ಖತರ್ನಾಕ್ ದರೋಡೆಕೋರರನ್ನು ಬಂಧಿಸಿದ ಬಿಡದಿ ಪೊಲೀಸರು
ರಾಮನಗರ, ಡಿಸೆಂಬರ್ 27: ಹೆದ್ದಾರಿ ಬದಿಯ ಪೆಟ್ರೋಲ್ ಬಂಕ್ ಗಳಲ್ಲಿ ಸುಲಿಗೆ ಮಾಡುತ್ತಿದ್ದ ಎಂಟು ಮಂದಿ ಖತರ್ನಾಕ್ ದರೋಡೆಕೋರರ ತಂಡವನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಕೊಪ್ಪ ಹೋಬಳಿ ಮರಸನಹಳ್ಳಿಯ ಯೋಗಾನಂದ, ಬೆಂಗಳೂರಿನ ಬ್ಯಾಟರಾಯನಪುರ ವಾಸಿ ಅಭಿಷೇಕ್, ತಲಘಟ್ಟಪುರದ ಬಾಲಾಜಿ ಲೇಔಟ್ನ ರಮೇಶ ಅಲಿಯಾಸ್ ಗಾರ್ಡನ್ರಮೇಶ್, ಬಾಪೂಜಿನಗರದ ಕೆ.ಚೇತನ, ಬಿ.ಎನ್.ತೇಜಸ್, ಮಾರುತಿನಗರ ವಾಸಿ ಎಂ.ಸುನೀಲ್ಕುಮಾರ್, ಆರುಂಧತಿನಗರದ ವಾಸಿ ಆರ್.ಸಂಜಯ್ಕುಮಾರ್ ಹಾಗೂ ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ ದೊಡ್ಡಬಸ್ತಿ ಗ್ರಾಮದ ಉದಯ್ ಎಂಬುವರು ಬಂಧಿತ ಆರೋಪಿಗಳು.
ಇವರು ಕುಖ್ಯಾತ ದರೋಡೆಕೋರರಾಗಿದ್ದು, ಮಧ್ಯರಾತ್ರಿ ಹಾಗೂ ಬೆಳಗಿನ ಜಾವದಲ್ಲಿ ನಿರ್ಜನ ಪ್ರದೇಶದಲ್ಲಿರುವ ಪೆಟ್ರೋಲ್ ಬಂಕ್ ಗಳನ್ನು ಗುರುತು ಮಾಡಿಕೊಂಡು ದಾಳಿ ಮಾಡಿ ಹಣ ದೋಚುವುದು ಹಾಗೂ ಕಳ್ಳತನ ಮಾಡಿದ ಸ್ಥಳಗಳಲ್ಲಿ ಪೊಲೀಸರಿಗೆ ಯಾವ ಕುರುಹುಗಳು ಸಿಗದ ರೀತಿಯಲ್ಲಿ ಚಾಲಾಕಿತನ ತೋರುತ್ತಿದ್ದರು.

ಇವರು ಇದುವರೆಗೆ ರಾಮನಗರ ಸೇರಿದಂತೆ ಸುಮಾರು 8 ಜಿಲ್ಲೆಗಳಲ್ಲಿ ತಮ್ಮ ಕೈಚಳಕ ತೋರುತ್ತಿದ್ದರು. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ಶೇಷಗಿರಿಹಳ್ಳಿ ಸಮೀಪದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಗೆ ಕಳೆದ ಡಿಸೆಂಬರ್ ೩ ರಂದು ಬೆಳಗಿನ ಜಾವ 3.30ರ ಸಮಯದಲ್ಲಿ ಮುಖಕ್ಕೆ ಮಂಕಿ ಕ್ಯಾಪ್ಗಳನ್ನು ಧರಿಸಿ ದಾಳಿ ನಡೆಸಿ ಸಿಬ್ಬಂದಿಯಿಂದ 82 ಸಾವಿರ ನಗದು ಮತ್ತು4 ಮೊಬೈಲ್ ಫೋನ್ಗಳನ್ನು ದೋಚಿ ಬಂಕ್ ನಲ್ಲಿದ್ದವರ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಕ್ ನ ಕ್ಯಾಷಿಯರ್ ನವೀನ್ ಬಿಡದಿ ಪೋಲೀಸರಿಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿ ಕೊಂಡ ಪೊಲೀಸರು ಡಿವೈಎಸ್ಪಿ ಪುರುಷೋತ್ತಮ್ ಮಾರ್ಗದರ್ಶನದಲ್ಲಿ ವೃತ್ತ ಆರಕ್ಷಕ ನಿರೀಕ್ಷಕ ಜೀವನ್ ಮತ್ತು ಬಿಡದಿ ಸಬ್ಇನ್ಸ್ಪೆಕ್ಟರ್ ಹರೀಶ್ ಮತ್ತು ತಂಡ ಬೆರಳಚ್ಚುಗಳ ಆಧಾರದ ಮೇಲೆ ಡಿಸೆಂಬರ್ 21ರಂದು ತಲಘಟ್ಟಪುರ ಬಾಲಾಜಿ ಲೇಔಟ್ನ ರಮೇಶ ಅಲಿಯಾಸ್ ಗಾರ್ಡನ್ ರಮೇಶ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ನಂತರ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಪೊಲೀಸರ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಿದಾಗ ಗ್ಯಾಂಗ್ ನ ಇತರೆ ಸಹಚರರಾದ ಕೆ.ಚೇತನ, ಬಿ.ಎನ್.ತೇಜಸ್, ಎಂ.ಸುನೀಲ್ಕುಮಾರ್, ಆರ್.ಸಂಜಯ್ಕುಮಾರ್ ಹಾಗೂ ಉದಯ್ ಎಂಬುವರನ್ನು ಬಂಧಿಸಿದ್ದು, ಅವರಿಂದ ಕೃತ್ಯಕ್ಕೆ ಬಳಸಿದ್ದ ಟಯೋಟಾ ಇಟಯಾಸ್ ಕಾರು, ಹುಂಡೈ ಅಸೆಂಟ್ ಕಾರು, ಮಾರುತಿ ಸ್ವಿಫ್ಟ್ ಡಿಸೈರ್ ಕಾರು, ಪಲ್ಸರ್ ಬೈಕ್ ಹಾಗೂ ಮಾರಕಾಯುಧಗಳಾದ ಲಾಂಗ್ಗಳು, ಮಚ್ಚು, ಡ್ರಾಗರ್, ಪೆಪ್ಪರ್ ಸ್ಪ್ರೇ, ಮಂಕಿ ಕ್ಯಾಂಪ್ಗಳು, ದರೋಡೆ ಮಾಡಿದ್ದ ಮಾನಿಟರ್, ಮೊಬೈಲ್ಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications