ರಾಮನಗರದಲ್ಲಿ ಅಚ್ಚರಿ ಘಟನೆ: ಉಸಿರು ನಿಂತಿದ್ದ ವ್ಯಕ್ತಿ ಅಂತಿಮ ಸಂಸ್ಕಾರ ವೇಳೆ ಮತ್ತೆ ಜೀವಂತ
ರಾಮನಗರ, ಏಪ್ರಿಲ್ 08: ಮೃತಪಟ್ಟಿದ್ದಾರೆ ಎಂದು ವೈದ್ಯರಿಂದ ಘೋಷಿಸಲ್ಪಟ್ಟ ವ್ಯಕ್ತಿ ಮತ್ತೆ ಜೀವಂತವಾದ ವಿಚಿತ್ರ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹುಚ್ಚಯ್ಯನದೊಡ್ಡಿಯಲ್ಲಿ ನಡೆದಿದೆ. ಶಿವರಾಮ್ (55) ಮೃತಪಟ್ಟಿದ್ದಾರೆ ಎಂದು ತಿಳಿದು ಮತ್ತೆ ಬದುಕಿದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಚನ್ನಪಟ್ಟಣದ ಹುಚ್ಚಯ್ಯನದೊಡ್ಡಿಯಲ್ಲಿ ಶಿವರಾಮು ಕೂಲಿ ಕೆಲಸ ಮಾಡುತ್ತಿದ್ದರು. ಇಂದು (ಏಪ್ರಿಲ್ 08) ಸೋಮವಾರ ಬೆಳಗ್ಗೆ 6:30ರ ಸುಮಾರಿಗೆ ಶಿವರಾಮು ಏಕಾಏಕಿ ಕುಸಿದು ಬಿದ್ದಿದ್ದಾರೆ. ಉಸಿರು ನಿಂತಿದ್ದನ್ನು ಗಮನಸಿದ್ದ ಸ್ಥಳೀಯರು ಕೂಡಲೇ ಸ್ಥಳೀಯ ವೈದ್ಯರಿಗೆ ಕರೆ ಮಾಡಿ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ವೈದ್ಯರು ತಪಾಸಣೆ ನಡೆಸಿದ್ದಾರೆ.

ಈ ವೇಳೆ ವೈದ್ಯರು ಶಿವರಾಮು ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಕುಟುಂಬಸ್ಥರು ಶಿವರಾಮು ಮೃತಪಟ್ಟಿರುವ ಬಗ್ಗೆ ಸಂಬಂಧಿಕರಿಗೆ ತಿಳಿಸಿದ್ದು, ನೂರಾರು ಜನರು ಶಿವರಾಮು ಮೃತದೇಹ ದರ್ಶನ ಪಡೆಯಲು ಬಂದಿದ್ದರು. ಅಲ್ಲದೇ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಕೂಡ ಎಲ್ಲವೂ ಆಗಿತ್ತು.
ಇನ್ನೇನು ಅಂತಿಮ ಸಂಸ್ಕಾರ ಮಾಡಬೇಕು ಎನ್ನುವಷ್ಟರಲ್ಲಿ ಶಿವರಾಮು ಅಚ್ಚರಿ ಎಂಬಂತೆ ಎಚ್ಚರಗೊಂಡಿದ್ದಾರೆ. ಶಿವರಾಮು ಎಚ್ಚರವಾಗುತ್ತಿದ್ದಂತೆ ಕುಟುಂಬಸ್ಥರು ಕೂಡಲೇ ವೈದ್ಯರಿಗೆ ತಿಳಿಸಿದ್ದಾರೆ. ಬೆಳಗ್ಗೆ 6:30ಕ್ಕೆ ಕುಸಿದು ಬಿದ್ದಿದ್ದ ಶಿವರಾಮು ಮಧ್ಯಾಹ್ನ 12 ಗಂಟೆಯವರೆಗೂ ಉಸಿರಾಡಲೇ ಇಲ್ಲ ಎನ್ನಲಾಗಿದೆ. ಶಿವರಾಮು ಅವರನ್ನು ಮತ್ತೆ ಜೀವಂತವಾಗಿ ಕಂಡ ಕುಟುಂಬಸ್ಥರು ನಿಜಕ್ಕೂ ಇದೊಂದು ಪವಾಡ ಎಂದು ಖುಷಿಪಟ್ಟಿದ್ದಾರೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications