ಅಟಲ್ ಜೀವಜಲ ಯೋಜನೆಗೆ ರಾಮನಗರದ 49 ಗ್ರಾಮಗಳು ಆಯ್ಕೆ
ರಾಮನಗರ, ಫೆಬ್ರವರಿ 12: ಅಂತರ್ಜಲ ಮಟ್ಟವನ್ನು ಸುಧಾರಿಸಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಾರಿಯಾದ ಕೇಂದ್ರದ ಅಟಲ್ ಭೂಜಲ ಯೋಜನೆಗೆ ರಾಮನಗರ ಜಿಲ್ಲೆಯ 49 ಗ್ರಾಮಗಳನ್ನು ಆಯ್ಕೆ ಮಾಡಿದೆ. ಅಟಲ್ ಜೀವಜಲ ಯೋಜನೆಗೆ ಜಿಲ್ಲಾ ಪಂಚಾಯತಿ ಸಿಇಒ ಇಕ್ರಂ ಅವರು ಜಿಲ್ಲಾ ಪಂಚಾಯತ್ ಭವನದಲ್ಲಿ ಚಾಲನೆ ನೀಡಿದರು.
ರಾಮನಗರ ಜಿಲ್ಲೆಯಲ್ಲಿ ಎರಡು ತಾಲ್ಲೂಕುಗಳಿಂದ 49 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಕನಪುರ ತಾಲ್ಲೂಕಿನ ಅರೆಕಟ್ಟೆ ದೊಡ್ಡಿ, ಚೊಡಹಳ್ಳಿ, ಕಬ್ಬಾಳ್, ಚಕನಹಳ್ಳಿ, ಅರಕೆರೆ, ದೊಡ್ಡ ಮರಳವಾಡಿ, ಯಲಚನವಾಡಿ, ಹೆರಿಂದ್ಯಾಪ್ಪನಹಳ್ಳಿ, ಕೋಲಗೊಂಡನಹಳ್ಳಿ, ಬನವಾಸಿ, ಹುಣಸನಹಳ್ಳಿ, ಕೊಡಿಹಳ್ಳಿ, ತೋಕಸಂದ್ರ, ಅಚಲು, ಬುದಿಗುಪ್ಪೆ, ಹೊನ್ನಿಗನಹಳ್ಳಿ, ಹೊಸದುರ್ಗ, ಹುಕುಂದ, ನಾರಾಯಣಪುರ, ಸಾತನೂರು, ಶಿವನಹಳ್ಳಿ, ಟಿ.ಬೇಕುಪ್ಪೆ, ಹಳ್ಳಿಮಾರನಹಳ್ಳಿ, ಕಗ್ಗಲಹಳ್ಳಿ, ಟಿ.ಹೊಸಹಳ್ಳಿ, ಬನ್ನಿಮುಕೂಡ್ಲೂ, ದ್ಯಾವಸಂದ್ರ, ಕಲ್ಲಹಳ್ಳಿ, ಸೊಮಂದ್ಯಾಪನಹಳ್ಳಿ, ತುಂಗಣಿ ಸೇರಿದಂತೆ ಒಟ್ಟು 30 ಗ್ರಾಮಗಳನ್ನು ಗುರುತಿಸಲಾಗಿದೆ.
ಇನ್ನು ರಾಮನಗರ ತಾಲ್ಲೂಕಿನ ಅಕ್ಕೂರು, ದೊಡ್ಡಂಗನವಾಡಿ, ಹರಿಸಂದ್ರ, ಜಾಲಮಂಗಲ, ಕೂಟಗಲ್, ಲಕ್ಷಿಪುರ, ಸುಗ್ಗನಹಳ್ಳಿ, ಬಿಳಗುಂಬ, ಮಯಗಾನಹಳ್ಳಿ, ಶ್ಯಾನುಬೊಗನಹಳ್ಳಿ, ಬನ್ನಿಕುಪ್ಪೆ(ಕೆ), ಬನ್ನಿಕುಪ್ಪೆ(ಬಿ), ವಿಬೂತಿಕೆರೆ, ಮಂಚನಾಯಕನಹಳ್ಳಿ, ಹುಣಸನಹಳ್ಳಿ, ಕಂಚನಕುಪ್ಪೆ, ಗೋಪಹಳ್ಳಿ, ಕಂಚುಗಾರನಹಳ್ಳಿ, ಬೈರಮಂಗಲ ಸೇರಿ ಒಟ್ಟು 19 ಗ್ರಾಮಗಳನ್ನು ಗುರುತಿಸಲಾಗಿದೆ.

ಅಟಲ್ ಭೂ ಜಲ ಯೋಜನೆಯ ನೋಡಲ್ ಅಧಿಕಾರಿ ರವಿ ಸಿ.ಪಿ. ಮಾತನಾಡಿ, ನೀರಿನ ಮಿತವ್ಯಯ ಸಾಧಿಸುವುದು ಮತ್ತು ಅದರಂತೆ ಅಂತರ್ಜಲ ಅಭಿವೃದ್ಧಿ ಪಡಿಸುವುದು, ಪರಿಣಾಮಕಾರಿ ಅಂತರ್ಜಲ ನಿರ್ವಹಣೆ ಮತ್ತು ಸಾಂಸ್ಥಿಕ ಚೌಕಟ್ಟನ್ನು ಬಲಪಡಿಸುವುದು, ಸಮರ್ಪಕ ನೀರಿನ ಬಳಕೆಗಾಗಿ ಉತ್ತಮ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಇದಕ್ಕಾಗಿ ಅಧ್ಯಯನ ಕೊಳವೆ ಬಾವಿಗಳನ್ನು ನಿರ್ಮಿಸಲಾಗುತ್ತಿದೆ ಎಂದರು.
ಇಂದು ಸಾಂಕೇತಿಕವಾಗಿ ಹುಣಸನಹಳ್ಳಿಯಲ್ಲಿ ಅಧ್ಯಯನ ಕೊಳವೆ ಬಾವಿಯನ್ನು ನಿರ್ಮಿಸಿ ಅಧ್ಯಯನ ಪ್ರಾರಂಭಿಸಲಾಗಿದೆ. ಯೋಜನೆಯ ಅನುಷ್ಠಾನಕ್ಕೆ ತಕ್ಕಂತೆ ಅನುದಾನಕ್ಕೆ ಪ್ರಸ್ತವಾನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಇನ್ನೂ ಕಾರ್ಯಕ್ರಮದಲ್ಲಿ ಹಿರಿಯ ಭೂ ವಿಜ್ಞಾನಿ ರಾಜಶ್ರೀ, ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕೊಟ್ರೇಶ್, ಜಿಲ್ಲಾ ಉದ್ಯೋಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications