ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುತ್ತಪ್ಪರೈ ಅಂತ್ಯಕ್ರಿಯೆಯಲ್ಲಿ ಗಾಳಿಯಲ್ಲಿ ಗುಂಡು; 7 ಜನರ ಬಂಧನ

By ರಾಮನಗರ ಪ್ರತಿನಿಧಿ
|
Google Oneindia Kannada News

ಬಿಡದಿ, ಮೇ 16: ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಅವರ ಅಂತ್ಯಕ್ರಿಯೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಅಂತಿಮ ವಿದಾಯ ಹೇಳಿದ ಘಟನೆಗೆ ಸಂಬಂಧಿಸಿದಂತೆ ಪ್ರಕಾಶ್ ರೈ ಸೇರಿದಂತೆ ಏಳು ಜನರ ಮೇಲೆ ಎಫ್ ಐಆರ್ ದಾಖಲು ಮಾಡಿ, ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ.

ಮುತ್ತಪ್ಪ ರೈ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಅವರ ಸೆಕ್ಯುರಿಟಿ ಗಾರ್ಡ್ ಗಳು ತಮ್ಮ ಮಾಲೀಕನಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಅಂತಿಮ ವಿದಾಯ ಹೇಳಿದ್ದರು. ಆಯೋಜಕರು ಕಾನೂನು ಉಲ್ಲಂಘನೆ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಪರಿಗಣಿಸಿದ ಪೊಲೀಸ್ ಇಲಾಖೆ ಬಿಡದಿ ಠಾಣೆಯಲ್ಲಿ ಗುನ್ನೆ ಸಂಖ್ಯೆ 135/20 ರಲ್ಲಿ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿಸಿದೆ.

 ಬಿಡದಿಯ ತನ್ನ ನೆಚ್ಚಿನ ಮನೆ ಬಳಿಯೇ ಲೀನವಾದ ಮುತ್ತಪ್ಪ ರೈ ಬಿಡದಿಯ ತನ್ನ ನೆಚ್ಚಿನ ಮನೆ ಬಳಿಯೇ ಲೀನವಾದ ಮುತ್ತಪ್ಪ ರೈ

7 Arrested For Firing At Air During Muthappa Rai Funeral In Bidadi

ಈ ಪ್ರಕರಣದಲ್ಲಿ, ಆಯೋಜಕ ಪ್ರಕಾಶ್ ರೈ, ಮೋನಪ್ಪ, ಗಿರೀಶ್, ಲಕ್ವಿರ್ ಸಿಂಗ್, ಚಾತರ್ ಸಿಂಗ್, ರಂಜಿತ್ ರೈ ಹಾಗೂ ಸುನಿಲ್ ಎಂಬುವರನ್ನು ದಸ್ತಗಿರಿ ಮಾಡಿ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಿ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.

English summary
Police filed FIR on seven for firing at air during muthappa rai funeral which took place at bidadi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X