ರಾಮನಗರ ಜಿಲ್ಲೆಯಲ್ಲಿ ಮೇ 13ರಿಂದ ಮೂರು ದಿನ ಮಾವು ಮೇಳ..!
ರಾಮನಗರ, ಮೇ 12: ನೈಸರ್ಗಿಕ ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ಒದಗಿಸಲು ಹಾಗೂ ಮಾವು ಬೆಳೆಗಾರರಿಗೆ ಉತ್ತಮ ಬೆಲೆ ದೊರೆಯುವಂತೆ ಮಾಡಲು ಜಿಲ್ಲೆಯಲ್ಲಿ ಮೂರು ದಿನದ 'ಮಾವು ಪ್ರದರ್ಶನ ಮತ್ತು ಮಾರಾಟ ಮೇಳʼ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಇಕ್ರಮ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿರುವ ʼ'ರಾಮನಗರ ಮಾವು ಮೇಳ 2022'ʼದ ಬಗ್ಗೆ ಇಂದು ಇಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,
ಮೇಳದಲ್ಲಿ ಸುಮಾರು 50 ಕ್ಕೂ ಹೆಚ್ಚು ವಿವಿಧ ಮಾವು ತಳಿಗಳ ಪ್ರದರ್ಶನ ಮತ್ತು ನಿಗದಿತ ದರದಲ್ಲಿ ರೈತರಿಂದ ನೇರವಾಗಿ ಖರೀದಿದಾರರಿಗೆ ಕಾರ್ಬನ್ ಮುಕ್ತ ಹಾಗೂ ನೈಸರ್ಗಿಕ ಮಾವಿನಹಣ್ಣುಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಇಕ್ರಾಂ ಮಾಹಿತಿ ನೀಡಿದರು.

ಈ ಬಾರಿಯ ಮೇಳದಲ್ಲಿ 25 ರಿಂದ 30 ಮಳಿಗೆಗಳನ್ನು ತೆರೆಯಲಾಗಿದೆ. ಬೆಳೆಗಾರರಿಂದ ನೇರವಾಗಿ ಗ್ರಾಹಕರಿಗೆ ಉತ್ತಮ ಹಣ್ಣುಗಳನ್ನು ಒದಗಿಸಲಾಗುತ್ತದೆ. ಇದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೆ ಉತ್ತಮ ಬೆಲೆ ಸಿಗುತ್ತದೆ ಎಂದು ಇಕ್ರಂ ಅವರು ನುಡಿದರು.

ಜಿಲ್ಲೆಯಲ್ಲಿ ಮಾವು, ತೆಂಗು, ಹೈನುಗಾರಿಕೆ, ರೇಷ್ಮೆ ಪ್ರಮುಖವಾಗಿವೆ. ಅದರಲ್ಲಿಯೂ ಮಾವು ಬೆಳೆಯನ್ನು ಸುಮಾರು 33 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಅಂದಾಜು 28 ಸಾವಿರ ರೈತ ಕುಟುಂಬವು ಮಾವು ಬೆಳೆ ಮೇಲೆ ಅವಲಂಬಿತರಾಗಿದ್ದಾರೆ ಎಂದು ಸಿಇಓ ಅವರು ತಿಳಿಸಿದರು.

ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯ ಬಳಿ ಈ ಬಾರಿ ಮಾವು ಮೇಳ..!
ಪ್ರತಿ ಬಾರಿ ಮಾವು ಮೇಳವನ್ನು ಜಾನಪದ ಕಾಶಿ ಜಾನಪದ ಲೋಕ ಒಂದೆ ಕಡೆ ಆಯೋಜನೆ ಮಾಡುತ್ತಿದ್ದ ಜಿಲ್ಲಾಡಳಿತ ಈ ಬಾರಿ ಜಿಲ್ಲೆಯ ಎರಡು ಭಾಗಗಳಲ್ಲಿ ಮಾವು ಮೇಳ ಮಾಡಲು ಮುಂದಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜನೆ ಮಾಡಿದೆ. ಇದೇ ಪ್ರಥಮ ಬಾರಿಗೆ ಕನಕಪುರ ಮಾರ್ಗದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಬೆಂಗಳೂರಿಗೆ ಅಂಟಿಕೊಂಡಿರುವ ರವಿಶಂಕರ್ ಗುರೂಜಿ ಆಶ್ರಮ ಬಳಿ ಕೂಡ ಮಾವು ಮೇಳ ಆಯೋಜನೆ ಮಾಡಿದೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications