ ಪ್ರಕರಣ ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಇಂತಹ ಘಟನೆಗಳು ನಡೆದಿರುವುದು ಇದೇ ಮೊದಲೇನಲ್ಲ. ಹಿಂದೆಯೂ ಸಹ ಸಾಕಷ್ಟು ನಡೆದಿವೆ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಹೆಚ್ಚಾಗಿ ಇಂತಹ ಘಟನೆಗಳು ಸಂಭವಿಸುತ್ತಲೇ ಇರುತ್ತವೆ. ಯಾವುದೋ ವಿಚಾರಕ್ಕೆ ಗಂಡ-ಹೆಂಡತಿ ಜಗಳ ಮಾಡಿಕೊಂಡು ಕೊನೆಗೆ ಕೊಲೆಯಲ್ಲಿ ಅಂತ್ಯವಾದ ಘಟನೆಗಳು ನಡೆದಿವೆ. ಇನ್ನೂ ರಾಯಚೂರಿನಲ್ಲಿ ನಡೆದಿರುವ ಈ ವಿಚಿತ್ರ ಘಟನೆಗೆ ನಿಖರ ಕಾರಣ ಏನೆಂದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+