ದೇವಾಲಯದ ಆಸ್ತಿ ಉಳಿಸಲು ಉಪವಾಸ ಕುಳಿತ 98ರ ವಯೋವೃದ್ಧ
ರಾಮನಗರ, ಆಗಸ್ಟ್.26: ಆ ವಯೋವೃದ್ಧನಿಗೆ 98 ವರ್ಷ. ಹಲವಾರು ವರ್ಷಗಳಿಂದ ಪ್ರಧಾನ ಅರ್ಚಕರಾಗಿ ಪೂಜೆ ಪುನಸ್ಕಾರ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ದೇವಾಲಯಕ್ಕೆ ಸೇರಿದ ಜಾಗವನ್ನು ಅಕ್ರಮವಾಗಿ ವ್ಯಕ್ತಿಯೊಬ್ಬರು ಕಬಳಿಸಿದ್ದಾರೆ.
ಇದರಿಂದ ಮನನೊಂದ ವಯೋವೃದ್ಧ ಅಕ್ರಮವಾಗಿ ಒತ್ತುವರಿಯಾಗಿರುವ ಜಾಗವನ್ನು ದೇವಾಲಯಕ್ಕೆ ಬಿಡುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಅಮರಣಾಂತ ಉಪವಾಸ ನಡೆಸುತ್ತಿದ್ದಾರೆ.
ಹಾಸಿಗೆ ಹಿಡಿದು ಮಲಗಿದ್ದಲ್ಲೇ ಹೋರಾಟ ನಡೆಸುತ್ತಿರುವ ವೃದ್ಧನ ಹೋರಾಟಕ್ಕೆ ಗ್ರಾಮಸ್ಥರೂ ಸಾಥ್ ನೀಡಿದ್ದಾರೆ.

ಅಂದಹಾಗೆ ಈ ಜಾಗ ಒತ್ತುವರಿ ಮಾಡಿಕೊಂಡಿರುವುದು ಹುಲಿಕಲ್ ಗ್ರಾಮದ ಅರುಣಚಲೇಶ್ವರ ದೇವಾಲಯದ ಜಾಗದಲ್ಲಿ. ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಇದೀಗ ವಯೋವೃದ್ಧ ಮಾಗಡಿ ರಾಯಪ್ಪ ಎಂಬುವವರು ಅಮರಣಾಂತ ಉಪವಾಸ ನಡೆಸುತ್ತಿದ್ದಾರೆ.
ಆಗಸ್ಟ್ 23ರ ಗುರುವಾರದಿಂದ ದೇವಾಲಯದ ಆವರಣದಲ್ಲೇ ಮಾಗಡಿ ರಾಯಪ್ಪ ಅಕ್ರಮಿಸಿಕೊಂಡಿರುವ ಜಾಗವನ್ನು ದೇವಾಲಯಕ್ಕೆ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ.
"ಈ ಹಿಂದೆ ದೇವಾಲಯಕ್ಕೆ ತಮ್ಮದೇ ಕುಟುಂಬದವರು ದಾನವಾಗಿ ನೀಡಿರುವ ಜಮೀನೆಲ್ಲವನ್ನು ಈಗಾಗಲೇ ತಿಂದು ತೇಗಿದ್ದಾರೆ. ಇದೀಗ ದೇವಾಲಯದ ಆಸ್ತಿಗೂ ಸಹ ಕಣ್ಣು ಬಿದ್ದಿದ್ದು ಅತಿಕ್ರಮವಾಗಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟುತ್ತಿದ್ದಾರೆ.

ದೇವಾಲಯದ ಜಾಗ ದೇವಾಲಯಕ್ಕೆ ಹಿಂತಿರುಗಿ ನೀಡುವವರೆಗೂ ತಾವು ಅಮರಣಾಂತ ಉಪವಾಸ ಕೈ ಬಿಡುವುದಿಲ್ಲವೆಂದು" ಮಾಗಡಿ ರಾಯಪ್ಪ ಪಟ್ಟು ಹಿಡಿದಿದ್ದಾರೆ.
ಹುಲಿಕಲ್ ಗ್ರಾಮದಲ್ಲಿನ ಸರ್ವೇ ನಂಬರ್ 424/2 ರಲ್ಲಿನ 16 ಗುಂಟೆ ಜಾಗ ಅರುಣಾಚಲೇಶ್ವರ ದೇವಾಲಯಕ್ಕೆ ಸೇರಿದ್ದಾಗಿದೆ. ಈ ಹಿಂದೆ ಅರ್ಚಕ ರಾಯಪ್ಪನವರ ಕುಟುಂಬದವರು ದೇವಾಲಯಕ್ಕೆ 18 ಎಕರೆ ಜಮೀನನ್ನು ದಾನವಾಗಿ ನೀಡಿದರು.
ಈಗಾಗಲೇ ಬಹುತೇಕ 18 ಎಕರೆ ಜಮೀನು ಎಲ್ಲವೂ ಭೂಗಳ್ಳರ ಪಾಲಾಗಿದ್ದು, ಉಳಿದಿದ್ದು ಮಾತ್ರ ದೇವಾಲಯದ ಜಾಗವಾಗಿತ್ತು. ದೇವಾಲಯದ 16 ಗುಂಟೆ ಜಾಗದಲ್ಲಿ 4 ಗುಂಟೆ ಪುರಾತನಕಲ್ಯಾಣಿ, 4 ಗುಂಟೆ ಜಾಗದಲ್ಲಿ ಹಳೆಯಮಂಟಪ, 3 ಗುಂಟೆ ಜಾಗದಲ್ಲಿ ಅರ್ಚಕರ ಮನೆಗಳನ್ನು ನಿರ್ಮಾಣ ಮಾಡಲಾಗಿತ್ತು.

ಆದರೆ ಕಳೆದ ಮೂರು ವರ್ಷಗಳ ಹಿಂದೆ ಹುಲಿಕಲ್ ಗ್ರಾಮಪಂಚಾಯತ್ ಕಾರ್ಯದರ್ಶಿಯಾಗಿದ್ದ ವೆಂಕಟೇಶ್ ಎಂಬುವವರು ದಾಖಲೆಗಳನ್ನು ತಿದ್ದಿ, ತಮ್ಮ ತಂದೆ-ತಾಯಿಯಾದ ಕಾಳಹೊನ್ನಯ್ಯ ಹಾಗೂ ಮಲ್ಲಮ್ಮ ದಂಪತಿಗಳ ಹೆಸರಿನಲ್ಲಿ 4 ಗುಂಟೆ ಜಾಗವನ್ನು ನೊಂದಣಿ ಮಾಡಿಸಿಕೊಂಡಿದ್ದಾರೆ.
ಇದೀಗ ಪುರಾತನ ಮಂಟಪಗಳಿದ್ದ ಜಾಗದಲ್ಲಿ ಮಂಟಪಗಳನ್ನು ಕೆಡವಿ ಮನೆ ನಿರ್ಮಾಣ ಮಾಡುತ್ತಿದ್ದಾರೆ. ಹೀಗಾಗಿ ವಯೋವೃದ್ಧ ಅರ್ಚಕ ರಾಯಪ್ಪ ಅಮರಣಾಂತ ಉಪವಾಸ ನಡೆಸುತ್ತಿದ್ದಾರೆ. ಕೂಡಲೇ ಸರ್ವೇ ಕಾರ್ಯ ನಡೆಸಿ ಒತ್ತುವರಿ ಜಾಗವನ್ನು ದೇವಾಲಯಕ್ಕೆ ಹಸ್ತಾಂತರ ಮಾಡುವಂತೆ ಗ್ರಾಮಸ್ಥರು ಕೂಡ ಆಗ್ರಹಿಸಿದ್ದಾರೆ.
ಒಟ್ಟಾರೆ ಇಳಿವಯಸ್ಸಿನಲ್ಲೂ ಸಹ ಅಕ್ರಮದ ವಿರುದ್ಧ ವಯೋವೃದ್ದ ರಾಯಪ್ಪ ಹೋರಾಟಕ್ಕಿಳಿದಿದ್ದಾರೆ. ದೇವಾಲಯಕ್ಕೆ ನೀಡಿದ ಜಾಗವನ್ನು ಮರಳಿ ದೇವಾಲಯಕ್ಕೆ ನೀಡುವಂತೆ ಉಪವಾಸ ಸತ್ಯಾಗ್ರಹಕ್ಕೆ ಕೂತಿದ್ದಾರೆ. ಇನ್ನಾದರೂ ವಯೋವೃದ್ದರ ಹೋರಾಟಕ್ಕೆ ಜಿಲ್ಲಾಡಳಿತ ಸ್ಪಂದಿಸಿ ಸರ್ವೇ ಕಾರ್ಯ ನಡೆಸಿ ಅಕ್ರಮದ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications