ರಾಮನಗರದಲ್ಲಿ ಅಚ್ಚರಿ ಘಟನೆ: ಉಸಿರು ನಿಂತಿದ್ದ ವ್ಯಕ್ತಿ ಅಂತಿಮ ಸಂಸ್ಕಾರ ವೇಳೆ ಮತ್ತೆ ಜೀವಂತ
ರಾಮನಗರ, ಏಪ್ರಿಲ್ 08: ಮೃತಪಟ್ಟಿದ್ದಾರೆ ಎಂದು ವೈದ್ಯರಿಂದ ಘೋಷಿಸಲ್ಪಟ್ಟ ವ್ಯಕ್ತಿ ಮತ್ತೆ ಜೀವಂತವಾದ ವಿಚಿತ್ರ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹುಚ್ಚಯ್ಯನದೊಡ್ಡಿಯಲ್ಲಿ ನಡೆದಿದೆ. ಶಿವರಾಮ್ (55) ಮೃತಪಟ್ಟಿದ್ದಾರೆ ಎಂದು ತಿಳಿದು ಮತ್ತೆ ಬದುಕಿದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಚನ್ನಪಟ್ಟಣದ ಹುಚ್ಚಯ್ಯನದೊಡ್ಡಿಯಲ್ಲಿ ಶಿವರಾಮು ಕೂಲಿ ಕೆಲಸ ಮಾಡುತ್ತಿದ್ದರು. ಇಂದು (ಏಪ್ರಿಲ್ 08) ಸೋಮವಾರ ಬೆಳಗ್ಗೆ 6:30ರ ಸುಮಾರಿಗೆ ಶಿವರಾಮು ಏಕಾಏಕಿ ಕುಸಿದು ಬಿದ್ದಿದ್ದಾರೆ. ಉಸಿರು ನಿಂತಿದ್ದನ್ನು ಗಮನಸಿದ್ದ ಸ್ಥಳೀಯರು ಕೂಡಲೇ ಸ್ಥಳೀಯ ವೈದ್ಯರಿಗೆ ಕರೆ ಮಾಡಿ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ವೈದ್ಯರು ತಪಾಸಣೆ ನಡೆಸಿದ್ದಾರೆ.

ಈ ವೇಳೆ ವೈದ್ಯರು ಶಿವರಾಮು ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಕುಟುಂಬಸ್ಥರು ಶಿವರಾಮು ಮೃತಪಟ್ಟಿರುವ ಬಗ್ಗೆ ಸಂಬಂಧಿಕರಿಗೆ ತಿಳಿಸಿದ್ದು, ನೂರಾರು ಜನರು ಶಿವರಾಮು ಮೃತದೇಹ ದರ್ಶನ ಪಡೆಯಲು ಬಂದಿದ್ದರು. ಅಲ್ಲದೇ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಕೂಡ ಎಲ್ಲವೂ ಆಗಿತ್ತು.
ಇನ್ನೇನು ಅಂತಿಮ ಸಂಸ್ಕಾರ ಮಾಡಬೇಕು ಎನ್ನುವಷ್ಟರಲ್ಲಿ ಶಿವರಾಮು ಅಚ್ಚರಿ ಎಂಬಂತೆ ಎಚ್ಚರಗೊಂಡಿದ್ದಾರೆ. ಶಿವರಾಮು ಎಚ್ಚರವಾಗುತ್ತಿದ್ದಂತೆ ಕುಟುಂಬಸ್ಥರು ಕೂಡಲೇ ವೈದ್ಯರಿಗೆ ತಿಳಿಸಿದ್ದಾರೆ. ಬೆಳಗ್ಗೆ 6:30ಕ್ಕೆ ಕುಸಿದು ಬಿದ್ದಿದ್ದ ಶಿವರಾಮು ಮಧ್ಯಾಹ್ನ 12 ಗಂಟೆಯವರೆಗೂ ಉಸಿರಾಡಲೇ ಇಲ್ಲ ಎನ್ನಲಾಗಿದೆ. ಶಿವರಾಮು ಅವರನ್ನು ಮತ್ತೆ ಜೀವಂತವಾಗಿ ಕಂಡ ಕುಟುಂಬಸ್ಥರು ನಿಜಕ್ಕೂ ಇದೊಂದು ಪವಾಡ ಎಂದು ಖುಷಿಪಟ್ಟಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications