ಪ್ರತ್ಯೇಕ ಘಟನೆ: ಕೀಟನಾಶಕ ಸೇವಿಸಿ 2 ವರ್ಷದ ಮಗು ಸಾವು, ಸೆಲ್ಫಿ ತೆಗೆಯಲು ಹೋಗಿ ಯುವಕ ಸಾವು
ರಾಮನಗರ, ಸೆಪ್ಟೆಂಬರ್ 04: ಕೃಷಿಗಾಗಿ ತಂದಿದ್ದ ಮನೆಯಲ್ಲಿದ್ದ ಕೀಟನಾಶಕ (ದ್ರಾವಕ) ವನ್ನು ಜ್ಯೂಸ್ ಎಂದು ಕುಡಿದು ಮಗು ಮೃತಪಟ್ಟಿರುವ ಘಟನೆ ರಾಮನಗರ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಯಶ್ವಿಕ್ (2) ಮೃತ ಮಗು ಎಂದು ಗುರುತಿಸಲಾಗಿದೆ.
ಕೃಷ್ಣಾಪುರ ಗ್ರಾಮದ ಪುಷ್ಪ ಹಾಗೂ ಹನುಮಂತ ಎಂಬ ದಂಪತಿಯ ಏಕೈಕ ಪುತ್ರನಾದ ಯಶ್ವಿಕ್, ತನ್ನ ಮನೆಯಲ್ಲಿದ್ದ ಕೀಟನಾಶಕವನ್ನು ಜ್ಯೂಸ್ ಎಂದು ತಿಳಿದು ಸೇವಿಸಿದ್ದಾನೆ.
ಮೃತ ಕಂದಮ್ಮನ ತಂದೆ, ತನ್ನ ಬೆಳೆಗೆ ಕೀಟನಾಶಕವನ್ನು ಸಿಂಪಡಿಸಲು ದ್ರಾವಕವನ್ನು ತಂದಿಟ್ಟಿದ್ದರು. ಬೆಳೆ ಕೀಟನಾಶಕ ಸಿಂಪಡಿಸಿ ಬಾಕಿ ಉಳಿದಿದ್ದ ಔಷಧಿಯನ್ನು ಬಾಟಲಿಯೊಂದಕ್ಕೆ ಹಾಕಿ ಇಟ್ಟಿದ್ದರು. ಈ ಬಾಟಲಿಯಲ್ಲಿ ಇರುವುದು ಜ್ಯೂಸ್ ಎಂದು ಭಾವಿಸಿದ ಮಗು ಕೀಟನಾಶಕ ಕುಡಿದಿದೆ. ದ್ರಾವಕ ಕುಡಿದ ಹೊಟ್ಟೆನೋವಿನಿಂದ ಆಳುತಿದ್ದ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೀಟನಾಶಕ ಕುಡಿದು ಅಸ್ವಸ್ಥವಾಗಿದ ಮಗುವಿಗೆ ತಕ್ಷಣವೇ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದರೂ ಸಹ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಇನ್ನು ಪುಟ್ಟ ಕಂದಮ್ಮನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಶಿವನಸಮುದ್ರದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕ ಸಾವು: ಮತ್ತೋರ್ವ ಪಾರು
ಚಾಮರಾಜನಗರ: ಸೆಲ್ಫಿ ಹುಚ್ಚಾಟದಿಂದ ಯುವಕನೋರ್ವ ಪ್ರಾಣ ಕಳೆದುಕೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಜೀರೋ ಪಾಯಿಂಟ್ ಗೇಟ್ ಬಳಿ ಇಂದು ನಡೆದಿದೆ.
ಬೆಂಗಳೂರು ಮೂಲದ ಪುನೀತ್ (18) ಮೃತ ದುರ್ದೈವಿಯಾಗಿದ್ದು, ಲೋಹಿತ್(19) ಎಂಬಾತ ತೆಪ್ಪ ನಡೆಸುವವರ ಸಹಾಯದಿಂದ ಬಚಾವಾಗಿದ್ದಾನೆ. ಬೆಂಗಳೂರನಿಂದ ಇಂದು ಶಿವನಸಮುದ್ರಕ್ಕೆ ಇಂದು ಪುನೀತ್, ಲೋಹಿತ್, ತೇಜಸ್ವಿನಿ, ರಿಷಾ ಎಂಬವರು ಬಂದಿದ್ದರು.
ಈ ವೇಳೆ, ಸೆಲ್ಫಿ ತೆಗೆದುಕೊಳ್ಳಲು ಕಲ್ಲುಗಳ ಮೇಲೆ ಏರಿದಾಗ ಪುನೀತ್ ಹಾಗೂ ಲೋಹಿತ್ ಇಬ್ಬರು ಕಾಲು ಜಾರಿ ಬಿದ್ದು ಜೀರೋ ಪಾಯಿಂಟ್ ಗೇಟ್ನಲ್ಲಿ ಸಿಲುಕಿದ್ದರು. ಇದನ್ನು ಗಮನಿಸಿದ ತೆಪ್ಪ ಸವಾರ ಶಾಂತರಾಜು ಎಂಬವರು ನೀರಿಗೆ ಹಾರಿ ಇಬ್ಬರನ್ನೂ ಮೇಲಕ್ಕೆತ್ತಿದ್ದರೂ, ದುರಾದೃಷ್ಟವಶಾತ್ ಪುನೀತ್ ಮೃತಪಟ್ಟಿದ್ದಾನೆ.
ಪವರ್ ಸ್ಟೇಷನ್ ನಾಲೆಯ ನೀರು ಹಾಗೂ ತಮಿಳುನಾಡಿಗೆ ಕಾವೇರಿ ಹೊರ ಹರಿವು ಹೆಚ್ಚಿದ್ದು, ಯುವಕರು ಸೆಲ್ಫಿ ಹುಚ್ಚಿಗೆ ಪ್ರಾಣಕ್ಕೆ ಸಂಚಕಾರ ತಂದುಕೊಂಡಿದ್ದಾರೆ. ಸದ್ಯ, ಕೊಳ್ಳೇಗಾಲ ಗ್ರಾಮಾಂತರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications