AC Manjunath raid info: ರಾಮನಗರ ಎಸಿ ಮಂಜುನಾಥ್ ಬೇನಾಮಿ ಆಸ್ತಿ ವಿವರ
ಬೆಂಗಳೂರು/ರಾಮನಗರ, ಮಾ. 16: ರಾಜ್ಯದಲ್ಲಿ ಬುಧವಾರ ಬೆಳಗಿನ ಜಾವ ಎಸಿಬಿ ದಾಳಿಗೆ ಒಳಗಾದ ಹದಿನೆಂಟು ಭ್ರಷ್ಟರು ನಿದ್ದೆಗೆಟ್ಟಿದ್ದಾರೆ. ಮಾತ್ರವಲ್ಲ, ಈ ಭ್ರಷ್ಟ ಅಧಿಕಾರಿಗಳ ಸಂಪತ್ತು ಲೆಕ್ಕ ಹಾಕಲು ಸಾಧ್ಯವಾಗದೇ ಎಸಿಬಿ ಅಧಿಕಾರಿಗಳೂ ನಿದ್ದೆ ಕೆಟ್ಟಿದ್ದಾರೆ. ನಾಳೆಯೂ ಮುಂದುವರೆಸಲಿದ್ದು, ಸಂಜೆ ವೇಳೆಗೆ ಸಿಕ್ಕ ಅಕ್ರಮ ಸಂಪತ್ತಿನ ಲೆಕ್ಕಾಚಾರ ಇಲ್ಲಿ ನೀಡಲಾಗಿದೆ.
ಬಾಯಲ್ಲಿ ಭಗವದ್ಗೀತೆ: ಮಾಡಿದ್ದು ಬ್ಯಾಟ್ಮಿಟನ್ ಕೋರ್ಟ್!
ಇದು ರಾಮನಗರ ಎಸಿ ಸಿ. ಮಂಜುನಾಥ್ ಅವರಿಗೆ ಅನ್ವಯಿಸುವ ಸತ್ಯ. 2021 ರಲ್ಲಿ ರಾಮನಗರದಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಎಸಿ ಸಿ. ಮಂಜುನಾಥ್ ನೀಡಿದ್ದ ಹೇಳಿಕೆ ದೊಡ್ಡ ಸುದ್ದಿಯಾಗಿತ್ತು. ಎಲ್ಲರೂ ನಿಷ್ಠೆಯಿಂದ, ದಕ್ಷತೆಯಿಂದ ಹಗಲಿರುಳು ಕೆಲಸ ಮಾಡಲು ಸೂಚಿಸಿದ್ದೇನೆ. ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ ಕೊರೊನಾ ಸೋಂಕು ತಡೆಗೆ ಹಗಲಿರುಳು ಶ್ರಮಿಸುತ್ತಿದ್ದೇವೆ ಎಂದು ಹೇಳಿದ್ದರು. ಅವರ ಹೇಳಿಕೆ ದಾಟಿ ಮಾಧ್ಯಮಗಳಲ್ಲಿ ನೋಡಿ ಜನ ಹಳ್ಳಿ ಹಿನ್ನೆಲೆ ಅಧಿಕಾರಿ ಜನರ ಬಗ್ಗೆ ಅದೆಷ್ಟು ಕಾಳಜಿ ಇಟ್ಟಿದ್ದಾರೆ ಎಂದು ಚಪ್ಪಾಳೆ ಹೊಡೆದಿದ್ದರು.
ಬುಧವಾರ ಎಸಿಬಿ ದಾಳಿಗೆ ಒಳಗಾದ ರಾಮನಗರ ಉಪ ವಿಭಾಗಾಧಿಕಾರಿ ಮಂಜುನಾಥ್ ಆಸ್ತಿ ನೋಡಿ ಎಸಿಬಿ ಅಧಿಕಾರಿಗಳೇ ಮೂರ್ಛೆ ಹೋಗಿದ್ದಾರೆ. ಯಾಕೆಂದರೆ ಎಸಿ ಮಂಜುನಾಥ್ ಕಟ್ಟಿರುವ ಏಳು ಬ್ಯಾಡ್ಮಿಂಟನ್ ಕೋರ್ಟ್ ಗಳ ಖದರ್ ನೋಡಿ ದಂಗಾಗಿದ್ದಾರೆ. ಅಲ್ಲದೇ ಮಂಜುನಾಥ ಫಾರ್ಮ್ ಹೌಸ್, ಕೃಷಿ, ಜಮೀನುಗಳನ್ನು ನೋಡಿ ಎಸಿಬಿ ಅಧಿಕಾರಿಗಳೇ ಬೆಚ್ಚಿ ಬಿದ್ದದ್ದಾರೆ.

ರಾಮನಗರ ಎಸಿ ಮಂಜುನಾಥ್ ಅವರು ಅಕ್ರಮ ಆಸ್ತಿ ಗಳಿಸಿರುವ ಮಾಹಿತಿ ಆಧರಿಸಿ ಐಪಿಎಸ್ ಅಧಿಕಾರಿ ಕಲಾಕೃಷ್ಣಮೂರ್ತಿ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಬ್ಯಾಟರಾಯನಪುರದಲ್ಲಿ ನಾಲ್ಕು ಹಂತಸ್ತಿನ ಮನೆ, ಸುಗ್ಗಟ್ಟದಲ್ಲಿಎರಡು ಖಾಲಿ ನಿವೇಶನ, ಯಲಯಂಕ ಹೋಬಳಿ ಬ್ಯಾಟರಾನಪುರದಲ್ಲಿ ಏಳು ಬ್ಯಾಡ್ಮಿಂಟನ್ ಕೋರ್ಟ್ ಮತ್ತು ಆಟದ ಮೈದಾನ, 710 ಗ್ರಾಂ ಚಿನ್ನಾಭರಣ, ಮೂರು ಕೆ.ಜಿ. ಬೆಳ್ಳಿ ಆಭರಣ ಸಿಕ್ಕಿದೆ.

ಇದಲ್ಲದೇ ಹೆಸರಘಟ್ಟ ಹೋಬಳಿ ಕುಕ್ಕನಹಳ್ಳಿಯಲ್ಲಿ ಫಾರ್ಮ ಹೌಸ್, ಕುಕ್ಕನಹಳ್ಳಿಯಲ್ಲಿ 16 ಗುಂಟೆ ಜಮೀನು, ದೊಡ್ಡಬಳ್ಳಾಪುರ ರಸ್ತೆಯ ಕೋಳಾಲು ನಲ್ಲಿ ಒಂದೂವರೆ ಎಕರೆ ಜಮೀನು, ಐದು ವಿವಿಧ ಕಂಪನಿಯ ಕಾರು, 19 ಲಕ್ಷ ರೂ. ನಗದು, ಉಳಿತಾಯ ಖಾತೆಯಲ್ಲಿ 60 ಲಕ್ಷ ರೂ. ಹಣ ದೊರೆತಿದೆ.

ಕೆಎಎಸ್ ಅಧಿಕಾರಿ ಎಸಿ ಮಂಜುನಾಥ ಆಸ್ತಿ ನೋಡಿ ಎಸಿಬಿ ಅಧಿಕಾರಿಗಳು ದಂಗಾಗಿದ್ದಾರೆ. ಇವುಗಳ ಮಾರುಕಟ್ಟೆ ಮೌಲ್ಯ ಕೋಟಿಗಳು ದಾಟುತ್ತದೆ. ಮಂಜುನಾಥ್ ನೂರು ವರ್ಷ ಸೇವೆ ಮಾಡಿದರೂ ಕಾನೂನು ಬದ್ಧವಾಗಿ ಇದರಲ್ಲಿ ಅರ್ಧ ಆಸ್ತಿ ಮಾಡಲು ಸಾಧ್ಯವಿಲ್ಲ. ಆದರೆ ಈ ಪ್ರಮಾಣದ ಆಸ್ತಿ ಯಾವ ಆದಾಯದಿಂದ ಮಾಡಿದ್ದಾರೆ ಎಂಬುದನ್ನು ಮಂಜುನಾಥ್ ಸಮರ್ಥನೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಕೊರೊನಾ ಸಮಯದಲ್ಲಿ ಜನ ಮನ ಗೆದ್ದಿದ್ದ ಮಂಜುನಾಥ್ ಅವರ ಅಕ್ರಮ ಆಸ್ತಿ ಸಂಪತ್ತು ನೋಡಿ ಜನರು ಬಾಯಲ್ಲಿ ಭಗವದ್ಗೀತೆ , ಮಾಡಿದ್ದು ಮಾತ್ರ ಬೇನಾಮಿ ಆಸ್ತಿ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications