ಬಿಡದಿ: 15 ರೂ. ವಿದ್ಯುತ್ ಬಿಲ್ ಪಾವತಿಸಿ ಎಂದು ಖಾತೆಯಿಂದ 7 ಲಕ್ಷ ರೂ. ದೋಚಿದ ವಂಚಕರು
ರಾಮನಗರ, ಡಿಸೆಂಬರ್, 02: ಕೇವಲ 15 ರೂಪಾಯಿ ವಿದ್ಯುತ್ ಬಿಲ್ ಬಾಕಿ ಇದೆ ಪಾವತಿ ಮಾಡಿ ಎಂದು ಮೊಬೈಲ್ಗೆ ಲಿಂಕ್ ಕಳಿಸಿ ಬರೋಬ್ಬರಿ 7 ಲಕ್ಷ ಹಣವನ್ನು ವರ್ಗಾವಣೆ ಮಾಡಿಕೊಂಡು ಬಿಡದಿಯ ಮಂಜುನಾಥ್ ಎಂಬುವವರನ್ನು ವಂಚಿಸಿದ್ದಾರೆ.
ಬಿಡದಿ ಪಟ್ಟಣದ ರಾಘವೇಂದ್ರ ಲೇಔಟ್ ನಿವಾಸಿ ಮಂಜುನಾಥ್ ಎಂಬುವವರನ್ನು ಆನ್ಲೈನ್ ವಂಚಕರು ವಂಚಿಸಿ ಸುಮಾರು 7 ಲಕ್ಷ ಹಣವನ್ನು ದೋಚಿದ್ದಾರೆ. ನವೆಂಬರ್ 27ರಂದು ಮಂಜುನಾಥ್ ಅವರ ಮೊಬೈಲ್ಗೆ ಒಂದು ಎಸ್.ಎಂ.ಎಸ್ ಬಂದಿತ್ತು. ವಿದ್ಯುತ್ ಬಿಲ್ ಪಾವತಿ ಮಾಡದ ಕಾರಣ ನಿಮ್ಮ ವಿದ್ಯುತ್ ಸಂಪರ್ಕ ಕಡಿತವಾಗುತ್ತದೆ. ಆದ್ದರಿಂದ 15 ರೂಪಾಯಿಗಳನ್ನ ಪಾವತಿ ಮಾಡಿ ಎಂದು ಒಂದು ಲಿಂಕ್ ಕಳುಹಿಸಿ ಎಂದು ಹೇಳಿ ವಂಚಕರು ಬಲೆ ಬೀಸಿದ್ದಾರೆ. ವಂಚನೆ ಜಾಲವನ್ನು ಅರಿಯದ ಮಂಜುನಾಥ್ ತಮ್ಮ ಮೊಬೈಲ್ಗೆ ಬಂದ ಲಿಂಕ್ ಓಪನ್ ಮಾಡಿ ತಮ್ಮ ಐಸಿಐಸಿಐ ಬ್ಯಾಂಕ್ನ ಡೆಬಿಟ್ ಕಾರ್ಡ್ ನಂಬರ್, ಪಾನ್ ನಂಬರ್ ನಮೂದಿಸಿ ಸಬ್ಮಿಟ್ ಮಾಡಿದ್ದಾರೆ. ಆಗ ತಕ್ಷಣ ಅವರ ಖಾತೆಯ 15 ರೂಪಾಯಿ ಕಡಿತವಾಗಿತ್ತು. ಇದಾದ ನಂತರ ಅವರ ಇ- ಮೇಲ್ ಗೆ ನಿಮ್ಮ ಖಾತೆಗೆ 24 ಲಕ್ಷ ಹಣ ಜಮೆಯಾಗಿರುವುದಾಗಿ ಮೇಲ್ ಬಂದಿದೆ.

7 ಲಕ್ಷ ರೂಪಾಯಿ ಹಣ ಮಾಯ
ಇದ್ದಕ್ಕಿದ್ದಂತೆ ತಮ್ಮ ಖಾತೆಗೆ ಹಣ ಜಮೆಯಾಗಿದ್ದನ್ನು ಕಂಡು ಮಂಜುನಾಥ್ ಕೆಲ ಕಾಲ ಗಾಬರಿಗೊಂಡಿದ್ದಾರೆ. ಇದಾದ ಕೆಲ ಸಮಯದಲ್ಲೆ 7 ಸಂದೇಶಗಳು ಮಂಜುನಾಥ್ ಅವರ ಮೇಲ್ಗೆ ಬಂದಿವೆ. ಮೇಲ್ಗೆ ಬಂದ ಸಂದೇಶಗಳನ್ನು ಓಪನ್ ಮಾಡಿದಾಗ 7 ಲಕ್ಷ ರೂಪಾಯಿ ಹಣ ಖಾತೆಯಿಂದ ವರ್ಗಾವಣೆ ಆಗಿತ್ತು. ಏಕಾಏಕಿ ಖಾತೆಯಲ್ಲಿದ್ದ ಹಣ ಮಾಯವಾಗಿರುದನ್ನು ಕಂಡು ಮಂಜುನಾಥ್ ಆತಂಕಕ್ಕೆ ಒಳಗಾಗಿದ್ದಾರೆ. ತಕ್ಷಣ ಹೆಚ್ಚೆತ್ತ ಮಂಜುನಾಥ್ ಬ್ಯಾಂಕ್ ಕಸ್ಟಮರ್ ಕೇರ್ಗೆ ಕರೆ ಮಾಡಿ ತಮ್ಮ ಖಾತೆಯನ್ನು ಬ್ಲಾಕ್ ಮಾಡಿಸಿದ್ದಾರೆ. ಅಲ್ಲದೇ ಈ ಸಂಬಂಧ ರಾಮನಗರದ ಸೈಬರ್ ಪೋಲಿಸ್ ಠಾಣೆಯಲ್ಲಿ ತಮಗೆ ವಂಚಿಸಿದ ವಂಚಕರ ವಿರುದ್ಧ ದೂರು ದಾಖಲಿಸಿದ್ದಾರೆ.

ವಂಚನೆಗೆ ಬ್ಯಾಂಕ್ನವರೇ ನೇರ ಕಾರಣ
ತಮಗಾದ ವಂಚನೆ ಸಂಬಂಧ ಪ್ರತಿಕ್ರಿಯೆ ನೀಡಿದ ಮಂಜುನಾಥ್, ಪೂನಾದ ಐಸಿಐಸಿಐ ಬ್ಯಾಂಕ್ನಲ್ಲಿ 042401522811 ಸಂಖ್ಯೆಯ ಉಳಿತಾಯ ಖಾತೆಯನ್ನು ಹೊಂದಿದ್ದೇನೆ. ನವೆಂಬರ್ 27ರಂದು 9689942992 ಸಂಖ್ಯೆಯ ಮೊಬೈಲ್ಗೆ 6291349260 ನಂಬರ್ನಿಂದ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಲಿಂಕ್ ಬಂದಿತ್ತು. ನಂತರ ಲಿಂಕ್ ಓಪನ್ ಮಾಡಿ ಬಿಲ್ ಪೇ ಮಾಡಿದೆ. ಸಂಜೆ 8 ಗಂಟೆ ಸಮಯಕ್ಕೆ ನಿಮ್ಮ ಖಾತೆಗೆ 24 ಲಕ್ಷ ರೂಪಾಯಿ ಹಣ ಜಮೆ ಆಗಿದೆ. ನಂತರ ಪರಿಶೀಲಿಸಿದಾಗ ಹಣ ಇರುವುದು ಖಚಿತವಾಯಿತು. ಇದಾದ ಸ್ವಲ್ಪ ಸಮಯದ ಬಳಿಕ ಖಾತೆಯಿಂದ 7 ಬಾರಿ ತಲಾ ಒಂದು ಲಕ್ಷ ರೂಪಾಯಿನಂತೆ ಒಟ್ಟು 7 ಲಕ್ಷ ವಂಚನೆ ಎಗರಿಸಿದ್ದಾರೆ. ತಮಗಾದ 7 ಲಕ್ಷ ರೂಪಾಯಿ ವಂಚನೆಗೆ ಪೂನಾದ ಐಸಿಐಸಿಐ ಬ್ಯಾಂರ್ನವರೇ ನೇರ ಕಾರಣ ಎಂದು ಮಂಜುನಾಥ್ ಆರೋಪಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications