ಕನಕಪುರದಲ್ಲಿ ಏಸು ಪ್ರತಿಮೆ ನಿರ್ಮಾಣ; ಅನಿತಾ ಕುಮಾರಸ್ವಾಮಿ ಹೇಳುವುದೇನು?
ರಾಮನಗರ, ಜನವರಿ 14: "ಏಸು ಪ್ರತಿಮೆ ನಿರ್ಮಾಣಕ್ಕೆ ಸ್ಥಳೀಯರ ವಿರೋಧವಿಲ್ಲ, ಹೊರಗಿನಿಂದ ಜನರನ್ನು ಕರೆತಂದು ರಾಜಕೀಯ ಮಾಡುತ್ತಿರುವುದು ತಪ್ಪು" ಜಿಲ್ಲೆಯ ಆರೋಬೆಲೆಯ ಕಪಾಲ ಬೆಟ್ಟದಲ್ಲಿ ಜಗತ್ತಿನ ಎತ್ತರದ ಏಸು ಪ್ರತಿಮೆ ನಿರ್ಮಾಣ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಮತ್ತು ಸಂಘ ಪರಿವಾರ ಹಮ್ಮಿಕೊಂಡಿರುವ "ಮುನೇಶ್ವರ ಬೆಟ್ಟ ಉಳಿಸಿ, ಕನಕಪುರ ಚಲೋ" ಸಂಬಂಧ ಪ್ರತಿಕ್ರಿಯಿಸಿದ್ದಾರೆ ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ.
ನಿನ್ನೆ ನಗರದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಾಲನೆ ನೀಡಿ ಮಾತನಾಡಿದ ಅವರು, "ಕನಕಪುರದಲ್ಲಿ ಯಾವ ರೀತಿ ಜಮೀನು ಮಂಜೂರು ಮಾಡಿಸಿಕೊಂಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ ಜಿಲ್ಲೆಯಲ್ಲಿ ಎಲ್ಲಾ ಸಮುದಾಯದ ಜನರು ಸೌಹಾರ್ದವಾಗಿ ಅಣ್ಣ-ತಮ್ಮಂದಿರ ರೀತಿ ಜೀವನ ನಡೆಸುತ್ತಿದ್ದಾರೆ. ಅವರ ಮಧ್ಯೆ ಜಾತಿ ಧರ್ಮ ತರುವುದು ಸರಿಯಿಲ್ಲ, ಏಸು ಪ್ರತಿಮೆ ಬೇಕು ಬೇಡ ಎನ್ನುವುದನ್ನು ಕನಕಪುರದ ಜನತೆ ಹೇಳಬೇಕು, ನಾನು ಆ ಬಗ್ಗೆ ಮಾತನಾಡುವುದು ಸರಿಯಿಲ್ಲ" ಎಂದರು.
Recommended Video

ಇನ್ನು ಕಪಾಲ ಬೆಟ್ಟದಂತೆ ರಾಮನಗರ ತಾಲ್ಲೂಕಿನ ಬಿಳಗುಂಬ ಪಂಚಾಯ್ತಿ ವ್ಯಾಪ್ತಿಯ ಹರ್ನಾಗುಡ್ಡದಲ್ಲಿ ಶಿಲುಬೆ ನಿರ್ಮಾಣಕ್ಕೆ ಮುಂದಾಗಿರುವ ವಿವಾದಕ್ಕೆ ಪ್ರತಿಕ್ರಿಯೆ ನೀಡಿ, "ನನ್ನ ಹಾಗೂ ಎಚ್ಡಿಕೆಯವರ ಅವಧಿಯಲ್ಲಿ ಜಮೀನು ಮಂಜೂರಾಗಿಲ್ಲ. ತಹಶೀಲ್ದಾರ್ ಅವರಿಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ. ಹೈಕೋರ್ಟ್ ಸರ್ಕಾರಿ ಜಮೀನನ್ನು ಧಾರ್ಮಿಕ ಚಟುವಟಿಕೆಗಳಿಗೆ ನೀಡಬಾರದು ಎಂದು ಆದೇಶ ಮಾಡಿದೆ. ಹಾಗಾಗಿ ಸರ್ಕಾರ ಅವರದೇ ಇದೆ ಕಾನೂನು ಬಾಹಿರವಾಗಿದ್ದರೆ ಕ್ರಮ ಜರುಗಿಸಲಿ, ನಮ್ಮ ಅಭ್ಯಂತರವಿಲ್ಲ" ಎಂದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications