ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಹೆಚ್ಚಿದ ಅಪಘಾತ: ಎಡಿಜಿಪಿ ಅಲೋಕ್ ಕುಮಾರ್ ಹೆದ್ದಾರಿ ಪರಿಶೀಲನೆ
ರಾಮನಗರ ಜೂನ್ 27: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಮರಣದ ಹೆದ್ದಾರಿ ಎಂಬ ಕುಖ್ಯಾತಿ ಪಡೆದ ಹಿನ್ನಲೆಯಲ್ಲಿ ಅಪಘಾತ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಫೀಲ್ಡಿಗಿಳಿದಿದ್ದು, ಎಡಿಜಿಪಿ ಅಲೋಕ್ ಕುಮಾರ್ ಎಕ್ಸ್ಪ್ರೆಸ್ ಹೈವೇ ಪರಿಶೀಲನೆ ನಡೆಸಿದ್ದಾರೆ.
ಕುಂಬಳಗೂಡಿನ ಬಾಬುಸಾಬರಪಾಳ್ಯದಿಂದ ಸಂಚಾರಿ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಪರಿಶೀಲನೆ ಆರಂಭಿಸಿದ್ದು, ಅಪಘಾತ ಸಂಖ್ಯೆ ಹೆಚ್ಚಳದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ರವಿಕಾಂತೇಗೌಡ, ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಅವರೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಹೆದ್ದಾರಿ ನಿರ್ಮಾಣ ಹೊಣೆ ಹೊತ್ತಿರುವ ಡಿಬಿಎಲ್ ಕಂಪನಿ ಅಧಿಕಾರಿಗಳು ಕೂಡ ಹೆದ್ದಾರಿ ಪರಿಶೀಲನೆಯಲ್ಲಿ ಭಾಗಿಯಾಗಿದ್ದಾರೆ.
ಅಪಘಾತ ವಲಯಗಳು ಎಂದು ಗುರುತಿಸಲಾಗಿರುವ ಈ ಕೆಳಕಂಡ ಸ್ಥಳಗಳಲ್ಲಿ ಪರಿಶೀಲನೆ
ಕುಂಬಳಗೂಡು ಪೊಲೀಸ್ ಠಾಣೆ ವ್ಯಾಪ್ತಿಯ ಬಾಬಾಸಾಹೇಬರ ಪಾಳ್ಯ, ಐ.ಬಿ.ಎಸ್ ಕಾಲೇಜ್ ಮುಂಭಾಗ, ಅಂಚೆಪಾಳ್ಯ, ರಾಮೋಹಳ್ಳಿ ಕ್ರಾಸ್, ಹಾಗೂ ಕಣಿಮಿಣಿಕ, ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ, ಶೇಷಗಿರಿಹಳ್ಳಿ, ವಂಡರ್-ಲಾ ಗೇಟ್, ಹನುಮಂತನಗರ (ಕೋತಿ ಆಂಜನೇಯಸ್ವಾಮಿ ದೇವಸ್ಥಾನ) ರಾಮನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಯಗಾನಹಳ್ಳಿ, ಎಸ್.ಬಿ ದೊಡ್ಡಿ ಮಧುರ ಗಾರ್ಮೆಂಟ್ಸ್ ಮುಂಭಾಗ (ಬಸವನಪರ ಮೇಲ್ ಸೇತುವೆ), ದ್ಯಾವರಸೇಗೌಡನದೊಡ್ಡಿಯಿಂದ ಕೊಂಕಣಿದೊಡ್ಡಿವರೆಗೆ, ಜಯಪುರ ಸೇತುವೆ, ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಲಂಬಾಣಿ ತಾಂಡ್ಯ, ದೇವರಹೊಸಹಳ್ಳಿ ಗೇಟ್, ತಿಟ್ಟಮಾರನಹಳ್ಳಿ ಬೈ-ಪಾಸ್ ರಸ್ತೆ, ಸಂಕಲಗೆರೆ ಗೇಟ್, ಪುಟ್ಟಪ್ಪನದೊಡ್ಡಿ ಗೇಟ್ನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ತಂಡ ಹೆದ್ದಾರಿ ಪರಿಶೀಲನೆ ನಡೆಸಿದರು.

ಬೆಂಗಳೂರು-ಮೈಸೂರು ಹೆದ್ದಾರಿ ಪ್ರಾರಂಭವಾದ ದಿನದಿಂದ 568 ಅಪಘಾತಗಳು ಸಂಭವಿಸಿದ್ದು, 158ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇನ್ನು ನೂರಾರು ಮಂದಿ ಹೆದ್ದಾರಿ ಪ್ರಯಾಣಿಕರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಹೀಗಾಗಿ ಅವೈಜ್ಞಾನಿಕ ರಸ್ತೆ ನಿರ್ಮಾಣದ ಬಗ್ಗೆ ಹೆದ್ದಾರಿ ಪ್ರಾಜೆಕ್ಟ್ ಡೈರೆಕ್ಟರ್ ರಾಹುಲ್ ಗುಪ್ತ ಹಾಗೂ ಇತರರಿಂದಸ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಹೆದ್ದಾರಿಯಲ್ಲಿ ಕೆಲವೆಡೆ ಇಂಜಿನಿಯರಿಂಗ್ ಲೋಪದೋಷಗಳ ಸರಿಪಡಿಸುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನುವ ಕುರಿತು ಮಾಹಿತಿ ಲಭ್ಯವಾಗಿದೆ.
-
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications