ಕರ್ನಾಟಕ ಬಂದ್: ಸಿಎಂ ಸ್ವಕ್ಷೇತ್ರದಲ್ಲೇ ಪ್ರತಿಭಟನೆ ಜೋರು
ರಾಮನಗರ, ಮೇ.28: ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಆರೋಪಿಸಿ ಬಿಜೆಪಿ ಕರೆ ನೀಡಿದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕತರು ರಸ್ತೆ ತಡೆ ಮಾಡಿ, ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿವ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ಬಿಜೆಪಿ ಕಾರ್ಯಕರ್ತರು ಬೆಂಗಳೂರು - ಮೈಸೂರು ಹೆದ್ದಾರಿ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ, ಕೆಲಕಾಲ ಹೆದ್ದಾರಿಯಲ್ಲಿ ಕುಳಿತು ರಸ್ತೆ ತಡೆ ನಡೆಸಿದರು.

ನಂತರ ತಾಲೂಕು ಕಚೇರಿಗೆ ತರಳಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಶ್ರೀಘ್ರವೇ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕೆಂದು ಒತ್ತಾಯ ಮಾಡಿದರು. ಈ ಮೂಲಕ ಸ್ವಕ್ಷೇತ್ರದಲ್ಲೇ ಸಿಎಂಗೆ ಬಿಜೆಪಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications