80 ಕೋಟಿ ವೆಚ್ಚದಲ್ಲಿ ಶಿವಕುಮಾರ ಶ್ರೀಗಳ ಹುಟ್ಟೂರು ಅಭಿವೃದ್ಧಿ
ರಾಮನಗರ, ಏಪ್ರಿಲ್ 2; ತ್ರಿವಿಧ ದಾಸೋಹಿ, ಲಿಂಗೈಕ್ಯ ಡಾ. ಶಿವಕುಮಾರ ಮಹಾಸ್ವಾಮಿಗಳ ಹುಟ್ಟೂರು ಅಭಿವೃದ್ಧಿಗೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕರ್ನಾಟಕ ಸರ್ಕಾರ ಗ್ರಾಮದ ಅಭಿವೃದ್ಧಿಗೆ 80 ಕೋಟಿ ರೂ. ಬಿಡುಗಡೆ ಮಾಡಿದೆ.
ರಾಮನಗರ ಜಿಲ್ಲೆಯಲ್ಲಿರುವ ವೀರಾಪುರ ಗ್ರಾಮದಲ್ಲಿ ಶ್ರೀಗಳ 111 ಅಡಿ ಎತ್ತರದ ಪುತ್ಥಳಿ ಹಾಗೂ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡಿದೆ. ಶುಕ್ರವಾರ ಕೆಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ.
ವೀರಾಪುರ ಗ್ರಾಮದ ಸಮುದಾಯ ಭವನ, ದೇವಾಲಯ, ಶ್ರೀ ಗಳ ಹಳೆಯ ಮನೆ ಅಭಿವೃದ್ಧಿ ಸೇರಿದಂತೆ ಸುಮಾರು 80 ಕೋಟಿ ವೆಚ್ಚದ ಅಭಿವೃದ್ಧಿ ಕಾಮಾಗಾರಿಗೆ ರಾಮನಗರ ಜಿಲ್ಲಾಡಳಿತ ಚಾಲನೆಯನ್ನು ನೀಡಿದೆ.

ರಾಮನಗರ ಜಿಲ್ಲಾಡಳಿತ ಮತ್ತು ಮಾಗಡಿ ತಾಲೂಕು ಅಧಿಕಾರಿಗಳ ತಂಡ ಉದ್ದೇಶಿತ ಅಭಿವೃದ್ಧಿ ಕಾಮಾಗಾರಿಗಳ ವೀಕ್ಷಣೆ ನಡೆಸಿತು. ವೀರಾಪುರ ಗ್ರಾಮದ ಪೂರ್ವದಲ್ಲಿರುವ ಬೆಟ್ಟದ ಮೇಲೆ ಶ್ರೀ ಗಳ 111 ಅಡಿ ಪುತ್ಥಳಿ ಹಾಗೂ ವಸ್ತು ಸಂಗ್ರಾಹಲಾಯ ನಿರ್ಮಾಣವಾಗಲಿದೆ.
ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಮಾತನಾಡಿ, "ವೀರಾಪುರದ ಸರ್ವಾಂಗೀಣ ಅಭಿವೃದ್ಧಿ ಜೊತೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮಿಜಿ ಹುಟ್ಟೂರು, ರಾಮನಗರ ತಾಲ್ಲೂಕಿನ ಬಾನಂದೂರು ಸಹ ಅಭಿವೃದ್ಧಿಯಾಗಲಿ, ಅದಷ್ಟೂ ಬೇಗ ಜಿಲ್ಲೆಯ ಇಬ್ಬರು ಸಂತರ ಗ್ರಾಮಗಳು ಮಾದರಿ ಗ್ರಾಮವಾಗಲಿ" ಎಂದು ಆಶಿಸಿದರು.
"ಸ್ವಾಮೀಜಿಗಳ 111 ಅಡಿ ಎತ್ತರದ ಪುತ್ಥಳಿ ಕಾಮಗಾರಿ ಸ್ಥಳದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಎಲ್ಲಾ ಸುಸೂತ್ರವಾಗಿ ಕಾರ್ಯಕಲಾಪ ನಡೆದರೇ, ಇನ್ನೂ ಎರಡು-ಮೂರು ವರ್ಷಗಳಲ್ಲಿ ಕಾಯಕ ಯೋಗಿಯ ಮೂರ್ತಿ ಜನರ ದರ್ಶನಕ್ಕೆ ಲಭ್ಯವಾಗಲಿದೆ" ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಹೇಳಿದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications