ರಾಮನಗರದಲ್ಲಿ ಹಣದಾಸೆಗೆ ಬಾರ್ ಮಾಲೀಕರಿಂದಲೇ ಮದ್ಯ ಕಳವು
ರಾಮನಗರ, ಏಪ್ರಿಲ್ 20: ಕೊರೊನಾ ವೈರಸ್ ಭೀತಿಗೆ ದೇಶವೇ ಲಾಕ್ ಡೌನ್ ಘೋಷಿಸಿ 27 ದಿನಗಳು ಕಳೆಯುತ್ತಿವೆ. ದಿನಬಳಕೆ ವಸ್ತುಗಳಿಂದ ಹಿಡಿದು ಎರಡು ಹೊತ್ತಿನ ಊಟಕ್ಕೂ ತೊಂದರೆ ಉಂಟಾಗಿರುವ ಸಂದರ್ಭದಲ್ಲಿ ಮದ್ಯಪ್ರಿಯರಿಗೆ ಮಾತ್ರ ನಿರಾತಂಕವಾಗಿ ಎಣ್ಣೆ ಸಿಗುತ್ತಿದೆ.
ರಾಮನಗರ ಜಿಲ್ಲೆಯಲ್ಲಿ ಬಾರ್ ಮಾಲೀಕರೇ ತಮ್ಮ ಅಂಗಡಿಗಳ ಬಾಗಿಲು ಓಪನ್ ಮಾಡಿ ಮದ್ಯವನ್ನು ಕದ್ದು, ಕಾಳ ಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದೆ. ಕಾಳಸಂತೆಯಲ್ಲಿ ಒಂದಕ್ಕೆ ಐದು ಪಟ್ಟು ದುಬಾರಿ ಬೆಲೆಗೆ ಮದ್ಯದ ಬಾಟಲ್ ಗಳು ಸೇಲ್ ಆಗಿವೆ. ಹಣದ ಆಸೆಗೆ ಬಿದ್ದ ಬಾರ್ ಮಾಲೀಕರೇ ಕಾನೂನನ್ನು ಗಾಳಿಗೆ ತೂರಿ, ತಮ್ಮಲ್ಲಿದ್ದ ಮದ್ಯ ಬಾಟಲಿಗಳನ್ನು ಮಾರಿದ್ದಾರೆ.
ಕಾಳಸಂತೆಯಲ್ಲಿ ಮದ್ಯ ಮಾರಾಟದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಹಶೀಲ್ದಾರ್ ಸುದರ್ಶನ್, ಡಿವೈಸ್ಪಿ ಓಂ ಪ್ರಕಾಶ್ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಕೆಲ ಕ್ಲಬ್ ಹಾಗೂ ಬಾರ್ ಗಳಲ್ಲಿ ಉಳಿದಿದ್ದ ಸ್ಟಾಕ್ ಪರಿಶೀಲನೆ ನಡೆಸಿದಾಗ ಬಾರ್ ಮಾಲೀಕರ ಕಳ್ಳಾಟ ಬಯಲಾಗಿದೆ.

ಲಾಕ್ಡೌನ್ ಆದ ದಿನದಂದು ಬಾರ್ ನಲ್ಲಿ ಉಳಿದಿದ್ದ ಸ್ಟಾಕ್ ಇದೀಗ ನಾಪತ್ತೆಯಾಗಿದೆ. ಚನ್ನಪಟ್ಟಣದ ಪ್ರತಿಷ್ಠಿತ ಸ್ಪೋರ್ಟ್ಸ್ ಕಲ್ಚರಲ್ ಕ್ಲಬ್, ಗರುಡಾದ್ರಿ ವೈನ್ಸ್ ಸ್ಟೋರ್ ಹಾಗೂ ಇತರ ಬಾರ್ ಗಳನ್ನ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ.
ಲಾಕ್ ಡೌನ್ ದಿನದಂದು ಅಬಕಾರಿ ಅಧಿಕಾರಿಗಳು ಬಾರ್ ಗಳಿಗೆ ಹಾಕಿದ್ದ ಸೀಲ್ ಮಾತ್ರ ಹಾಗೆ ಇದ್ದು, ಅದರಲ್ಲಿದ್ದ ಮದ್ಯ ಮಾತ್ರ ಮಾಯವಾಗಿವೆ. ಇನ್ನು ಅಧಿಕಾರಿಗಳು ರೇಡ್ ಮಾಡಿದ ಬಾರ್ ಹಾಗೂ ಕ್ಲಬ್ ಗಳಲ್ಲಿ ಸಿಸಿ ಕ್ಯಾಮರಾ ಇದ್ದರೂ ಅವು ಕಾರ್ಯನಿರ್ವಹಿಸದೇ ಇರುವುದು, ಅಬಕಾರಿ ಅಧಿಕಾರಿಗಳು ಬಾರ್ ಮಾಲೀಕರ ಮೇಲೆ ಸಂಶಯ ಬಂದಿದೆ.

ಇನ್ನು ರೇಡ್ ಮಾಡಿದ ಬಾರ್ಗಳ ಮೇಲೆ ಅಬಕಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇತ್ತ ತಹಶೀಲ್ದಾರ್ ಕೂಡ ಇಂತಹ ಬಾರ್ಗಳ ಮೇಲೆ ಕಠಿಣ ಕ್ರಮಕೈಗೊಳ್ಳಿ ಎಂದು ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಬಾರ್ಗಳನ್ನ ಓಪನ್ ಮಾಡಿಸಿ ಪರಿಶೀಲನೆ ನಡೆಸಿದರೆ ಮತ್ತಷ್ಟು ಬಾರ್ ಮಾಲೀಕರ ಬಂಡವಾಳ ಬಯಲಾಗುವುದಂತು ಸತ್ಯ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications