ಕಣ್ಮರೆಯಾಗುತ್ತಿರುವ ಕೆರೆಗಳ ರಕ್ಷಣೆಗೆ ಮುಂದಾದ ಬಿಡದಿಯ ತಂಪು ಪಾನೀಯ ಕಂಪನಿ
ರಾಮನಗರ, ನವೆಂಬರ್ 03: ಬಿಡದಿ ಕೈಗಾರಿಕಾ ವಲಯದಲ್ಲಿ ನೆಲಸಿರುವ ಭಾರತದ ಜನಪ್ರಿಯ ತಂಪು ಪಾನೀಯ ತಯಾರಿಕಾ ಕಂಪನಿ ಕೋಕಾ ಕೋಲ (HCCB) ತನ್ನ ಸಮಾಜಿಕ ಕಾರ್ಯಕ್ರಮ ಅಡಿಯಲ್ಲಿ ಜಿಲ್ಲೆಯ ಎರಡು ಕೆರೆಗಳನ್ನು ಯಶಸ್ವಿಯಾಗಿ ಪುನರುಜ್ಜೀವನಗೊಳಿಸಿದೆ. ಪುನರುಜ್ಜೀವನೊಳಿಸಿದ ಜಿಲ್ಲೆಯ ಅಮವಾಸ್ಯೆ ಕೆರೆ ಮತ್ತು ತೂಬಿನ ಕೆರೆಗಳನ್ನು ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಉದ್ಘಾಟಿಸಿದರು.
ಅಂತರ್ಜಲ ಹೆಚ್ಚಳಕ್ಕೆ ಕಾರಣವಾಗುವ ಈ ಕೆರೆಗಳು ನೀರಿಲ್ಲದೇ ಬಳಲಿದ್ದ ಕೃಷಿ ಭೂಮಿ ಪುನಶ್ಚೇತನಗೊಳ್ಳಲು ಸಹಾಯಕವಾಗಲಿದ್ದು, ಈ ಮೂಲಕ ಕೃಷಿ ಸಮುದಾಯಗಳು ಮತ್ತು ನಿಸರ್ಗದ ಬೆಳವಣಿಗೆಗೆ ಸಹಕಾರಿಯಾಗಲಿವೆ.

ಇತ್ತೀಚಿನ ದಿನಗಳಲ್ಲಿ ಮಳೆ ಕೊರತೆ, ಸೂಕ್ತ ನಿರ್ವಹಣೆ ಇಲ್ಲದೇ ಹಾಗೂ ಭೂಕಳ್ಳರ ಅಕ್ರಮಗಳಿಂದ ಕರೆಗಳು ಕಣ್ಮರೆಯಾಗುತ್ತಿವೆ. ಬಿಡದಿ ಪಟ್ಟಣ ಪ್ರದೇಶದಲ್ಲಿ ಕ್ಷಿಪ್ರಗತಿಯಲ್ಲಿ ಕೈಗಾರಿಕೆ ಮತ್ತು ಕೃಷಿ ಬೆಳವಣಿಗೆ ಹೊಂದುತ್ತಿರುವುದು ನೈಸರ್ಗಿಕ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಈ ಬದಲಾದ ಭೂ ಬಳಕೆಯು ಕೆರೆಗಳ ಮೇಲೆ ಋಣಾತ್ಮಕವಾದ ಪರಿಣಾಮ ಬೀರಿದ್ದರಿಂದ ಅವುಗಳ ಪರಿಸರ ಆರೋಗ್ಯದಲ್ಲಿ ಕುಸಿತ ಉಂಟಾಗಲು ಕಾರಣವಾಗಿದೆ.
ಈ ನಿಟ್ಟಿನಲ್ಲಿ ಎಚ್ಸಿಸಿಬಿ ತನ್ನ ಸಾಮಾಜಿಕ ಹೊಣೆಗಾರಿಕೆ ಅರಿಯು ಕೆರೆಗಳ ಪುನರ್ ನಿರ್ಮಾಣದ ಯೋಜನೆ ಕೈಗೆತ್ತಿಕೊಂಡಿದೆ. ಈ ಮೂಲಕ ಕೆರೆಗಳಲ್ಲಿ ತುಂಬಿದ್ದ ಹೂಳನ್ನು ತೆಗೆದು ನೀರಿನ ಸಂಗ್ರಹಣಾ ಸಾಮರ್ಥ್ಯವನ್ನು ಹೆಚ್ಚಿಸುವುದು, ದುರ್ಬಲಗೊಂಡ ಒಡ್ಡುಗಳನ್ನು ದುರಸ್ತಿ ಮಾಡಿ ಬಲಗೊಳಿಸುವುದು, ಸರಿಯಾದ ಗಡಿಗಳನ್ನು ಗುರುತಿಸುವುದು, ಪರಿಸರ ವ್ಯವಸ್ಥೆ ಮೇಲೆ ಪರಿಣಾಮ ಬೀರುವ ಕಳೆಗಳನ್ನು ತೆಗೆಯುವುದು ಸೇರಿದಂತೆ ಇನ್ನಿತರೆ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಕೆರೆಗಳ ಪುನಶ್ಚೇತನದ ಜೊತೆಗೆ ಕೆರೆ ಮಧ್ಯಭಾಗದಲ್ಲಿ ವನ್ಯಜೀವಿಗಳ ಜೀವನಕ್ಕೆ ಸಹಕಾರಿಯಾಗುವ ರೀತಿಯಲ್ಲಿ ದ್ವೀಪಗಳ ನಿರ್ಮಾಣ, ನೀರಿನ ನಿರ್ವಹಣೆಗೆ ಅಗತ್ಯವಾದ ಗುಂಡಿಗಳನ್ನು ನಿರ್ಮಾಣ ಮಾಡುವುದು, ಅಂತರ್ಜಲ ಮರುಪೂರಣ ಬಾವಿಗಳನ್ನು ನಿರ್ಮಾಣ ಮಾಡುವುದು ಮತ್ತು ಕೆರೆಗಳ ಒತ್ತುವರಿಯನ್ನು ತಪ್ಪಿಸಲು ಸೂಕ್ತ ಬೇಲಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
ಪುನರುಜ್ಜೀವನಗೊಂಡ ಕೆರೆಗಳ ಉದ್ಘಾಟನೆ ಮಾಡಿ ಮಾತನಾಡಿದ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಸಿ.ಬಾಲಕೃಷ್ಣ ಅವರು, "ಪ್ರಕೃತಿಯು ನಮಗೆ ಯಾವಾಗಲೂ ಅತ್ಯಂತ ಉಪಕಾರಿಯಾಗಿದೆ. ಎಚ್ಸಿಸಿಬಿ ನೇತೃತ್ವದಲ್ಲಿ ಈ ಕೆರೆಗಳನ್ನು ಪುನರ್ ನಿರ್ಮಾಣ ಮಾಡಿವುದು ಪವಿತ್ರ ಕಾರ್ಯವಾಗಿದೆ. ಇದು ಸಂಸ್ಥೆಯ ಸಮರ್ಪಣಾ ಭಾವಕ್ಕೆ ಸಾಕ್ಷಿಯಾಗಿದೆ ಎಂಬುದನ್ನು ತೋರಿಸುತ್ತದೆ.

ಕೆರೆಗಳ ಪುನರ್ ನಿರ್ಮಾಣ ಮಾಡುವ ಮೂಲಕ ನಾವು ಕೇವಲ ಜಲಮೂಲಗಳನ್ನು ಮರುಪೂರಣ ಮಾಡುತ್ತಿಲ್ಲ. ನಮ್ಮ ಸಮುದಾಯ ಮತ್ತು ಅದರ ಸುತ್ತಮುತ್ತಲಿನ ನೈಸರ್ಗಿಕ ಪರಿಸರವು ಅಭಿವೃದ್ಧಿ ಹೊಂದಲು ಈ ಕಾರ್ಯ ಸಹಕಾರಿಯಾಗಲಿದೆ. ಎಚ್ಸಿಸಿಬಿ ಕೆರೆಗಳ ಪುನಃ ನಿರ್ಮಾಣ ಕಾರ್ಯ ಇತರರಿಗೆ ದಾರಿದೀಪವಾಗುದೆ ಹಾಗೂ ಸ್ವಸಂಸ್ಥೆಯ ಶಕ್ತಿಗೆ ಸಾಕ್ಷಿಯಾಗಿ ನಿಂತಿದೆ'' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಚ್ಸಿಸಿಬಿಯ ಚೀಫ್ ಪಬ್ಲಿಕ್ ಅಫೇರ್ಸ್, ಕಮ್ಯುನಿಕೇಶನ್ಸ್ & ಸಸ್ಟೇನೇಬಲಿಟಿ ಆಫೀಸರ್ ಹಿಮಾನ್ಷು ಪ್ರಿಯದರ್ಶಿ ಅವರು ಮಾತನಾಡಿ,"HCCB ಯಲ್ಲಿನ ನಮ್ಮ ನೀತಿಯು ಸಾಮಾಜಿಕ ಕಳಕಳಿಯನ್ನು ಹೊಂದಿದ್ದಾಗಿದೆ. ಇದು ಶಾಶ್ವತವಾದ ಧನಾತ್ಮಕ ಬದಲಾವಣೆಯನ್ನು ರೂಪಿಸುವಲ್ಲಿ ಶ್ರಮಿಸುತ್ತಿದೆ. ಅಮವಾಸ್ಯೆ ಕೆರೆ ಮತ್ತು ತೂಬಿನ ಕೆರೆಗಳ ಪುನರುಜ್ಜೀವನದ ಮೂಲಕ ಪರಿಸರ ಮತ್ತು ಸಮುದಾಯಗಳ ಶ್ರೇಯೋಭಿವೃದ್ಧಿಗೆ ಕೈಗೊಂಡಿರುವ ನಮ್ಮ ಸಮರ್ಪಣಾ ಕಾರ್ಯವನ್ನು ಒತ್ತಿ ಹೇಳುತ್ತದೆ. ಈ ದಿಸೆಯಲ್ಲಿ ನಾವು ಇಡುವ ಪ್ರತಿಯೊಂದು ಹೆಜ್ಜೆಯೂ ಪ್ರಕೃತಿಯ ಉನ್ನತಿಗೆ ಮಾತ್ರವಲ್ಲದೇ ಭೂಮಿ ಮತ್ತು ಅದರೊಂದಿಗೆ ಜನರ ಸಾಮರಸ್ಯದ ಸಹಬಾಳ್ವೆಯನ್ನು ಬೆಳೆಸುವ ನಮ್ಮ ಬದ್ಧತೆಯನ್ನು ಬಲಪಡಿಸುತ್ತದೆ'' ಎಂದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications