ಕಪಾಲ ಬೆಟ್ಟಕ್ಕೆ ಬಿಜೆಪಿ ನಿಯೋಗ ಭೇಟಿ
ರಾಮನಗರ, ಜನವರಿ 2: ಕಪಾಲ ಬೆಟ್ಟದಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡುವ ವಿಚಾರ ವಿವಾದವನ್ನು ಹುಟ್ಟುಹಾಕುವುದರ ಜೊತೆಗೆ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಈಗ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ಕಾಮಗಾರಿ ಸ್ಥಗಿತಗೊಂಡಿದ್ದು, ಎಲ್ಲ ಕೆಲಸಗಾರರು ಅಲ್ಲಿಂದ ಬೇರೆಡೆ ಹೋಗಿದ್ದಾರೆ. ಅಲ್ಲದೆ, ಈ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಿಸುವ ಬಗ್ಗೆ ವಿವಾದ ಉಂಟಾದ ಕಾರಣ ಸುತ್ತಲೂ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಈ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶಗಳು ಕೇಳಿಬಂದಿತ್ತು. ಜೊತೆಗೆ ಕಾಮಗಾರಿಯನ್ನೂ ಕೈಬಿಡಲಾಗಿತ್ತು.

ಇಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿ ಹಲವು ಬಿಜೆಪಿ ಮುಖಂಡರು ಕನಕಪುರಕ್ಕೆ ಭೇಟಿ ನೀಡಿ ಏಸು ಪ್ರತಿಮೆ ನಿರ್ಮಾಣದ ಸ್ಥಳವನ್ನು ಪರಿಶೀಲಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬಿಜೆಪಿ ನಿಯೋಗ ಕಪಾಲ ಬೆಟ್ಟಕ್ಕೆ ತೆರಳಲಿದೆ.
ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಏಸು ಪ್ರತಿಮೆಯ ಶಂಕುಸ್ಥಾಪನೆ ಮಾಡುವ ಮೂಲಕ ಆಡಳಿತ ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೇ ವೇಳೆ ಕನಕಪುರದಲ್ಲಿ ಕ್ಲೀನಿಂಗ್ ಆರಂಭಿಸುವುದಾಗಿ ಮಾಡುವುದಾಗಿ ಡಿಸಿಎಂ ಅಶ್ವತ್ಥ ನಾರಾಯಣ ಸೂಚನೆ ನೀಡಿದ್ದರು.
ಕಪಾಲಬೆಟ್ಟ ಅಭಿವೃದ್ಧಿ ಸಮಿತಿಗೆ ಮಂಜೂರಾಗಿದ್ದ 10 ಎಕರೆ ಜಾಗದಲ್ಲಿ ಒಂದು ಧರ್ಮದ ದೇವರ ಪ್ರತಿಮೆ ನಿರ್ಮಾಣ ಮಾಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಕ್ರಿಸ್ಮಸ್ ವೇಳೆ ಅದರ ಶಂಕುಸ್ಥಾಪನೆ ನೆರವೇರಿಸಿದ್ದ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗಿತ್ತು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications