ರಾಮನಗರ ಅರಣ್ಯ ಇಲಾಖೆ ಕಾರ್ಯಾಚರಣೆ: ಅಂತರ್ ರಾಜ್ಯ ದಂತಚೋರರ ಬಂಧನ
ರಾಮನಗರ ಅಕ್ಟೋಬರ್ 12: ಅಕ್ರಮವಾಗಿ ಮಾರಾಟ ಮಾಡಲು ಒಂಬತ್ತು ಆನೆ ದಂತ ಸಾಗಿಸುತ್ತಿದ್ದ ಅಂತರ್ರಾಜ್ಯ 8 ಆರೋಪಿಗಳನ್ನು ಬಂಧಿಸಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರದ ಹುಣಸನಹಳ್ಳಿಯಲ್ಲಿ ನಡೆದಿದೆ.
ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹುಣಸನಹಳ್ಳಿ-ಕನಕಪುರ ರಸ್ತೆಯ ಮರಿದೇವರದೊಡ್ಡಿ ಕ್ರಾಸ್ ಬಳಿ ಅಕ್ರಮವಾಗಿ ಆನೆ ದಂತ ಸಾಗಿಸುತ್ತಿದ್ದ ಕಾರಿನ ಮೇಲೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅರಣ್ಯ ವಲಯ ಸಂಚಾರಿ ದಳ ಹಾಗೂ ಅರಣ್ಯ ಅಪರಾಧ ನಿಯಂತ್ರಣ ಘಟಕದ ಸಿಬ್ಬಂದಿ 8 ಜನ ಆರೋಪಿಗಳನ್ನು ಬಂಧಿಸಿ ಅವರಿಂದ 9 ಆನೆ ದಂತದ ತುಂಡುಗಳು, ಮೊಬೈಲ್ ಪೋನ್ಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿ ಕೊಂಡಿದ್ದಾರೆ.

ಹುಣಸನಹಳ್ಳಿ ವ್ಯಾಪ್ತಿಯಲ್ಲಿ ವನ್ಯಜೀವಿ (ಸಂರಕ್ಷಣಾ) ಕಾಯ್ದೆ 1972ರ ಉಲ್ಲಂಘಿಸಿ, ಅಕ್ರಮವಾಗಿ ಆನೆದಂತ ಮಾರಾಟ ಯತ್ನ ನಡೆಯುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ಅರಣ್ಯ ತನಿಖಾ ದಳ ಹುಣಸನಹಳ್ಳಿ- ಕನಕಪುರ ರಸ್ತೆಯ ಮರಿದೇವರದೊಡ್ಡಿ ಕ್ರಾಸ್ ಬಳಿ ವಾಹನಗಳ ತಪಾಸಣೆ ಮಾಡುತ್ತಿದ್ದ ಸಮಯದಲ್ಲಿ ಕಳ್ಳಸಾಗಣೆ ಪ್ರಕರಣ ಬೆಳಕಿಗೆ ಬಂದಿದೆ.
ವನ್ಯಜೀವಿ (ಸಂರಕ್ಷಣಾ) ಕಾಯ್ದೆ 1972ರ ಸೆಕ್ಷನ್ 2 (16)(32), 9, 39, 44, 49B r/w 50, 51, 52, 55, 56 & 57 ಮತ್ತು ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 2(6)(7)(b)(iii) r/w 62,71A ರ ಉಲ್ಲಂಘನೆ ಮಾಡಿ, ಹಳದಿ ಬಣ್ಣದ ನಾಮಫಲಕವುಳ್ಳ ಬಿಳಿ ಬಣ್ಣದ ಮಹೀಂದ್ರ ಜೈಲೋ ಕಾರು ನೋಂದಣಿ ಸಂಖ್ಯೆ KA-03 AG-9560ರಲ್ಲಿ ಆರೋಪಿಗಳು ದಂತ ಸಾಗಾಣಿಕೆ ಮಾಡುತ್ತಿದ್ದರು.

ತಮಿಳುನಾಡು ಮೂಲದ ಐಯ್ಯನ್ಕುಟ್ಟಿ ಕುಜಂತಾಯ್ (53). ಕೃಷ್ಣಮೂರ್ತಿ ಗೋಪಾಲ್ (35) ರವಿ.ಎಂ(44). ಅಂದ್ರಪ್ರದೇಶ ಮೂಲದ ಎಂ.ವೆಂಕಟೇಶ (51), ರಾಜ್ಯದ ರತ್ನ.ಯು (46) , ನಾರಾಯಣಸ್ವಾಮಿ.ಎ(50) ಎ.ದಿನೇಶ್ (42) ಹಾಗೂ ಎಸ್.ಮನೋಹರ್ ಪಾಂಡೆ (61) ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳು ವಿರುದ್ಧ ರಾಜ್ಯ ವನ್ಯಜೀವಿ (ಸಂರಕ್ಷಣಾ) ಕಾಯ್ದೆ 1972ರ ಶೆಡ್ಯೂಲ್-1 ಪಾರ್ಟ್-1 (12ಬಿ), ಆನೆಯ Indian elephant (Elephas maximus) ದಂತವಾಗಿದ್ದು, ಸದರಿ ಕಾಯ್ದೆಯನ್ವಯ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದ್ದು, ವನ್ಯಜೀವಿ (ಸಂರಕ್ಷಣಾ) ಕಾಯ್ದೆ 1972ರ ಸೆಕ್ಷನ್ 55ರಡಿ ದೂರನ್ನು ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications