ಕಾರ್ಮಿಕರಿಗೆ ನೆರವಾದ ನರೇಗಾ; ರೈತನ ಮೊಗದಲ್ಲೂ ನಗು
ರಾಯಚೂರು, ಜುಲೈ 20; ಕೋವಿಡ್ ಕಾಲದಲ್ಲಿ ನೂರಾರು ಜನರು ಮಹಾನಗರದಲ್ಲಿ ಕೆಲಸ ಕಳೆದುಕೊಂಡಿದ್ದಾರೆ. ಗ್ರಾಮಗಳಿಗೆ ವಾಪಸ್ ಆದ ಅಕುಶಲ ಕಾರ್ಮಿಕರ ನೆರವಿಗೆ ನರೇಗಾ ಯೋಜನೆ ಸಹಕಾರಿಯಾಗಿದೆ. ನರೇಗಾ ಅಡಿ ರೈತರು ಸಹ ಹಲವಾರು ಕಾಮಗಾರಿಗಳನ್ನು ಮಾಡಿಸಿಕೊಂಡಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಂಡು ದುಡಿಯುವ ಕೈಗಳಿಗೆ ಕೆಲಸ ನೀಡಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಯೋಜನೆಯಡಿ ದನದಕೊಟ್ಟಿಗೆ, ಕೃಷಿಹೊಂಡ, ಮನೆ ನಿರ್ಮಾಣ, ಕೆರೆ-ಕಾಲುವೆ ಹೂಳೆತ್ತುವುದು ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲಾಗಿದೆ.
ರಾಯಚೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ 179 ಗ್ರಾಮ ಪಂಚಾಯತಿಗಳಲ್ಲಿ ಹಲವರು ಜಲ ಸಂರಕ್ಷಣಾ ಕಾಮಗಾರಿ ಕೈಗೊಳ್ಳಲಾಗಿದೆ. ಈ ಮೂಲಕ ಮುಂಗಾರು ಮಳೆ ಆರಂಭವಾಗುವ ಸಮಯದಲ್ಲಿಯೇ ಕೃಷಿ ಚಟುವಟಿಕೆಗಳಿಗೆ ಇನ್ನಷ್ಟು ಬಲ ತುಂಬಲಾಗಿದೆ. ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ನಡೆಸುವಾಗ ಕೋವಿಡ್ -19 ಮಾರ್ಗಸೂಚಿಗಳನ್ನು ಸಹ ಪಾಲನೆ ಮಾಡಲಾಗುತ್ತಿದೆ.

2021-22ನೇ ಸಾಲಿನ ಕಾಮಗಾರಿಗಳು
ಕೋವಿಡ್ ಸಮಯದಲ್ಲಿ ರಾಯಚೂರು ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಲವು ಕಾಮಗಾರಿಗಳನ್ನು ಮಾಡಲಾಗಿದೆ. 55,84,111 ಮಾನವ ದಿನಗಳ ಕೆಲಸಗಳನ್ನು ನೀಡಲಾಗಿದೆ.

ಕೃಷಿಕರಿಗೆ ಸಹಕಾರ
ನರೇಗಾ ಯೋಜನೆಯಡಿ ರೈತರ ಅನುಕೂಲಕ್ಕಾಗಿ 3,547 ಕೃಷಿ ಹೊಂಡ, 14,454 ಬದು ನಿರ್ಮಾಣ, 64 ಗೋಕಟ್ಟೆ ಹಾಗೂ 12 ಕಲ್ಯಾಣಿಗಳ ನಿರ್ಮಾಣ ಮಾಡಲಾಗಿದೆ. ಈ ಮೂಲಕ ಅಂತರ್ಜಲ ಅಭಿವೃದ್ಧಿಗಾಗಿ ಹಾಗೂ ಪ್ರವಾಹ ನಿಯಂತ್ರಣ, ಮಣ್ಣಿನ ಸವಕಳಿ ತಡೆಗೆ ಸಹಾಯಕವಾಗಿದೆ. ಬದು ನಿರ್ಮಾಣದಿಂದ ಪ್ರತಿ ಎಕರೆಯಲ್ಲಿ 2 ಲೀಟರ್ ಹಾಗೂ ಪ್ರತಿ ಕೃಷಿ ಹೊಂಡದಿಂದ 1.23 ಲಕ್ಷ ಲೀಟರ್ ನೀರಿನ ಸಂಗ್ರಹವಾಗಲಿದೆ.

ಬದು ನಿರ್ಮಾಣದ ಉಪಯೋಗ
ರೈತರು ಕೃಷಿಹೊಂಡ, ಬದುವಿನ ಮೇಲೆ ಹುರಳಿ, ತೊಗರಿ, ಕುಂಬಳ, ಮೆಣಸಿನಕಾಯಿ, ಟೊಮೆಟೋ, ಅಳಸಂದೆ, ತಿಂಗಳ ಹುರಳಿ, ಅವರೆ ಕಾಯಿ, ಈರುಳ್ಳಿ ಬೆಳೆಯಬಹುದು. ಇದರಿಂದಾಗಿ ಮನೆಗೆ ಅಗತ್ಯ ತರಕಾರಿ ಕೊಳ್ಳುವುದು ಸಹ ತಪ್ಪಲಿದೆ. ಅಧಿಕ ಉತ್ಪಾದನೆಯ ತರಕಾರಿ ಮಾರಾಟದಿಂದ ರೈತರಿಗೆ ಆದಾಯವೂ ದೊರೆಯಲಿದೆ. ಹುಲ್ಲಿನ ಬೀಜ ಬಿತ್ತನೆಯಿಂದ ಜಾನುವಾರುಗಳಿಗೆ ಪೌಷ್ಠಿಕ ಹಸಿ ಮೇವು ಪೂರೈಕೆ ಮಾಡಲು ಸಹ ಸಾಧ್ಯವಾಗುತ್ತದೆ.

ಫಲಾನುಭವಿ ರೈತರ ಅನುಭವ
ಗೋವಿಂದ ಎನ್ನುವ ರೈತ ನರೇಗಾ ಯೋಜನೆಯಿಂದ ಆದ ಲಾಭದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. "ಯೋಜನೆಯಡಿ ಮಾನವಿ ತಾಲೂಕಿನ ಆರೋಲಿ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿ 7 ಎಕರೆ ಕೃಷಿ ಜಮೀನಿಗೆ ಬದು ನಿರ್ಮಾಣ ಮಾಡಿಕೊಂಡಿದ್ದು, ಇತೀಚಿಗೆ ಉತ್ತಮ ಮಳೆಯಾಗಿ ನೀರು ಸಂಗ್ರಣೆಯಾಗಿದೆ. ಈಗಾಗಲೇ ಕೃಷಿ ಚಟುವಟಿಕೆ ಆರಂಭ ಮಾಡಿದ್ದು, ಬದುಗಳಲ್ಲಿ ತರಕಾರಿ ಬೆಳೆ ತಾಜಾ ಹುರಳಿ, ತೊಗರಿ, ಕುಂಬಳ, ಮೆಣಸಿನಕಾಯಿ, ಟೊಮೆಟೋ, ಹಿರೇಕಾಯಿ ಮುಂತಾದವುಗಳನ್ನು ಬಿತ್ತನೆ ಮಾಡಲಾಗಿದೆ" ಎಂದು ಹೇಳಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications