ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನಂದ್ ಸಿಂಗ್ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಗಣೇಶ್ ಅರ್ಜಿ

|
Google Oneindia Kannada News

ಬೆಂಗಳೂರು, ಜನವರಿ 22: ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್​ನಲ್ಲಿ ಶಾಸಕರು ಬಡಿದಾಡಿಕೊಂಡ ಪ್ರಕರಣದ ತನಿಖೆಯನ್ನು ರಾಮನಗರ ಪೊಲೀಸರು ಚುರುಕುಗೊಳಿಸಿದ್ದಾರೆ.

ಈ ನಡುವೆ ಈ ಪ್ರಕರಣದ ಪ್ರಮುಖ ಆರೋಪಿ ಕಂಪ್ಲಿ ಶಾಸಕ ಜೆಎನ್ ಗಣೇಶ್ ಅವರು ರಾಮನಗರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಶಾಸಕರು ಹೊಡೆದಾಡಿ ರಂಪಾಟ ಮಾಡಿಕೊಳ್ಳಲು ಕಾರಣಗಳೇನು? ಶಾಸಕರು ಹೊಡೆದಾಡಿ ರಂಪಾಟ ಮಾಡಿಕೊಳ್ಳಲು ಕಾರಣಗಳೇನು?

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ್ ಸಿಂಗ್ ಅವರು ಕಂಪ್ಲಿ ಶಾಸಕ ಗಣೇಶ್ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ ಅವರು ಈ ಕೇಸಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಹೇಳಿಕೆಯನ್ನು ನೀಡಿದ್ದರು. ಗಣೇಶ್ ವಿರುದ್ಧ ಆನಂದ್ ಸಿಂಗ್ ಹಾಗೂ ಅವರ ಕುಟುಂಬದವರು ನೀಡಿದ ಹೇಳಿಕೆ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಎಫ್ಐಆರ್ ಹಾಕಿದ್ದಾರೆ.

ಗಣೇಶ್ ಪರ ನಿರೀಕ್ಷಣಾ ಜಾಮೀನಿಗೆ ನ್ಯಾಯವಾದಿ ಹನುಮಂತರಾಯಪ್ಪ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ರಮೇಶ್‌ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದ್ದು ಕಾರ್ಯಾಚರಣೆ ನಡೆಯುತ್ತಿದೆ.

ಏಟು ತಿಂದು ಮಲಗಿರುವ ಶಾಸಕ ಆನಂದ್ ಸಿಂಗ್ ನೀಡಿದ್ದಾರೆ ಶಾಕಿಂಗ್ ಹೇಳಿಕೆ ಏಟು ತಿಂದು ಮಲಗಿರುವ ಶಾಸಕ ಆನಂದ್ ಸಿಂಗ್ ನೀಡಿದ್ದಾರೆ ಶಾಕಿಂಗ್ ಹೇಳಿಕೆ

ಜನವರಿ 19ರ ಶನಿವಾರ ರಾತ್ರಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಮತ್ತು ಆನಂದ್ ಸಿಂಗ್ ನಡುವೆ ಈಗಲ್ಟನ್ ರೆಸಾರ್ಟ್‌ನಲ್ಲಿ ಹೊಡೆದಾಟ ನಡೆದಿತ್ತು. ಜನವರಿ 20ರ ಭಾನುವಾರ ಬೆಳಗ್ಗೆ ಆನಂದ್ ಸಿಂಗ್ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿರೀಕ್ಷಣಾ ಜಾಮೀನಿಗೆ ಅರ್ಜಿ

ನಿರೀಕ್ಷಣಾ ಜಾಮೀನಿಗೆ ಅರ್ಜಿ

ಗಣೇಶ್ ಪರ ನಿರೀಕ್ಷಣಾ ಜಾಮೀನಿಗೆ ನ್ಯಾಯವಾದಿ ಹನುಮಂತರಾಯಪ್ಪ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ರಮೇಶ್‌ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದ್ದು ಕಾರ್ಯಾಚರಣೆ ನಡೆಯುತ್ತಿದೆ.

ಜನವರಿ 19ರ ಶನಿವಾರ ರಾತ್ರಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಮತ್ತು ಆನಂದ್ ಸಿಂಗ್ ನಡುವೆ ಈಗಲ್ಟನ್ ರೆಸಾರ್ಟ್‌ನಲ್ಲಿ ಹೊಡೆದಾಟ ನಡೆದಿತ್ತು. ಜನವರಿ 20ರ ಭಾನುವಾರ ಬೆಳಗ್ಗೆ ಆನಂದ್ ಸಿಂಗ್ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಯಾವ ಐಪಿಸಿ ಸೆಕ್ಷನ್ ನಲ್ಲಿ ಕೇಸು ದಾಖಲು

ಯಾವ ಐಪಿಸಿ ಸೆಕ್ಷನ್ ನಲ್ಲಿ ಕೇಸು ದಾಖಲು

ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೆ.ಎನ್.ಗಣೇಶ್ ಮೊದಲ ಆರೋಪಿಯಾಗಿದ್ದಾರೆ. ಐಪಿಸಿ ಸೆಕ್ಷನ್ 323, 324, 307, 504 ಹಾಗೂ 506ರ ಅಡಿ ಪ್ರಕರಣವನ್ನು ಪೊಲೀಸರು ದಾಖಲು ಮಾಡಿದ್ದಾರೆ. ಮಾರಣಾಂತಿಕ ಹಲ್ಲೆ ನಡೆಸಿದ್ದರಿಂದ ಕೊಲೆ ಯತ್ನ ಪ್ರಕರಣ ದಾಖಲು ಮಾಡಲಾಗಿದೆ.

ಕಂಪ್ಲಿ ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್ ಬಿಜೆಪಿಗೆ?ಕಂಪ್ಲಿ ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್ ಬಿಜೆಪಿಗೆ?

ಬಂಧನ ಸಾಧ್ಯತೆ ಕಡಿಮೆ

ಬಂಧನ ಸಾಧ್ಯತೆ ಕಡಿಮೆ

ಎಫ್‌ಐಆರ್ ದಾಖಲಾದರೂ ಜೆ.ಎನ್.ಗಣೇಶ್ ಅವರನ್ನು ಬಂಧಿಸುವ ಸಾಧ್ಯತೆ ಕಡಿಮೆ ಇದೆ. ಶಾಸಕರ ವಿರುದ್ಧ 323 (ಹಲ್ಲೆ), 324 (ದೊಣ್ಣೆಯಿಂದ ಹಲ್ಲೆ), 307 (ಕೊಲೆಯತ್ನ), 504 (ಉದ್ದೇಶ ಪೂರ್ವಕ ಶಾಂತಿ ಕದಡುವುದು), 506 (ಜೀವ ಬೆದರಿಕೆ) ಪ್ರಕರಣಗಳನ್ನು ದಾಖಲಿಸಲಾಗಿದೆ. ಶಾಸರಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಅತಂತ್ರ ಸ್ಥಿತಿಯಲ್ಲಿ ಕಂಪ್ಲಿ ಶಾಸಕ

ಅತಂತ್ರ ಸ್ಥಿತಿಯಲ್ಲಿ ಕಂಪ್ಲಿ ಶಾಸಕ

ಮತ್ತೊಂದು ಕಡೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆದೇಶದ ಮೇರೆಗೆ ಜೆ.ಎನ್.ಗಣೇಶ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲು ವಿಚಾರಣಾ ಸಮಿತಿ ರಚನೆ ಮಾಡಲಾಗಿದೆ.

English summary
Asssualt on MLA Anand Singh : Kampli MLA JN Ganesh who is accused in assault case is absconding and has applied for .anticipatory bail. Ramanagara Police searching for him. MLA Anand Singh is getting treatment in Apollo Hospital, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X