ನಿವೇಶನದ ಖಾತಾಗಾಗಿ 90 ರ ವೃದ್ಧೆ ಅಹೋರಾತ್ರಿ ಉಪವಾಸ

ರಾಮನಗರ, ಡಿಸೆಂಬರ್ 14 : ವೃದ್ಧೆಯೊಬ್ಬರು ತಮ್ಮ ನಿವೇಶನದ ಖಾತಾ ಮಾಡಿಕೊಡುತ್ತಿಲ್ಲವೆಂದು ತನ್ನ ಮೊಮ್ಮಗನೊಂದಿಗೆ ಆಹೋರಾತ್ರಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಪಂಚಾಯಿತಿ ಕಚೇರಿಯ ಮುಂಭಾಗ ಚನ್ನಪಟ್ಟಣ ತಾಲೂಕಿನ ಮತ್ತೀಕೆರೆ ಗ್ರಾಮದ ವೃದ್ಧೆ ನಿಂಗಮ್ಮ ಸತ್ಯಾಗ್ರಹ ಆರಂಭಿಸಿದ್ದಾರೆ.

90 years old woman on day-night hunger strike

ಮತ್ತೀಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವಲಿಂಗಯ್ಯ ಖಾತಾ ಮಾಡಿಕೊಡುವುದಾದರೆ ಲಂಚ ನೀಡುವಂತೆ ಒತ್ತಡ ಹಾಕುತ್ತಿದ್ದರು ಎಂದು ವೃದ್ಧೆ ನಿಂಗಮ್ಮ ಆರೋಪಿಸಿದರು.

1989ರಲ್ಲಿ ತಮ್ಮ ಪತಿ ಹೊನ್ನೇಗೌಡರಿಗೆ ಮಂಜೂರಾಗಿದ್ದ ನೀವೇಶನದ ಖಾತಾ ಮಾಡಿಕೊಡಲು ಕಳೆದ 19 ತಿಂಗಳ ಹಿಂದೆ ಸಕಾಲ ಯೋಜನೆಯಡಿ ಅರ್ಜಿ ಸಲ್ಲಿಸಿದ್ದರು.

ಇದೂವರೆಗೂ ಖಾತೆ ಮಾಡಿಕೊಡದೆ ಹಲವು ನೆಪವೊಡ್ಡಿ ಖಾತಾ ಮಾಡಿಕೊಡುತ್ತಿಲ್ಲ ಎಂದು ತಮ್ಮ ಮೊಮ್ಮಗ ಆಶೋಕ್ ಜೊತೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

90 years old woman on day-night hunger strike

ಕೇವಲ ಹಣದ ಆಶೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವಲಿಂಗಯ್ಯ ಖಾತಾ ಮಾಡಿಕೊಡದೇ ಸಬೂಬು ಹೇಳುತ್ತಿದ್ದಾರೆ. ಅವರ ಮೇಲೆ ಕ್ರಮ ಕೈಗೊಂಡು ತಮ್ಮ ನಿವೇಶನದ ಖಾತಾ ಮಾಡಿಕೊಡುವಂತೆ ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+