ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಮಿತ್ ಶಾ ಡಿಕೆಶಿ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ; ಲಿಂಗಪ್ಪ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಆಗಸ್ಟ್ 31: "ಬಿಜೆಪಿ ನಾಯಕರು ಡಿಕೆಶಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ಅಮಿತ್ ಶಾ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ ಎಂಎಲ್ ಸಿ ಸಿ.ಎಂ. ಲಿಂಗಪ್ಪ.

ಡಿ.ಕೆ.ಶಿವಕುಮಾರ್ ಅವರ ಇಡಿ ವಿಚಾರಣೆ ನಡೆಯುತ್ತಿದ್ದು, ಈ ಕುರಿತು ರಾಮನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಲಿಂಗಪ್ಪ ಅವರು, "ಡಿಕೆಶಿ ಅವರು ಗುಜರಾತ್ ಶಾಸಕರನ್ನು ಇಲ್ಲಿಟ್ಟುಕೊಂಡಿದ್ದರು. ಆಗ ಮೂರು ಜನರನ್ನು ಬಿಡುವಂತೆ ಅಮಿತ್ ಶಾ ಹೇಳಿದ್ದರು. ಆದರೆ ಡಿಕೆಶಿ ಒಪ್ಪಿರಲಿಲ್ಲ. ಅಂದಿನಿಂದಲೇ ಡಿಕೆಶಿ ಮೇಲೆ ಸೇಡು ಶುರುವಾಗಿದೆ. ನನ್ನ ಮಾತನ್ನು ಆಗ ಯಾರೂ ನಂಬಿರಲಿಲ್ಲ" ಎಂದರು.

ಬಂಧನ ಭೀತಿಯಲ್ಲಿ ಡಿಕೆ ಶಿವಕುಮಾರ್: ಶ್ರೀರಾಮುಲು ಅಣ್ಣ ಉವಾಚಬಂಧನ ಭೀತಿಯಲ್ಲಿ ಡಿಕೆ ಶಿವಕುಮಾರ್: ಶ್ರೀರಾಮುಲು ಅಣ್ಣ ಉವಾಚ

"ಬಿಜೆಪಿಯ ಈ ನಡೆಯನ್ನು ಸಹಿಸಲು ಸಾಧ್ಯವಿಲ್ಲ. ಈ ಚಾಳಿಯನ್ನು ಬಿಜೆಪಿಯವರು ಬಿಡಬೇಕು. ಕಾಫೀ ಡೇ ಸಿದ್ಧಾರ್ಥ ಅವರ ಸಾವಿಗೂ ಐಟಿಯವರೇ ಕಾರಣ ಎಂಬುದನ್ನು ಮರೆಯಬಾರದು. ಡಿಕೆಶಿ ಜೊತೆ ನಾವಿದ್ದೇವೆ" ಎಂದು ತಿಳಿಸಿದರು.

Amit Shah Takes Revenge on Dk Shivakumar Said MLC Lingappa In Ramanagara

ಕಷ್ಟದಿಂದ ಡಿಕೆಶಿ ಪಾರುಮಾಡಲು ಯಾದಗಿರಿಯಲ್ಲಿ ಇಷ್ಟದೇವಿಗೆ ನಡೆಯಿತು ಪೂಜೆ ಕಷ್ಟದಿಂದ ಡಿಕೆಶಿ ಪಾರುಮಾಡಲು ಯಾದಗಿರಿಯಲ್ಲಿ ಇಷ್ಟದೇವಿಗೆ ನಡೆಯಿತು ಪೂಜೆ

ಕನಕಪುರದಲ್ಲಿ ಬೀದಿಗಿಳಿದ ಡಿಕೆಶಿ ಬೆಂಬಲಿಗರು: ಡಿಕೆಶಿ ಇಡಿ ವಿಚಾರಣೆ ಹಿನ್ನೆಲೆಯಲ್ಲಿ ಕನಕಪುರ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ.ಕೆ. ಶಿವಕುಮಾರ್ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಕನಕಪುರ ಚನ್ನಬಸಪ್ಪ ವೃತ್ತದಲ್ಲಿ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಭಾಗಿಯಾಗಿದ್ದರು.

English summary
"BJP leaders have been harassing DK Shivakumar and Amit Shah is taking revenge against him" said MLC Lingappa in Ramanagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X