ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನಪದರ ಕಾಶಿ ಜಾನಪದ ಲೋಕದಲ್ಲಿ ಮೂರು ದಿನ ನಡೆದ ಪ್ರವಾಸಿ ಲೋಕೋತ್ಸವ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಮಾರ್ಚ್ 15: ರಾಮನಗರದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಜಾನಪದ ಲೋಕದಲ್ಲಿ 26ನೇ ಪ್ರವಾಸಿ ಜಾನಪದ ಲೋಕೋತ್ಸವ ನಡೆಯಿತು.

ಇತ್ತೀಚಿನ ದಿನಗಳಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜಾನಪದ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಜನರಿಗೆ ಕಲೆಗಳನ್ನು ಪರಿಚಯಿಸಲಾಯಿತು.

 Ramanagara: 3 Days Janapada Lokotsava Celebrated At Janapada Loka

 ಜಾನಪದ ಲೋಕದ ಬೆಳ್ಳಿ ಹಬ್ಬ:ಕಲಾಕ್ಷೇತ್ರದಲ್ಲಿ ಅನಾವರಣಗೊಂಡ ಸಿರಿ ಲೋಕ ಜಾನಪದ ಲೋಕದ ಬೆಳ್ಳಿ ಹಬ್ಬ:ಕಲಾಕ್ಷೇತ್ರದಲ್ಲಿ ಅನಾವರಣಗೊಂಡ ಸಿರಿ ಲೋಕ

ಪ್ರಮುಖವಾಗಿ ಗೊರವರ ಕುಣಿತ, ಪಟ್ಟದ ಕುಣಿತ, ಚಂಡೆವಾದನ, ಗಾರುಡಿ ಗೊಂಬೆಯಾಟ ಸೇರಿದಂತೆ ಅಳಿವಿನ ಅಂಚಿನಲ್ಲಿರುವ ಕಲೆಗಳನ್ನು ಕಲಾವಿದರು ಪ್ರದರ್ಶನ ಮಾಡಿದರು. ಕೇವಲ ರಾಜ್ಯದ ಕಲೆಗಳಲ್ಲದೇ ಹೊರ ರಾಜ್ಯಗಳಾದ ತಂಜಾವೂರು, ಕೇರಳ,‌ ತೆಲಂಗಾಣ, ತಮಿಳುನಾಡಿನ ಕಲಾವಿದರು ಸಹ‌ ತಮ್ಮ ರಾಜ್ಯದ ಕಲೆಗಳನ್ನು ಪ್ರದರ್ಶನ ಮಾಡಿದರು.

 Ramanagara: 3 Days Janapada Lokotsava Celebrated At Janapada Loka

ಈ ಲೋಕೋತ್ಸವದಲ್ಲಿ ಕರಕುಶಲ ಮೇಳವನ್ನು ಕೂಡ ಆಯೋಜಿಸಲಾಗಿತ್ತು. ಮಣ್ಣಿನಿಂದ ಮಾಡಿದ‌ ವಿವಿಧ ರೀತಿಯ ದೀಪಗಳು, ಬಣ್ಣದ ಮರದ ಆಟಿಕೆಗಳು ಸೇರಿದಂತೆ ಹಲವು ಮಳಿಗೆಗಳನ್ನು ತೆರೆಯಲಾಗಿತ್ತು. ಈ ಪ್ರವಾಸಿ ಲೋಕೋತ್ಸವವನ್ನು ಸುಮಾರು 5 ಸಾವಿರ ಮಂದಿ ವೀಕ್ಷಣೆ ಮಾಡಿದ್ದಾರೆ ಎಂದು ಜಾನಪದ ಲೋಕದ ಕಾರ್ಯದರ್ಶಿ ರುದ್ರಪ್ಪ ಹೆಮ್ಮೆ ವ್ಯಕ್ತಪಡಿಸಿದರು.

English summary
The 26th tourist Janapada Lokotsava took place in the Janapada Loka on the Bengaluru-Mysuru highway in Ramanagara.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X