ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಮೀನು ವ್ಯಾಜ್ಯ; ಕನಕಪುರದಲ್ಲಿ ಸಂಬಂಧಿಗಳ ಕೊಲೆ ಮಾಡಿದ ಯುವಕ

By ರಾಮನಗರ ಪ್ರತಿನಿಧಿ
|
Google Oneindia Kannada News

ಕನಕಪುರ, ಸೆಪ್ಟೆಂಬರ್ 5: ಜಮೀನಿಗೆ ಸಂಬಂಧಿಸಿದ ವಿಚಾರವಾಗಿ ಯುವಕನೊಬ್ಬ ತನ್ನ ದೊಡ್ಡಮ್ಮ ಹಾಗೂ ದೊಡ್ಡಮ್ಮನ ಮಗಳನ್ನು ಕೊಲೆ ಮಾಡಿರುವ ಘಟನೆ ಕನಕಪುರದಲ್ಲಿ ನಡೆದಿದೆ.

ಕನಕಪುರ ತಾಲ್ಲೂಕಿನ ಸೊಂಟೇನಹಳ್ಳಿ ಗ್ರಾಮದಲ್ಲಿ ಕೊಲೆ ನಡೆದಿದ್ದು, ಅದೇ ಗ್ರಾಮದ ನಾಗ (ಬುಲೆಟ್ ನಾಗ) ಎಂಬುವವನು ಕೊಲೆ ಮಾಡಿದ ಯುವಕ. ಕೊಲೆ ಮಾಡಿದ ನಂತರ ತನ್ನ ದೊಡ್ಡಮ್ಮ ಮಂಗಮ್ಮ ಹಾಗೂ ಅವರ ಮಗಳು ನಾಗರತ್ನಾಳನ್ನು ತಾನೇ ಕೊಲೆ ಮಾಡಿರುವುದಾಗಿ ಹಾರೋಹಳ್ಳಿ ಪೋಲಿಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಪುತ್ತೂರಿನಲ್ಲಿ ಯಕ್ಷಗಾನ ನೋಡಲು ಬಂದಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಕೊಲೆಪುತ್ತೂರಿನಲ್ಲಿ ಯಕ್ಷಗಾನ ನೋಡಲು ಬಂದಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಕೊಲೆ

ಮಂಗಮ್ಮನ ಪತಿ ಆರು ತಿಂಗಳ ಹಿಂದೆ ತೀರಿ ಹೋಗಿದ್ದರು. ಮಂಗಮ್ಮ ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಹಲವು ವರ್ಷಗಳಿಂದ ಜಮೀನಿಗೆ ಸಂಬಂಧಿಸಿದಂತೆ ವ್ಯಾಜ್ಯ ನಡೆಯುತ್ತಿದ್ದುದಾಗಿ ತಿಳಿದುಬಂದಿದೆ.

 A Young Man Killed Relatives In Kanakapura For Land Dispute

ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಸಮಯದಲ್ಲಿ ಮಂಗಮ್ಮ ಅವರ ಮನೆಗೆ ಹೋಗಿ ಅವರನ್ನು ಹಾಗೂ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
A young man murdered his aunt and her daughter in connection with a land dispute in kanakapura.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X