ಬಿಜೆಪಿಯವರು ಅನರ್ಹರಿಗೆ ಗೋರಿ ಕಟ್ತಿದ್ದಾರೆ, ನಾವು ತಿಥಿಗೆ ಹೋಗ್ತೀವಿ; ಡಿಕೆಶಿ
Recommended Video
ಕನಕಪುರ, ಆಗಸ್ಟ್ 14: "ಬಿಜೆಪಿಯವರು ಅನರ್ಹರಿಗೆ ಗೋರಿ ಕಟ್ತಿದ್ದಾರೆ, ನಾವು ದಿವಸಕ್ಕೆ (ತಿಥಿ) ಹೋಗಿ ಬರ್ತೀವಿ" ಎಂದು ಪ್ರತಿಕ್ರಿಯಿಸಿದ್ದಾರೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್. ಅನರ್ಹ ಶಾಸಕ ಎಚ್.ವಿಶ್ವನಾಥ್ ಫೋನ್ ಕದ್ದಾಲಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಈ ರೀತಿ ಮಾತನಾಡಿದರು.
ಕನಕಪುರದ ಸಂಗಮ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಅವರು, "ಕಾವೇರಿ ಈ ಬಾರಿ ಉಕ್ಕಿ ಹರಿದಿದ್ದಾಳೆ. ಸಂಗಮದ ಅಕ್ಕಪಕ್ಕ ಇರುವ ಹಳ್ಳಿಗಳು ಮುಂಜಾಗ್ರತೆ ವಹಿಸಬೇಕು. ನನ್ನ ಕ್ಷೇತ್ರದ ಯೋಗಕ್ಷೇಮ ನೋಡಲು ಬಂದಿದ್ದೇನೆ" ಎಂದು ಹೇಳಿದರು.
"ರಾಜ್ಯದಲ್ಲಿ ನೆರೆಯಿಂದ ಜನರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಈ ನೆರೆ ಸಂತ್ರಸ್ತರಿಗೆ ಮನೆ ಬಾಡಿಗೆ ಮನೆ ಕಟ್ಟಲು 5 ಲಕ್ಷ ಹಣ ಕೊಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಮಾತನ್ನು ತಪ್ಪದೇ ನಡೆಸಲಿ. ಬೆಳೆ ಕಳೆದುಕೊಂಡು ಕಂಗಾಲಾಗಿರುವ ರೈತರಿಗೂ ಪರಿಹಾರ ನೀಡಲಿ" ಎಂದಿದ್ದಾರೆ.

"ನೋಟ್ ಪ್ರಿಂಟ್ ಮಾಡುವ ಮಿಷಿನ್ ಇಲ್ಲ ಎಂದು ಯಡಿಯೂರಪ್ಪ ಸಭೆಯಲ್ಲಿ ಹೇಳಿದ್ದಾರೆ. ಈ ಹಿಂದೆಯೂ ಇದೇ ರೀತಿ ಮಾತನಾಡಿದ್ದರು. ಅದರ ಬಗ್ಗೆ ಈಗ ಚರ್ಚೆ ಬೇಡ. ಆದರೆ ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಅಧಿಕಾರಿಗಳ ಕೈಗೆ ಧ್ವಜಾರೋಹಣ ಮಾಡುವ ಶಕ್ತಿ ಕೊಟ್ಟಿದ್ದಾರೆ. ಯಡಿಯೂರಪ್ಪ ಅವರಿಗೆ ಒಳ್ಳೆಯದಾಗಲಿ" ಎಂದರು.
ಫೋನ್ ಕದ್ದಾಲಿಕೆ ಕುರಿತು ಮಾತನಾಡಿದ ಅವರು, "ನಮ್ಮ ಸರ್ಕಾರದಲ್ಲಿ ಸಿಎಂ ಆಗಲಿ ಗೃಹಮಂತ್ರಿಗಳಾಗಲಿ ಫೋನ್ ಕದ್ದಾಲಿಕೆ ಮಾಡಿಲ್ಲ. ಯಾರು ಬೇಕಾದರೂ ತನಿಖೆ ನಡೆಸಲಿ. ನಾನು ಕೂಡ ಸಮ್ಮಿಶ್ರ ಸರ್ಕಾರದಲ್ಲಿ ಸಚಿವನಾಗಿದ್ದವನು. ನನಗೆ ತಿಳಿದ ಹಾಗೆ ಯಾವುದೇ ಫೋನ್ ಟ್ರ್ಯಾಪ್ ಮಾಡಿಸಿಲ್ಲ" ಎಂದು ಹೇಳಿದರು.

ಸಿಎಂ ಪರಿಹಾರ ನಿಧಿಗೆ ಹಣ ನೀಡುವ ಬಗ್ಗೆ ಶಾಸಕರೆಲ್ಲ ಕೂತು ಚರ್ಚೆ ನಡೆಸಿ ಶಾಸಕರ ನಿಧಿಯಿಂದ ಸಹಾಯ ಒದಗಿಸುವುದಾಗಿ ತಿಳಿಸಿದರು.
-
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications