Ramanagara: ಖಾಸಗಿ ಗೋದಾಮಿನಲ್ಲಿ 10,000ಕ್ಕೂ ಹೆಚ್ಚು ಸೀರೆಗಳು; ಪತ್ತೆ ಹಚ್ಚಿದ ಜೆಡಿಎಸ್
ರಾಮನಗರ, ಮಾರ್ಚ್ 20: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಗರದ ದ್ಯಾವರಸೇಗೌಡನ ದೊಡ್ಡಿ ಬಳಿಯ ಗೋಡೌನ್ ಒಂದರಲ್ಲಿ ಲಕ್ಷಾಂತರ ಮೌಲ್ಯದ ಸೀರೆ ದಾಸ್ತಾನನ್ನು ಜೆಡಿಎಸ್ ಕಾರ್ಯಕರ್ತರು ತಡರಾತ್ರಿ ಪತ್ತೆ ಹಚ್ಚಿರುವ ಘಟನೆ ನಡೆದಿದೆ.
ತಡರಾತ್ರಿ ನಗರದ ದ್ಯಾವರಸೇಗೌನದೊಡ್ಡಿ ಗ್ರಾಮದ ಬಳಿಯ ಗೋಡೌನ್ ಒಂದರಿಂದ ಲಾರಿಗೆ ಸೀರೆ ತುಂಬುತ್ತಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ದಾಳಿ ಮಾಡಿ ಅಕ್ರಮ ಪತ್ತೆ ಮಾಡಿದ್ದಾರೆ . ಜೆಡಿಎಸ್ ಕಾರ್ಯಕರ್ತರು ವಾಹನ ತಡೆಗಟ್ಟುತ್ತಿದಂತೆ ಗೋಡೌನ ಸಿಬ್ಬಂದಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಕಾಂಗ್ರೆಸ್ನಿಂದ ಸೀರೆ ಹಂಚಿಕೆ ಆರೋಪ
ಜೆಡಿಎಸ್ ಕಾರ್ಯಕರ್ತರು ಪತ್ತೆ ಹಚ್ಚಿದ ದಾಸ್ತಾನಿನಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಸೀರೆಗಳ ಸಂಗ್ರಹ ಪತ್ತೆಯಾಗಿದ್ದು, ಕಾಂಗ್ರೆಸ್ ನಾಯಕರಿಂದ ಮತದಾರರಿಗೆ ಹಂಚಲು ಸೀರೆ ಸಂಗ್ರಹ ಮಾಡಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ.
ಗೋಡೌನ್ನಿಂದ ಅನುಮಾಸ್ಪದವಾಗಿ ಬಂಡಲ್ಗಳನ್ನು ಲಾರಿ ತುಂಬುತ್ತಿದ್ದ ವೇಳೆ ಪ್ರಶ್ನೆ ಮಾಡಿದಾಗ ಸಮರ್ಪಕ ಉತ್ತರ ಬರಲ್ಲಿಲ್ಲ. ಹಾಗಾಗಿ ಪರಿಶೀಲನೆ ಮಾಡಿದ್ದಾಗ ಸೀರೆ ದಾಸ್ತಾನು ಪತ್ತೆಯಾಗಿದೆ. ಲಾರಿ ಸೀರೆ ಬಂಡಲ್ ತುಂಬುತ್ತಿದ್ದ ವೇಳೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರ ಅಪ್ತ ಸಹಾಯಕ ವಾಸಿಮ್ ಎಂಬುವರು ಇದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು ಎಂದು ಜೆಡಿಎಸ್ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

ನಾವು ಪರಿಶೀಲನೆ ಮಾಡಿ ಸೀರೆ ದಾಸ್ತಾನು ಪತ್ತೆ ಮಾಡಿದ ತಕ್ಷಣ ಶಾಸಕ ಇಕ್ಬಾಲ್ ಹುಸೇನ್ ಅಪ್ತ ಸಹಾಯಕ ವಾಸಿಮ್ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳದಲ್ಲಿರುವ ಸಿ.ಸಿ ಕ್ಯಾಮರಾ ತಪಾಸಣೆ ಮಾಡಿದರೆ ಸತ್ಯಾಂಶ ಹೊರಬೀಳುತ್ತವೆ. ಅಲ್ಲದೇ ನಾವು ಬರುವ ಮುನ್ನವೇ ನಾಲ್ಕು ಲಾರಿಗಳಷ್ಟು ಸೀರೆ ಇಲ್ಲಿಂದ ಹೊರಗೆ ಸಾಗಿಸಿದ್ದಾರೆ ಎಂಬ ಮಾಹಿತಿ ಇದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ
ಲೋಕಸಭಾ ಚುನಾವಣೆ ನೀತಿ ಸಂಹಿತೆ ವೇಳೆಯೇ ಅಕ್ರಮ ಪತ್ತೆಯಾದ ಹಿನ್ನಲೆಯಲ್ಲಿ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ದ್ಯಾವರಸೇಗೌಡನ ದೊಡ್ಡಿ ಬಳಿಯ ಗೋಡೌನ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಕ್ರಮವಾಗಿ ದಾಸ್ತಾನು ಮಾಡಿದ್ದ ಸೀರೆ ಮೂಟೆಗಳು ಯಾರಿಗೆ ಸೇರಿದ್ದು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ
ಅಕ್ರಮ ಸೀರೆ ದಾಸ್ತಾನು ಪತ್ತೆಯಾದ ಸ್ಥಳದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಹೈಡ್ರಾಮ ನಡೆದಿದೆ. ಜೆಡಿಎಸ್ ಕಾರ್ಯಕರ್ತರು, ಕಾಂಗ್ರೆಸ್ ಶಾಸಕನ ಇಕ್ಬಾಲ್ ಹುಸೇನ್ ಆಪ್ತ ವಾಸಿಮ್ ಸ್ಥಳದಲ್ಲಿ ಇದ್ದರು ಎಂದು ಆರೋಪಿಸಿದರು. ಸೀರೆ ಕವರ್ ಮೇಲೆ ಯಾವ ಸ್ಟಿಕ್ಕರ್ ಇಲ್ಲ, ಯಾರ ಹೆಸರೂ ಇಲ್ಲ. ಕೇವಲ ಗೋಡನ್ನಲ್ಲಿ ಇದ್ದ ಮಾತ್ರಕ್ಕೆ ಕಾಂಗ್ರೆಸ್ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡರು ಕಿಡಿ ಕಾರಿದರು. ಈ ವೇಳೆ ಜೆಡಿಎಸ್- ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಮನಗಂಡ ಪೊಲೀಸರು ಮಧ್ಯ ಪ್ರವೇಶಿಸಿ ಎರಡೂ ಪಕ್ಷದ ಕಾರ್ಯಕರ್ತರನ್ನು ಸ್ಥಳದಿಂದ ಹೊರಗೆ ಕಳುಹಿಸಿದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications