Bengaluru-Mysuru Expressway: ಟೋಲ್‌ ಸಿಬ್ಬಂದಿ ಹತ್ಯೆಗೈದ ಕಾರಿನಲ್ಲಿ ಬಂದಿದ್ದ ಯುವಕರ ತಂಡ

Bengaluru - Mysuru Expressway Murder: ರಾಮನಗರ, ಜೂನ್‌, 05: ಮೈಸೂರು-ಎಕ್ಸ್‌ಪ್ರೆಸ್‌ ವೇ ಆದಾಗಿನಿಂದ ಟೋಲ್‌ ವಿಚಾರವಾಗಿ ವಾಹನ ಸವಾರರು ಮತ್ತು ಟೋಲ್‌ ಸಿಬ್ಬಂದಿಗಳ ನಡುವೆ ಗಲಾಟೆಗಳು ಆಗುತ್ತಿದ್ದವು. ನಿನ್ನೆ ರಾತ್ರಿ ಮತ್ತೆ ಟೋಲ್‌ ಕಟ್ಟುವ ವಿಚಾರಕ್ಕೆ ಟೋಲ್‌ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಬೆಂಗಳೂರು ಮೂಲದ ಯುವಕರ ನಡುವೆ ಮಾರಾಮಾರಿ ನಡೆದಿದೆ. ಈ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ಯ ಟೋಲ್ ಫ್ಲಾಜಾ ಬಳಿ ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಮಾರಾಮಾರಿ ನಡೆದಿದೆ. ಇದೇ ವೇಳೆ ಕಾರಿನಲ್ಲಿದ್ದ ಯುವಕರು ಟೋಲ್​ನಲ್ಲಿ ಕೆಲಸ ಮಾಡುತ್ತಿದ್ದ ಪವನ್ ​ಕುಮಾರ್​(26) ಎಂಬಾತನನ್ನು ಕೊಲೆ ಮಾಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

Bengaluru-Mysuru Expressway Murder: Group of Men in Car Killed Toll Personnel for Demanding Toll Fee

ಹತ್ಯೆಯಾದ ಪವನ್ ​​ಕುಮಾರ್ ಅವರು ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಸಿಕ್ಕೆಪಾಳ್ಯದ ನಿವಾಸಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಟೋಲ್‌ನಲ್ಲಿ ಕೆಲಸ ಮುಗಿಸಿ ಊಟಕ್ಕೆ ಹೋದ ಸಂದರ್ಭದಲ್ಲಿ ಕಾರಿನಲ್ಲಿ ಬಂದಿದ್ದ ಯುವಕರ ತಂಡವೊಂದು ಪವನ್ ‌ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಟೋಲ್​ನಿಂದಲೂ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಪವನ್ ಕುಮಾರ್‌ ಅವರನ್ನು​​ ಹತ್ಯೆ ಮಾಡಿದ್ದಾರೆ. ಭಾನುವಾರ ರಾತ್ರಿ ಟೋಲ್ ಬಳಿ ಗಲಾಟೆ ನಡೆದಿತ್ತು. ನಂತರ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಊಟಕ್ಕೆ ಪವನ್ ಅವರು ಹೊರಟ್ಟಿದ್ದರು.

ಈ ವೇಳೆ ಹಿಂಬಾಲಿಸಿದ ಯುವಕರು ಆತನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಈ ಘಟನೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಹತ್ಯೆ ಮಾಡಿದ ಆರೋಪಿಗಳಿಗಾಗಿ ಇದೀಗ ಬಿಡದಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+