'ನೀಚ ಬುದ್ದಿಯ ಬಿಡು ನಾಲಿಗೆ' ಎಂದು ಬುದ್ಧಿವಾದ ಹೇಳಿದ ಅನಿತಾ ಕುಮಾರಸ್ವಾಮಿ
ರಾಮನಗರ,ಜು 2: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುರಿತು ಮಧುಗಿರಿ ಮಾಜಿ ಶಾಸಕ ಹಾಗೂ ಕೆ.ಎನ್.ರಾಜಣ್ಣ ನೀಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ ನಾಯಕರು ಸಹ ರಾಜಣ್ಣ ನವರ ಹೇಳಿಕೆಯನ್ನು ಖಂಡಿಸಿದ್ದಾರೆ. ಅಲ್ಲದೇ ಪಕ್ಷಾತೀತವಾಗಿ ಸಾಕಷ್ಟು ರಾಜಕೀಯ ಮುಖಂಡರು ಹಿರಿಯ ಮುತ್ಸದ್ಧಿ ದೇವೇಗೌಡರ ಬಗ್ಗೆ ಯಾರು ಹಗುರವಾಗಿ ಮಾತನಾಡಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರ ಸೊಸೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಯವರ ಪತ್ನಿ ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಯವರು ತಮ್ಮ ಮಾವ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಮಾತನಾಡಿರುವ ಕೆ.ಎನ್.ರಾಜಣ್ಣ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನೀಚ ಬುದ್ದಿಯ ಬಿಡು ನಾಲಿಗೆ ಎಂದು ಕಿಡಿಕಾರಿದರು.

ಪರಮನೀಚ ಮನುಷ್ಯ ರಾಜಣ್ಣ
ಪಟ್ಟಣದ ಜಿಲ್ಲಾ ಸಂಕೀರ್ಣದ ಪೌರ ಇಲಾಖೆಯ ಹೊರಗುತ್ತಿಗೆ ನೌಕರರು ಖಾಯಂ ಮಾಡುವಂತೆ ಆಗ್ರಹಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತರಿಗೆ ಬೆಂಬಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕಿ ಅನಿತಾ ಕುಮಾರಸ್ವಾಮಿ, ದೇವೇಗೌಡರ ಕಾಲಿನ ದೂಳಿಗೂ ಸಮವಿಲ್ಲದ ವ್ಯಕ್ತಿ ರಾಜಣ್ಣ ಎಂದು ತರಾಟೆಗೆ ತೆಗೆದುಕೊಂಡರು.
ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಕೆ.ಎನ್ ರಾಜಣ್ಣ ಅವರ ಆಕ್ಷೇಪಾರ್ಹ ಹೇಳಿಕೆಗೆ ಕೆರಳಿ ಕೆಂಡವಾದ ಶಾಸಕಿ ಅನಿತಾ ಕುಮಾರಸ್ವಾಮಿ, ಹಿಗ್ಗಾಮುಗ್ಗ ಕೆ.ಎನ್ ರಾಜಣ್ಣ ವಿರುದ್ಧ ಹರಿಹಾಯ್ದರು, ದೇವೇಗೌಡರ ಕಾಲಿಗೆ ಧೂಳಿಗೆ ಸಮನಿಲ್ಲ ವ್ಯಕ್ತಿ ಅವರು, ಆಚಾರವಿಲ್ಲದ ನಾಲಿಗೆ ಅವರದ್ದು, ಪರಮನೀಚ ಮನುಷ್ಯ ರಾಜಣ್ಣ ಎಂದು ಕಿಡಿಕಾರಿದರು.

ದೇವೇಗೌಡರನ್ನು ಭೇಟಿ ಮಾಡಲು ಬಿಡಲ್ಲ ಎಂದ ಅನಿತಾ ಕುಮಾರಸ್ವಾಮಿ
ಬಹಳ ನೋವಿನಿಂದ ಈ ಮಾತುಗಳನ್ನು ಹೇಳುತ್ತಿದ್ದೇನೆ ಅವರ ಬುದ್ಧಿಯನ್ನು ನೋಡಿಯೇ ಮಧುಗಿರಿ ಜನ ಸೋಲಿಸಿದ್ದಾರೆ. ಒಬ್ಬ ಮಾಜಿ ಪ್ರಧಾನಿಗಳ ಬಗ್ಗೆ ಕನಿಷ್ಟ ಗೌರವವಿಲ್ಲದೆ ಮಾತಾಡಿದ್ದಾರೆ, ಅಲ್ಲದೇ ದೇವೇಗೌಡರನ್ನು ಭೇಟಿ ಮಾಡುತ್ತೇನೆ ಅಂದಿದ್ದಾರೆ, ನಮ್ಮ ಮಾವನವರಿಗೆ ಹೇಳ್ತೀನಿ ಭೇಟಿ ಮಾಡೋದು ಬೇಡ ಎಂದು ಅನಿತಾ ಕುಮಾರಸ್ವಾಮಿ ತಿಳಿಸಿದರು.
ಇನ್ನೂ ಪ್ರತಿಭಟನೆ ನಿರತ ಪೌರ ಇಲಾಖೆಯ ಹೊರಗುತ್ತಿಗೆ ನೌಕರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಶಾಸಕಿ ಅನಿತಾ ಕುಮಾರಸ್ವಾಮಿ, ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಆಲಿಸಿದ್ದೇನೆ, ನೇರ ನೇಮಕಾತಿ ಮೂಲಕ ಮಾಡಿಕೊಳ್ಳದೆ ಕಂಟ್ರಾಕ್ಟರ್ ಮೂಲಕ ನೇಮಕಾತಿಗಳು ಆಗಿವೆ. EF, PF ಸಹ ಸರಿಯಾಗಿ ಕಟ್ಟುತ್ತಿಲ್ಲ ಜೊತೆಗೆ ಕೆಲಸದಲ್ಲಿ ರಕ್ಷಣೆ ಇಲ್ಲ ಈ ಬಗ್ಗೆ ಮುಂದಿನ ತಿಂಗಳಲ್ಲಿ ನಡೆಯುವ ವಿಧಾನಸಭೆ ಕಲಾಪದಲಗಲ್ಲಿ ಚರ್ಚೆ ಮಾಡುತ್ತೇನೆ ಎಂದು ಭರವಸೆ ನೀಡಿದರು

ಬಹಿರಂಗವಾಗಿ ಈ ಕೂಡಲೇ ಕ್ಷಮೆ ಯಾಚಿಸಲಿ
ಕೆ.ಎನ್.ರಾಜಣ್ಣ ಬಹಿರಂಗ ಕ್ಷಮೆಯಾಚಿಸಲಿ ಎಂದು ಬಿಡದಿಯಲ್ಲಿ ಮಾಗಡಿ ಕ್ಷೇತ್ರದ ಜೆಡಿಎಸ್ ಶಾಸಕ ಎ.ಮಂಜುನಾಥ್ ಆಗ್ರಹಿಸಿದರು. ರಾಜಣ್ಣ ಅವಿವೇಕತನದ ಪ್ರದರ್ಶನ ಮಾಡಿದ್ದಾರೆ. ಕೆ.ಎನ್.ರಾಜಣ್ಣ ತಾವು ನೀಡಿರುವ ಆಕ್ಷೇಪ ಅರ್ಹ ಹೇಳಿಕೆಗೆ ಬಹಿರಂಗವಾಗಿ ಕ್ಷಮೆ ಯಾಚನೆ ಮಾಡದಿದ್ದರೆ ನಾವೇನೂ ಎಂಬುದನ್ನು ತೋರಿಸುತ್ತೇವೆ ಎಂದು ಗುಡುಗಿದರು.
ಹಿರಿಯರ ಬಗ್ಗೆ ಇಂತಹ ಹೇಳಿಕೆ ಯಾರಿಗೂ ಸಹ ಶೋಭೆಯಲ್ಲ, ದೇವೇಗೌಡರು,ಕುಮಾರಣ್ಣ ವಿರುದ್ಧ ಮಾತನಾಡಿದವರೆಲ್ಲ ಏನೇನ್ ಆಗಿದ್ದಾರೆ ಗೊತ್ತಿದೆಯಲ್ವ ಇವರು ಅದೇ ಸಾಲಿನಲ್ಲಿ ನಿಲ್ಲುತ್ತಾರೆ . ಕೆ.ಎನ್.ರಾಜಣ್ಣ ತಮ್ಮ ಹೇಳಿಕೆಗೆ ಕ್ಷಮೆಯಾಚನೆ ಮಾಡದಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಕೆ.ಎನ್.ರಾಜಣ್ಣ ಬಹಿರಂಗವಾಗಿ ಈ ಕೂಡಲೇ ಕ್ಷಮೆ ಯಾಚಿಸಲಿ ಎಂದು ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ರಾಜಣ್ಣ ಸಾಯಲ್ವೇ, ನಾನು ಕೂಡಾ ಸಾಯೋದಿಲ್ವೇ
ಕೆ.ಎನ್.ರಾಜಣ್ಣ ಆಕ್ಷೇಪ ಅರ್ಹ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಖಂಡಿಸಿದರು. ದೇವೇಗೌಡರು ಯಾವುದೇ ಪಕ್ಷದವರು ಇರಬಹುದು ಅವರು ಪ್ರಧಾನಿ, ಮುಖ್ಯಮಂತ್ರಿ ಆಗಿದ್ದಂತವರು, ವಯಸ್ಸಿನಲ್ಲಿ, ರಾಜಕೀಯದಲ್ಲೂ ಹಿರಿಯ ಮುತ್ಸದಿ ಅವರ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು.
ರಾಜಣ್ಣ ಬಾಯಲ್ಲಿ ಆ ಮಾತು ಬಂದದ್ದು ಅಕ್ಷಮ್ಯ ಅಪರಾಧ. ದುಡುಕಿ ಆದರೂ ಈ ವಿಚಾರ ಶೋಭೆ ತರುವಂತಹದ್ದು ಅಲ್ಲ.ಯಾವುದೇ ಪಕ್ಷದವರು ಇರಲಿ ಹಿರಿಯರ ಬಗ್ಗೆ ಗೌರವ ಇರಬೇಕು. ವಿಧಾನಸೌಧದಲ್ಲಿ ಸಾಕಷ್ಟು ವರ್ಷ ಇದ್ದವರು ರಾಜಣ್ಣ, ಇನ್ನೂ ಒರಟುತನ ಅವರಲ್ಲಿ ಹೋಗಿಲ್ಲ, ಕೆ.ಎನ್.ರಾಜಣ್ಣ ಒರಟುತನ ಬಿಟ್ಟು ಮಾತನಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ, ಕೆ.ಎನ್.ರಾಜಣ್ಣ ನವರಿಗೆ ಸಲಹೆ ನೀಡಿದರು.
Recommended Video
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications