ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಬ್ಬರ ನಡುವಿನ ತಿಕ್ಕಾಟದಲ್ಲಿ ಮಣ್ಣು ಪಾಲಾಯ್ತು 1500 ಲೀಟರ್ ಹಾಲು

By ರಾಮನಗರ ಪ್ರತಿನಿಧಿ
|
Google Oneindia Kannada News

ಕನಕಪುರ, ನವೆಂಬರ್ 18: ಹಾಲಿನ ಡೈರಿ ಕಾರ್ಯದರ್ಶಿ ಮತ್ತು ಅಧ್ಯಕ್ಷರು ಸೇರಿ ಹಾಲು ಉತ್ಪಾದಕರ ವಿರುದ್ಧ ರಾಜಕೀಯ ಮಾಡಿ ಎರಡು ದಿನಗಳ ಕಾಲ ಹಾಲನ್ನು ಡೈರಿಗೆ ಹಾಕಿಸಿಕೊಳ್ಳದೇ ಸರಿಸುಮಾರು 1500 ಲೀಟರ್ ಹಾಲನ್ನು ಮಣ್ಣುಪಾಲು ಮಾಡಿರುವ ಘಟನೆ ಅಗರ ಗ್ರಾಮದಲ್ಲಿ ನಡೆದಿದೆ.

ಕಳೆದ ಎರಡು ದಿನಗಳಿಂದ ಹಾಲಿನ ಡೈರಿಗೆ ಬೀಗ ಹಾಕಿ ಗ್ರಾಮಸ್ಥರು ತಂದಿದ್ದ ಹಾಲನ್ನು ನಿರಾಕರಿಸಿದ ಡೈರಿ ವ್ಯವಸ್ಥಾಪಕನ ಕ್ರಮ ಖಂಡಿಸಿ ಇಂದು ಗ್ರಾಮದ ಜನರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪೊಲೀಸರ ಸೋಗಿನಲ್ಲಿ ಪ್ರೇಮಿಗಳಿಂದ ದೋಚುತ್ತಿದ್ದ ರಘು ಅಂದರ್ಪೊಲೀಸರ ಸೋಗಿನಲ್ಲಿ ಪ್ರೇಮಿಗಳಿಂದ ದೋಚುತ್ತಿದ್ದ ರಘು ಅಂದರ್

ಅಗರ ಗ್ರಾಮದ ಹಾಲಿನ ಡೈರಿ ಕಾರ್ಯದರ್ಶಿ ವೆಂಕಟಾಚಲಾ ಹಾಗೂ ಡೈರಿ ಅಧ್ಯಕ್ಷ ಕೆಂಪೇಗೌಡ ಎಂಬುವವರು ಎರಡು ದಿನಗಳಿಂದ ಹಾಲು ಉತ್ಪಾದಕರು ತಂದಿದ್ದ ಹಾಲನ್ನು ಹಾಕಿಸಿಕೊಳ್ಳದೇ ಸರಿ ಸುಮಾರು 1500 ಲೀಟರ್‌ಗೂ ಹೆಚ್ಚು ಹಾಲನ್ನು ಮಣ್ಣುಪಾಲು ಮಾಡಿದ್ದನ್ನು ರೈತ ಸಂಘಗಳು ತೀವ್ರವಾಗಿ ಖಂಡಿಸಿದ ನಂತರ ಸಂಜೆ ಹಾಲನ್ನು ಹಾಕಿಸಿಕೊಂಡಿದ್ದರು.

1500 Liters Of Milk Wasted In Fight Between Two In Ramanagar

ಆದರೆ ಮುಂದೆ ಇದೇ ಸಮಸ್ಯೆ ಮತ್ತೆ ಎದುರಾಗಬಾರದು ಎಂದು ಎಚ್ಚರಿಸುವಂತೆ ಇಂದು ಗ್ರಾಮದ ಜನರು ಹಾಗೂ ಹಾಲು ಉತ್ಪಾದಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ವಿಜಯ್‌ ಅವರಿಗೆ ಈ ಕೂಡಲೇ ತನಿಖೆ ನಡೆಸಬೇಕೆಂದು ಮನವಿ ಮಾಡಿದರು. ಹಾಗೆಯೇ ಎರಡು ದಿನಗಳಲ್ಲಿ ಹಾಲನ್ನು ಡೈರಿಗೆ ಹಾಕಿಸಿಕೊಳ್ಳದೇ ವ್ಯರ್ಥ ಮಾಡಿರುವುದಕ್ಕೆ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ.

English summary
The incident took place in Agara village where the dairy secretary and the president, didnt took milk from villages for two days and wasted approximately 1500 liters of milk in ramanagar,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X