ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಬಂದ್: ಸಿಎಂ ಸ್ವಕ್ಷೇತ್ರದಲ್ಲೇ ಪ್ರತಿಭಟನೆ ಜೋರು

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಮೇ.28: ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಆರೋಪಿಸಿ ಬಿಜೆಪಿ ಕರೆ ನೀಡಿದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕತರು ರಸ್ತೆ ತಡೆ ಮಾಡಿ, ಪ್ರತಿಭಟನಾ ಮೆರವಣಿಗೆ ನಡೆಸಿದರು.

ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿವ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ಬಿಜೆಪಿ ಕಾರ್ಯಕರ್ತರು ಬೆಂಗಳೂರು - ಮೈಸೂರು ಹೆದ್ದಾರಿ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ, ಕೆಲಕಾಲ ಹೆದ್ದಾರಿಯಲ್ಲಿ ಕುಳಿತು ರಸ್ತೆ ತಡೆ ನಡೆಸಿದರು.

BJP activists blocked the road and protest against Chief Minister

ಬಂದ್‌ಗೆ ನೀರಸ ಪ್ರತಿಕ್ರಿಯೆ: ಮೈಸೂರಲ್ಲಿ ಸಂಸದ ಪ್ರತಾಪ್ ಸಿಂಹ ವಶಕ್ಕೆಬಂದ್‌ಗೆ ನೀರಸ ಪ್ರತಿಕ್ರಿಯೆ: ಮೈಸೂರಲ್ಲಿ ಸಂಸದ ಪ್ರತಾಪ್ ಸಿಂಹ ವಶಕ್ಕೆ

ನಂತರ ತಾಲೂಕು ಕಚೇರಿಗೆ ತರಳಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

BJP activists blocked the road and protest against Chief Minister

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಶ್ರೀಘ್ರವೇ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕೆಂದು ಒತ್ತಾಯ ಮಾಡಿದರು. ಈ ಮೂಲಕ ಸ್ವಕ್ಷೇತ್ರದಲ್ಲೇ ಸಿಎಂಗೆ ಬಿಜೆಪಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
English summary
In channapatna BJP activists blocked the road and protest against Chief Minister HD Kumarswamy. He urged immediatly to make a full debt waiver of the farmers
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X