ಜನಪದರ ಕಾಶಿ ಜಾನಪದ ಲೋಕದಲ್ಲಿ ಮೂರು ದಿನ ನಡೆದ ಪ್ರವಾಸಿ ಲೋಕೋತ್ಸವ
ರಾಮನಗರ, ಮಾರ್ಚ್ 15: ರಾಮನಗರದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಜಾನಪದ ಲೋಕದಲ್ಲಿ 26ನೇ ಪ್ರವಾಸಿ ಜಾನಪದ ಲೋಕೋತ್ಸವ ನಡೆಯಿತು.
ಇತ್ತೀಚಿನ ದಿನಗಳಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜಾನಪದ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಜನರಿಗೆ ಕಲೆಗಳನ್ನು ಪರಿಚಯಿಸಲಾಯಿತು.

ಪ್ರಮುಖವಾಗಿ ಗೊರವರ ಕುಣಿತ, ಪಟ್ಟದ ಕುಣಿತ, ಚಂಡೆವಾದನ, ಗಾರುಡಿ ಗೊಂಬೆಯಾಟ ಸೇರಿದಂತೆ ಅಳಿವಿನ ಅಂಚಿನಲ್ಲಿರುವ ಕಲೆಗಳನ್ನು ಕಲಾವಿದರು ಪ್ರದರ್ಶನ ಮಾಡಿದರು. ಕೇವಲ ರಾಜ್ಯದ ಕಲೆಗಳಲ್ಲದೇ ಹೊರ ರಾಜ್ಯಗಳಾದ ತಂಜಾವೂರು, ಕೇರಳ, ತೆಲಂಗಾಣ, ತಮಿಳುನಾಡಿನ ಕಲಾವಿದರು ಸಹ ತಮ್ಮ ರಾಜ್ಯದ ಕಲೆಗಳನ್ನು ಪ್ರದರ್ಶನ ಮಾಡಿದರು.

ಈ ಲೋಕೋತ್ಸವದಲ್ಲಿ ಕರಕುಶಲ ಮೇಳವನ್ನು ಕೂಡ ಆಯೋಜಿಸಲಾಗಿತ್ತು. ಮಣ್ಣಿನಿಂದ ಮಾಡಿದ ವಿವಿಧ ರೀತಿಯ ದೀಪಗಳು, ಬಣ್ಣದ ಮರದ ಆಟಿಕೆಗಳು ಸೇರಿದಂತೆ ಹಲವು ಮಳಿಗೆಗಳನ್ನು ತೆರೆಯಲಾಗಿತ್ತು. ಈ ಪ್ರವಾಸಿ ಲೋಕೋತ್ಸವವನ್ನು ಸುಮಾರು 5 ಸಾವಿರ ಮಂದಿ ವೀಕ್ಷಣೆ ಮಾಡಿದ್ದಾರೆ ಎಂದು ಜಾನಪದ ಲೋಕದ ಕಾರ್ಯದರ್ಶಿ ರುದ್ರಪ್ಪ ಹೆಮ್ಮೆ ವ್ಯಕ್ತಪಡಿಸಿದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications