ಚನ್ನಪಟ್ಟಣ; ಗ್ರಾಮದಿಂದ ಹೋಗದಂತೆ ಅರಣ್ಯ ಇಲಾಖೆ ಸಿಬ್ಬಂದಿ ತಡೆದ ಗ್ರಾಮಸ್ಥರು
ರಾಮನಗರ, ಅಕ್ಟೋಬರ್ 26: ಕಾಡು ಪ್ರಾಣಿಗಳ ನಿರಂತರ ಹಾವಳಿಗೆ ಹೈರಾಣಾಗಿರುವ ಚನ್ನಪಟ್ಟಣ ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ರೈತರು ಗ್ರಾಮಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮದಿಂದ ಹೊರ ಹೋಗದಂತೆ ತಡೆದಿದ್ದಾರೆ.
ವನ್ಯಜೀವಿಗಳ ಹಾವಳಿಗೆ ಬೇಸತ್ತು ಅರಣ್ಯಾಧಿಕಾರಿಗಳನ್ನು ಗ್ರಾಮದಿಂದ ಹೊರ ಹೋಗದಂತೆ ತಡೆದಿರುವ ಮೂರನೇ ಪ್ರಕರಣ ಇದಾಗಿದೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಸಿಂಗರಾಜಿಪುರ, ಕೋಡಂಬಳ್ಳಿ ಹಾಗೂ ಅರಳಾಳುಸಂದ್ರ ಗ್ರಾಮಗಳಲ್ಲಿ ಇದೇ ರೀತಿ ಅರಣ್ಯಾಧಿಕಾರಿಗಳಿಗೆ ದಿಗ್ಭಂದನ ವಿಧಿಸಲಾಗಿತ್ತು.
ಅರಣ್ಯ ಸಿಬ್ಬಂದಿಯನ್ನು ಗ್ರಾಮದ ದೇವಾಲಯದ ಆವರಣದಲ್ಲಿ ಕೂರಿಸಿರುವ ರೈತರು, ಎಷ್ಟೇ ದಿನವಾದರೂ ಸರಿ ಅರಣ್ಯ ಸಿಬ್ಬಂದಿಗೆ ಊಟ ತಿಂಡಿ ವ್ಯವಸ್ಥೆ ಮಾಡುತ್ತೇವೆ. ಮೇಲಾಧಿಕಾರಿಗಳು ಸ್ಥಳಕ್ಕೆ ಬಂದು ಶಾಶ್ವತ ಪರಿಹಾರದ ಭರವಸೆ ನೀಡುವವರೆಗೆ ಗ್ರಾಮದಿಂದ ಸಿಬ್ಬಂದಿ ಹೊರ ಹೋಗಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟುಹಿಡಿದ್ದಾರೆ.

ತಾಲ್ಲೂಕಿನ ವಿರೂಪಾಕ್ಷಪುರ, ಬಿವಿ ಹಳ್ಳಿ ಕೊಡಂಬಳ್ಳಿ, ಸಿಂಗರಾಜಿಪುರ, ಹನಿಯೂರು, ಕಬ್ಬಾಳು, ಸಾತನೂರು ಸೇರಿದಂತೆ ಸುತ್ತಮುತ್ತಲಿನ ಹಲವಾರು ಗ್ರಾಮಗಳಲ್ಲಿ ನಿರಂತರವಾಗಿ ಕಾಡಾನೆಗಳು ದಾಳಿ ಮಾಡಿ ನೂರಾರು ಬಾಳೆ ಗಿಡ, ಮಾವಿನ ಮರ, ತೆಂಗಿನ ಮರಗಳು ಸೇರಿದಂತೆ ಇನ್ನಿತರ ಬೆಳೆಗಳನ್ನು ನಾಶ ಮಾಡುತ್ತಿರುವುದರಿಂದ ರೈತರು ಹೈರಾಣಾಗಿದ್ದಾರೆ.
Recommended Video
ಕಾಡಾನೆಗಳ ಹಾವಳಿ ಮೀತಿ ಮೀರಿದ್ದರು ಕ್ರಮ ಕೈಗೊಳ್ಳುವಲ್ಲಿ ಅರಣ್ಯಾ ಇಲಾಖೆ ವಿಫಲವಾಗಿದೆ. ಪ್ರತಿ ಬಾರಿ ಆನೆ ದಾಳಿ ನಡೆದಾಗ ಸ್ಥಳಕ್ಕೆ ಬರುವ ಅರಣ್ಯಾಧಿಕಾರಿಗಳು ಬೆಳೆ ನಷ್ಟ ಪರಿಹಾರ ನೀಡುವ ಭರವಸೆ ನೀಡಿ ಕೈ ತೊಳೆದುಕೊಳ್ಳುತ್ತಾರೆ. ಮತ್ತೆ ಅರಣ್ಯಾಧಿಕಾರಿಗಳು ಬರುವುದು ಆನೆ ದಾಳಿ ನಡೆದಾಗಷ್ಟೆ. ಈಗ ವ್ಯವಸಾಯ ಮಾಡುವುದನ್ನೇ ನಿಲ್ಲಿಸಿದ್ದೇವೆ ಎನ್ನುತ್ತಾರೆ ರೈತರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications