ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆಯ ವೈದ್ಯ ಹಾಗೂ 3 ಸಿಬ್ಬಂದಿಗೆ ಕೊರೊನಾ ಸೋಂಕು
ರಾಮನಗರ, ಜುಲೈ 19: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ 3 ಮಂದಿ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದ್ದು, ಸರ್ಕಾರಿ ಆಸ್ಪತ್ರೆಯನ್ನು 2 ದಿನ ಸೀಲ್ ಡೌನ್ ಮಾಡಲಾಗಿದೆ.
Recommended Video
ಸರ್ಕಾರಿ ಆಸ್ಪತ್ರೆ ಓರ್ವ ವೈದ್ಯ ಹಾಗೂ 3 ಜನ ಸಿಬ್ಬಂದಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಆಸ್ಪತ್ರೆಯ ಖ್ಯಾತ ವೈದ್ಯ, ಆಸ್ಪತ್ರೆಯ ಆ್ಯಂಬುಲೆನ್ಸ್ ಡ್ರೈವರ್, ಡಾಟಾ ಎಂಟ್ರಿಯ ಓರ್ವ ಹಾಗೂ ಕ್ಲರ್ಕ್ ಗೆ ಕೊರೊನಾ ಸೋಂಕು ಧೃಡಪಟ್ಟಿದೆ.
4 ತಿಂಗಳ ನಂತರ ಕಾರ್ಯಾರಂಭ ಮಾಡಿತು ರಾಮನಗರ ಜಿಲ್ಲಾ ಕಾರಾಗೃಹ
ಸಿಬ್ಬಂದಿಗೆ ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯನ್ನು ಶನಿವಾರ ಮತ್ತು ಭಾನುವಾರ ಸೀಲ್ ಡೌನ್ ಮಾಡಿದ್ದು, ಆಸ್ಪತ್ರೆಯನ್ನು ಸಂಪೂರ್ಣ ಸ್ಯಾನಿಟೈಸರ್ ಮಾಡಿ ಸೋಮವಾರದಿಂದ ಎಂದಿನಂತೆ ಆಸ್ಪತ್ರೆ ಕಾರ್ಯನಿರ್ವಹಿಸಲಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಶನಿವಾರ 14 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಚನ್ನಪಟ್ಟಣ- 3, ಮಾಗಡಿ- 5, ಕನಕಪುರ-5 ಹಾಗೂ ರಾಮನಗರ -1 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉಡುಪಿಯಲ್ಲಿ 1 ಸಾವು, ರಾಮನಗರದಲ್ಲಿ ಇಬ್ಬರು ವೈದ್ಯರಿಗೆ ಕೊರೊನಾ ಸೋಂಕು
ಜಿಲ್ಲೆಯಲ್ಲಿ ಶನಿವಾರ 30 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 428 ಕ್ಕೆ ಏರಿಕೆಯಾಗಿದೆ.