ಚನ್ನಪಟ್ಟಣ; ಗ್ರಾಮದಿಂದ ಹೋಗದಂತೆ ಅರಣ್ಯ ಇಲಾಖೆ ಸಿಬ್ಬಂದಿ ತಡೆದ ಗ್ರಾಮಸ್ಥರು
ರಾಮನಗರ, ಅಕ್ಟೋಬರ್ 26: ಕಾಡು ಪ್ರಾಣಿಗಳ ನಿರಂತರ ಹಾವಳಿಗೆ ಹೈರಾಣಾಗಿರುವ ಚನ್ನಪಟ್ಟಣ ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ರೈತರು ಗ್ರಾಮಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮದಿಂದ ಹೊರ ಹೋಗದಂತೆ ತಡೆದಿದ್ದಾರೆ.
ವನ್ಯಜೀವಿಗಳ ಹಾವಳಿಗೆ ಬೇಸತ್ತು ಅರಣ್ಯಾಧಿಕಾರಿಗಳನ್ನು ಗ್ರಾಮದಿಂದ ಹೊರ ಹೋಗದಂತೆ ತಡೆದಿರುವ ಮೂರನೇ ಪ್ರಕರಣ ಇದಾಗಿದೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಸಿಂಗರಾಜಿಪುರ, ಕೋಡಂಬಳ್ಳಿ ಹಾಗೂ ಅರಳಾಳುಸಂದ್ರ ಗ್ರಾಮಗಳಲ್ಲಿ ಇದೇ ರೀತಿ ಅರಣ್ಯಾಧಿಕಾರಿಗಳಿಗೆ ದಿಗ್ಭಂದನ ವಿಧಿಸಲಾಗಿತ್ತು.
ಅರಣ್ಯ ಸಿಬ್ಬಂದಿಯನ್ನು ಗ್ರಾಮದ ದೇವಾಲಯದ ಆವರಣದಲ್ಲಿ ಕೂರಿಸಿರುವ ರೈತರು, ಎಷ್ಟೇ ದಿನವಾದರೂ ಸರಿ ಅರಣ್ಯ ಸಿಬ್ಬಂದಿಗೆ ಊಟ ತಿಂಡಿ ವ್ಯವಸ್ಥೆ ಮಾಡುತ್ತೇವೆ. ಮೇಲಾಧಿಕಾರಿಗಳು ಸ್ಥಳಕ್ಕೆ ಬಂದು ಶಾಶ್ವತ ಪರಿಹಾರದ ಭರವಸೆ ನೀಡುವವರೆಗೆ ಗ್ರಾಮದಿಂದ ಸಿಬ್ಬಂದಿ ಹೊರ ಹೋಗಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟುಹಿಡಿದ್ದಾರೆ.

ತಾಲ್ಲೂಕಿನ ವಿರೂಪಾಕ್ಷಪುರ, ಬಿವಿ ಹಳ್ಳಿ ಕೊಡಂಬಳ್ಳಿ, ಸಿಂಗರಾಜಿಪುರ, ಹನಿಯೂರು, ಕಬ್ಬಾಳು, ಸಾತನೂರು ಸೇರಿದಂತೆ ಸುತ್ತಮುತ್ತಲಿನ ಹಲವಾರು ಗ್ರಾಮಗಳಲ್ಲಿ ನಿರಂತರವಾಗಿ ಕಾಡಾನೆಗಳು ದಾಳಿ ಮಾಡಿ ನೂರಾರು ಬಾಳೆ ಗಿಡ, ಮಾವಿನ ಮರ, ತೆಂಗಿನ ಮರಗಳು ಸೇರಿದಂತೆ ಇನ್ನಿತರ ಬೆಳೆಗಳನ್ನು ನಾಶ ಮಾಡುತ್ತಿರುವುದರಿಂದ ರೈತರು ಹೈರಾಣಾಗಿದ್ದಾರೆ.
Recommended Video
ಕಾಡಾನೆಗಳ ಹಾವಳಿ ಮೀತಿ ಮೀರಿದ್ದರು ಕ್ರಮ ಕೈಗೊಳ್ಳುವಲ್ಲಿ ಅರಣ್ಯಾ ಇಲಾಖೆ ವಿಫಲವಾಗಿದೆ. ಪ್ರತಿ ಬಾರಿ ಆನೆ ದಾಳಿ ನಡೆದಾಗ ಸ್ಥಳಕ್ಕೆ ಬರುವ ಅರಣ್ಯಾಧಿಕಾರಿಗಳು ಬೆಳೆ ನಷ್ಟ ಪರಿಹಾರ ನೀಡುವ ಭರವಸೆ ನೀಡಿ ಕೈ ತೊಳೆದುಕೊಳ್ಳುತ್ತಾರೆ. ಮತ್ತೆ ಅರಣ್ಯಾಧಿಕಾರಿಗಳು ಬರುವುದು ಆನೆ ದಾಳಿ ನಡೆದಾಗಷ್ಟೆ. ಈಗ ವ್ಯವಸಾಯ ಮಾಡುವುದನ್ನೇ ನಿಲ್ಲಿಸಿದ್ದೇವೆ ಎನ್ನುತ್ತಾರೆ ರೈತರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications