Get Updates
Get notified of breaking news, exclusive insights, and must-see stories!

Raichur: 2 ಎಕರೆ ಜಮೀನಿನಲ್ಲಿ ತೋಟಗಾರಿಕೆ, ಮೀನುಗಾರಿಕೆ: ಮಾದರಿ ಯುವಕ

ರಾಯಚೂರು ಮೇ 21: ಮಳೆಯಾಶ್ರಿತ ಬೆಳೆಗಳನ್ನು ಬೆಳೆಯುತ್ತಿದ್ದ ಜಮೀನಿನಲ್ಲಿ ಮೀನುಗಾರಿಕೆ, ತೋಟಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಯುವಕ ಸೈಯದ್ ಅಕ್ರಮ್ ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ತೊಗರಿ, ಹತ್ತಿ ಬೆಳೆಯಲಾಗುತ್ತಿದ್ದ ಸೈಯದ್ ಅಕ್ರಮ್ ಅವರ ಜಮೀನು ಈಗ ಪಪ್ಪಾಯಿ ತೋಟವಾಗಿ ಕಂಗೊಳಿಸುತ್ತಿದೆ. ಸೈಯದ್ ಅಕ್ರಮ್ ತಮ್ಮ ಒಟ್ಟು 15ಎಕರೆ ಜಮೀನಿನ ಪೈಕಿ ಎರಡು ಎಕರೆ ಜಮೀನಿನಲ್ಲಿ ತೋಟಗಾರಿಕೆ ಹಾಗೂ ಮೀನುಗಾರಿಕೆ ಆರಂಭಿಸಿದ್ದಾರೆ.

Young man aiming to grow mango dragon fruit butter fruit through mixed farming

ಸೈಯದ್ ಅಕ್ರಮ್ ಮೂಲತಃ ಗೋವಾದಲ್ಲಿ ಸುಮಾರು ಒಂಬತ್ತು ವರ್ಷಗಳ ಕಾಲ ಹೋಟೆಲ್ ಮತ್ತು ರೆಸಾರ್ಟ್ ಗಳ ನಿರ್ವಹಣೆ ಗುತ್ತಿಗೆ, ಪ್ರವಾಸೋದ್ಯಮ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದರು.

ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಿಂದಾಗಿ ಸ್ವಗ್ರಾಮಕ್ಕೆ ಮರಳಿದ್ದರು. ಕಳೆದ ವರ್ಷ ತಮ್ಮ ಎರಡು ಎಕರೆ ಜಮೀನಿನಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಸಾಮಾಗ್ರಿ ಹಾಗೂ ಕೂಲಿ ವೆಚ್ಚ ಪಡೆದು 1,200 ಪಪ್ಪಾಯಿ ಸಸಿಗಳನ್ನು ನೆಡುವ ಮೂಲಕ ತೋಟಗಾರಿಕೆ ಬೇಸಾಯ ಆರಂಭಿಸಿದ್ದರು.

ತೋಟಗಾರಿಕೆ ಇಲಾಖೆಯ ನೆರವಿನಿಂದ ಹನಿ‌ ನೀರಾವರಿ ಸೌಲಭ್ಯ ಮತ್ತು ಸ್ವಂತ ಕೊಳವೆ ಬಾವಿಯಿಂದ ನೀರು ಪಡೆದು ಈಗ ಸಮೃದ್ಧವಾದ ಪಪ್ಪಾಯಿ ಹಣ್ಣುಗಳನ್ನು ಬೆಳೆದಿದ್ದಾರೆ. 'ಈ ವರ್ಷ ಬೇಸಿಗೆಯ ಅತಿಯಾದ ತಾಪಮಾನ, ಈಚೆಗೆ ಸುರಿದ ಮಳೆ, ಗಾಳಿಯಿಂದಾಗಿ ಪಪ್ಪಾಯಿ ಹಣ್ಣು ಮತ್ತು ಗಿಡಗಳು ಹಾನಿಗೀಡಾಗಿವೆ. ಸುಮಾರು10-15ಟನ್ ಫಸಲು ಬರುವ ನಿರೀಕ್ಷೆಯಿದೆ' ಎಂದು ಸೈಯದ್ ಅಕ್ರಮ್ ಹೇಳುತ್ತಾರೆ.

Young man aiming to grow mango dragon fruit butter fruit through mixed farming

ಒಂದು ಸಾವಿರ ಚದುರ ಅಡಿಯ ಕೆರೆ‌ ನಿರ್ಮಿಸಿ ರೂಪ್ ಚಂದ್ ತಳಿಯ ಮೀನುಗಳನ್ನು ಸಾಕಿ ಮೀನುಗಾರಿಕೆಯನ್ನು ಅವರು ಆರಂಭಿಸಿದ್ದಾರೆ.

ಮುಂದಿನ ದಿನಗಳಲ್ಲಿ ಮಿಶ್ರ ಬೆಳೆ ಬೇಸಾಯದ ಮೂಲಕ ಮಾವು, ಡ್ರ್ಯಾಗನ್ ಫ್ರೂಟ್, ಸೇಬು , ಬಟರ್ ಫ್ರೂಟ್ ಬೆಳೆಯುವ ಉದ್ದೇಶ ಹೊಂದಿದ್ದಾರೆ. ಕುರಿ ಹಾಗೂ ಕೋಳಿ ಸಾಕಾಣಿಕೆ ಜೊತೆಗೆ ಹದಿನೈದು ಎಕರೆ ಜಮೀನಿನಲ್ಲಿ ಕೃಷಿ ಪ್ರವಾಸೋದ್ಯಮ ಕೇಂದ್ರ ಸ್ಥಾಪಿಸುವ ಮಹತ್ವಾಕಾಂಕ್ಷೆ ಹೊಂದಿರುವುದಾಗಿ ಸೈಯದ್ ಅಕ್ರಮ್ ಹೇಳುತ್ತಾರೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಇಂತಹ ಯುವಕರಿಗೆ ಹೆಚ್ಚಿನ ನೆರವು, ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂಬುದು ಸ್ಥಳೀಯರ ಮನವಿ.

ಸರ್ಕಾರದ ವತಿಯಿಂದ ತಾಲ್ಲೂಕು, ಹೋಬಳಿ ಮಟ್ಟದಲ್ಲಿ ಹಣ್ಣುಗಳ ಖರೀದಿ ಕೇಂದ್ರಗಳನ್ನು ಆರಂಭಿಸುವ ಮೂಲಕ ರೈತರಿಗೆ ಮಧ್ಯವರ್ತಿಗಳಿಂದಾಗುವ ವಂಚನೆ ತಪ್ಪಿಸಬೇಕು ಎಂದು ಪಪ್ಪಾಯಿ ತೋಟದ ಮಾಲೀಕ ಸೈಯದ್ ಅಕ್ರಮ್ ಕುರ್ಡಿ ಒತ್ತಾಯಿಸಿದರು.

ತೋಟಗಾರಿಕೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಸೈಯದ್ ಅಕ್ರಮ್ ಅವರಿಗೆ ಮುಂದಿನ ವರ್ಷ ಡ್ರ್ಯಾಗನ್ ಫ್ರೂಟ್ ಬೆಳೆಯಲು ನರೇಗಾ ಯೋಜನೆ ಅಡಿಯಲ್ಲಿ ಸಾಮಾಗ್ರಿ ಹಾಗೂ ಕೂಲಿ ವೆಚ್ಚ ನೀಡಲಾಗುವುದು ಎಂದು ಸಹಾಯಕ ತೋಟಗಾರಿಕೆ ಅಧಿಕಾರಿ ವಿಶಾಲ್ ಕುರ್ಡಿ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+