ರೈತರ ಪ್ರತಿಭಟನೆ: ಸಂಗಮ ಮತ್ತು ಮೇಕೆದಾಟು ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ
ಮೇಕೆದಾಟು ಅಣೆಕಟ್ಟು ಯೋಜನೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಉದ್ದೇಶಿತ ಮೇಕೆದಾಟು ಅಣೆಕಟ್ಟು ಯೋಜನೆಯ ಸ್ಥಳದಲ್ಲಿ ವಿವಿಧ ಸಂಘಟನೆಗಳು ಭೂಮಿ ಪೂಜೆ ಹಮ್ಮಿಂಡಿದೆ. ಈ ಹಿನ್ನೆಲೆಯಲ್ಲಿ ಸಂಗಮ ಮತ್ತು ಮೇಕೆದಾಟು ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ರಾಮನಗರ, ಫೆಬ್ರವರಿ 1: ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಸೇರಿದಂತೆ ಕನ್ನಡ ಪರ ಸಂಘಟನೆಗಳು ಮೇಕೆದಾಟು ಅಣೆಕಟ್ಟು ಯೋಜನೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಉದ್ದೇಶಿತ ಮೇಕೆದಾಟು ಅಣೆಕಟ್ಟು ಯೋಜನೆಯ ಸ್ಥಳದಲ್ಲಿ ಭೂಮಿ ಪೂಜೆ ಹಮ್ಮಿಕೊಂಡಿದೆ. ಈ ಹಿನ್ನಲೆಯಲ್ಲಿ ಕನಕಪುರ ತಾಲೂಕು ಆಡಳಿತ ಮೇಕೆದಾಟು ಬಳಿ ಎರಡು ದಿನ ನಿಷೇಧಾಜ್ಞೆಯನ್ನು ಜಾರಿಮಾಡಿದೆ.
ಕನಕಪುರ ತಾಲೂಕು ಉಯ್ಯಂಬಳ್ಳಿ ಹೋಬಳಿಯಲ್ಲಿರುವ ಸಂಗಮ ವನ್ಯಜೀವಿ ವಲಯದ ವ್ಯಾಪ್ತಿಯಲ್ಲಿ ಹಾದು ಹೋಗಿರುವ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಪ್ರದೇಶದಲ್ಲಿ ಅಣೆಕಟ್ಟು ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಜೆಸಿಬಿ, ಟ್ರ್ಯಾಕ್ಟರ್ಗಳೊಂದಿಗೆ ಬಾರಿ ಸಂಖ್ಯೆಯಲ್ಲಿ ವಿವಿಧ ಸಂಘಟನೆಗಳ ಹೋರಾಟಗಾರರು ಅರಣ್ಯ ಪ್ರವೇಶ ಮಾಡುವ ಹಿನ್ನಲೆಯಲ್ಲಿ ಅಧಿಕಾರಿಗಳು ನಿಷೇಧಾಜ್ಞೆಯನ್ನು ಜಾರಿಮಾಡಿದ್ದಾರೆ.
ತಹಶೀಲ್ದಾರ್ ಆದೇಶದಲ್ಲಿರುವ ಅಂಶವೇನು..?
'ಸಾತನೂರು ಪೊಲೀಸ್ ಠಾಣೆಯ , ಆರಕ್ಷಕ ಉಪನಿರೀಕ್ಷಕರ ಕೋರಿಕೆಯನ್ನು ಪರಿಗಣಿಸಿ, ಸುರಕ್ಷತಾ ದೃಷ್ಟಿಯಿಂದ ಕನಕಪುರ ತಾಲೂಕು ದಂಡಾಧಿಕಾರಿಯಾದ ಹೆಚ್.ಶಿವಕುಮಾರ್ ಆದ ನಾನು, ಪರಿಸ್ಥಿತಿಯನ್ನು ಎಲ್ಲಾ ರೀತಿಯಿಂದ ಅವಲೋಕನ ಮಾಡಿ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973 ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕನಕಪುರ ತಾಲೂಕು ಉಯ್ಯಂಬಳ್ಳಿ ಹೋಬಳಿ ಮೇಕೆದಾಟು, ಸಂಗಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಕಾನೂನು ಪಾಲನೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದಿನಾಂಕ:31/01/2023 ರಂದು ಬೆಳಿಗ್ಗೆ 6.00 ಗಂಟೆಯಿಂದ ದಿನಾಂಕ: 01/02/2023 ರ ಮಧ್ಯರಾತ್ರಿ 12.00 ಗಂಟೆಯವರೆಗೆ (ಎರಡು ದಿನಗಳ ಕಾಲ) ಸಿ.ಆರ್.ಪಿ.ಸಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿರುತ್ತೇನೆ' ಎಂದು ಪ್ರಕಟಣೆ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜೊತೆಗೆ ಕನ್ನಡ ಪರ ಹೋರಾಟಗಾರರು ಜೆಸಿಬಿ, ಟ್ರ್ಯಾಕ್ಟರ್ ವಾಹನಗಳೊಂದಿಗೆ ಸುಮಾರು 1 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಮೇಕೆದಾಟು ಪ್ರವೇಶ ಮಾಡಿ, ಮೇಕೆದಾಟು ಅಣೆಕಟ್ಟು ಯೋಜನೆಗೆ ಗುದ್ದಲಿ ಪೂಜೆಗೆ ಕರೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಸೇರಿದಂತೆ ಕನ್ನಡ ಪರ ಸಂಘಟನೆಗಳು ಉದ್ದೇಶಿತ ಮೇಕೆದಾಟು ಸ್ಥಳದಲ್ಲಿ ಗುದ್ದಲಿ ಪೂಜೆ ಮಾಡುವ ವೇಳೆಯಲ್ಲಿ ನಡೆಯಬಹುದಾದ ಅಹಿತಕರ ಘಟನೆಗಳನ್ನು ತಡೆಯುವ ಸಲುವಾಗಿ ಮುಂಜಾಗ್ರತೆ ಕ್ರಮವಾಗಿ ಸಂಗಮ ಮತ್ತು ಮೇಕೆದಾಟು ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡುವಂತೆ ತಾಲೂಕು ಆಡಳಿತಕ್ಕೆ ಪೊಲೀಸರು ಮನವಿ ಮಾಡಿಕೊಂಡಿದ್ದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications