ಅಮಿತ್ ಶಾ ಡಿಕೆಶಿ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ; ಲಿಂಗಪ್ಪ
ರಾಮನಗರ, ಆಗಸ್ಟ್ 31: "ಬಿಜೆಪಿ ನಾಯಕರು ಡಿಕೆಶಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ಅಮಿತ್ ಶಾ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ ಎಂಎಲ್ ಸಿ ಸಿ.ಎಂ. ಲಿಂಗಪ್ಪ.
ಡಿ.ಕೆ.ಶಿವಕುಮಾರ್ ಅವರ ಇಡಿ ವಿಚಾರಣೆ ನಡೆಯುತ್ತಿದ್ದು, ಈ ಕುರಿತು ರಾಮನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಲಿಂಗಪ್ಪ ಅವರು, "ಡಿಕೆಶಿ ಅವರು ಗುಜರಾತ್ ಶಾಸಕರನ್ನು ಇಲ್ಲಿಟ್ಟುಕೊಂಡಿದ್ದರು. ಆಗ ಮೂರು ಜನರನ್ನು ಬಿಡುವಂತೆ ಅಮಿತ್ ಶಾ ಹೇಳಿದ್ದರು. ಆದರೆ ಡಿಕೆಶಿ ಒಪ್ಪಿರಲಿಲ್ಲ. ಅಂದಿನಿಂದಲೇ ಡಿಕೆಶಿ ಮೇಲೆ ಸೇಡು ಶುರುವಾಗಿದೆ. ನನ್ನ ಮಾತನ್ನು ಆಗ ಯಾರೂ ನಂಬಿರಲಿಲ್ಲ" ಎಂದರು.
"ಬಿಜೆಪಿಯ ಈ ನಡೆಯನ್ನು ಸಹಿಸಲು ಸಾಧ್ಯವಿಲ್ಲ. ಈ ಚಾಳಿಯನ್ನು ಬಿಜೆಪಿಯವರು ಬಿಡಬೇಕು. ಕಾಫೀ ಡೇ ಸಿದ್ಧಾರ್ಥ ಅವರ ಸಾವಿಗೂ ಐಟಿಯವರೇ ಕಾರಣ ಎಂಬುದನ್ನು ಮರೆಯಬಾರದು. ಡಿಕೆಶಿ ಜೊತೆ ನಾವಿದ್ದೇವೆ" ಎಂದು ತಿಳಿಸಿದರು.

ಕನಕಪುರದಲ್ಲಿ ಬೀದಿಗಿಳಿದ ಡಿಕೆಶಿ ಬೆಂಬಲಿಗರು: ಡಿಕೆಶಿ ಇಡಿ ವಿಚಾರಣೆ ಹಿನ್ನೆಲೆಯಲ್ಲಿ ಕನಕಪುರ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ.ಕೆ. ಶಿವಕುಮಾರ್ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಕನಕಪುರ ಚನ್ನಬಸಪ್ಪ ವೃತ್ತದಲ್ಲಿ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಭಾಗಿಯಾಗಿದ್ದರು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications