ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಯವರು ಅನರ್ಹರಿಗೆ ಗೋರಿ ಕಟ್ತಿದ್ದಾರೆ, ನಾವು ತಿಥಿಗೆ ಹೋಗ್ತೀವಿ; ಡಿಕೆಶಿ

By ರಾಮನಗರ ಪ್ರತಿನಿಧಿ
|
Google Oneindia Kannada News

Recommended Video

ಕನಕಪುರ ಕ್ಷೇತ್ರದ ಯೋಗಕ್ಷೇಮ ನೋಡಲು ಬಂದ ಡಿಕೆಶಿ ಹೇಳಿದ್ದೇನು?

ಕನಕಪುರ, ಆಗಸ್ಟ್ 14: "ಬಿಜೆಪಿಯವರು ಅನರ್ಹರಿಗೆ ಗೋರಿ ಕಟ್ತಿದ್ದಾರೆ, ನಾವು ದಿವಸಕ್ಕೆ (ತಿಥಿ) ಹೋಗಿ ಬರ್ತೀವಿ" ಎಂದು ಪ್ರತಿಕ್ರಿಯಿಸಿದ್ದಾರೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್. ಅನರ್ಹ ಶಾಸಕ ಎಚ್.ವಿಶ್ವನಾಥ್ ಫೋನ್ ಕದ್ದಾಲಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಈ ರೀತಿ ಮಾತನಾಡಿದರು.

ಕನಕಪುರದ ಸಂಗಮ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಅವರು, "ಕಾವೇರಿ ಈ ಬಾರಿ ಉಕ್ಕಿ ಹರಿದಿದ್ದಾಳೆ. ಸಂಗಮದ ಅಕ್ಕಪಕ್ಕ ಇರುವ ಹಳ್ಳಿಗಳು ಮುಂಜಾಗ್ರತೆ ವಹಿಸಬೇಕು. ನನ್ನ ಕ್ಷೇತ್ರದ ಯೋಗಕ್ಷೇಮ ನೋಡಲು ಬಂದಿದ್ದೇನೆ" ಎಂದು ಹೇಳಿದರು.

 ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಈಗ 50 ಎಕರೆ ವ್ಯಾಪ್ತಿಯಲ್ಲಿ ಹಿಪ್ಪುನೇರಳೆ ಬೆಳೆಯುವ ಕೃಷಿಕ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಈಗ 50 ಎಕರೆ ವ್ಯಾಪ್ತಿಯಲ್ಲಿ ಹಿಪ್ಪುನೇರಳೆ ಬೆಳೆಯುವ ಕೃಷಿಕ

"ರಾಜ್ಯದಲ್ಲಿ ನೆರೆಯಿಂದ ಜನರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಈ ನೆರೆ ಸಂತ್ರಸ್ತರಿಗೆ ಮನೆ ಬಾಡಿಗೆ ಮನೆ ಕಟ್ಟಲು 5 ಲಕ್ಷ ಹಣ ಕೊಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಮಾತನ್ನು ತಪ್ಪದೇ ನಡೆಸಲಿ. ಬೆಳೆ ಕಳೆದುಕೊಂಡು ಕಂಗಾಲಾಗಿರುವ ರೈತರಿಗೂ ಪರಿಹಾರ ನೀಡಲಿ" ಎಂದಿದ್ದಾರೆ.

BJP Is Building Grave For Disqualified Said DK Shivakumar In Kanakapur

"ನೋಟ್ ಪ್ರಿಂಟ್ ಮಾಡುವ ಮಿಷಿನ್ ಇಲ್ಲ ಎಂದು ಯಡಿಯೂರಪ್ಪ ಸಭೆಯಲ್ಲಿ ಹೇಳಿದ್ದಾರೆ. ಈ ಹಿಂದೆಯೂ ಇದೇ ರೀತಿ ಮಾತನಾಡಿದ್ದರು. ಅದರ ಬಗ್ಗೆ ಈಗ ಚರ್ಚೆ ಬೇಡ. ಆದರೆ ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಅಧಿಕಾರಿಗಳ ಕೈಗೆ ಧ್ವಜಾರೋಹಣ ಮಾಡುವ ಶಕ್ತಿ ಕೊಟ್ಟಿದ್ದಾರೆ. ಯಡಿಯೂರಪ್ಪ ಅವರಿಗೆ ಒಳ್ಳೆಯದಾಗಲಿ" ಎಂದರು.

ಪ್ರವಾಹ ಪರಿಹಾರದ ವಿಚಾರದಲ್ಲಿ ರಾಜಕೀಯವಿಲ್ಲ: ಡಿಕೆಶಿಪ್ರವಾಹ ಪರಿಹಾರದ ವಿಚಾರದಲ್ಲಿ ರಾಜಕೀಯವಿಲ್ಲ: ಡಿಕೆಶಿ

ಫೋನ್ ಕದ್ದಾಲಿಕೆ ಕುರಿತು ಮಾತನಾಡಿದ ಅವರು, "ನಮ್ಮ ಸರ್ಕಾರದಲ್ಲಿ ಸಿಎಂ ಆಗಲಿ ಗೃಹಮಂತ್ರಿಗಳಾಗಲಿ ಫೋನ್ ಕದ್ದಾಲಿಕೆ ಮಾಡಿಲ್ಲ. ಯಾರು ಬೇಕಾದರೂ ತನಿಖೆ ನಡೆಸಲಿ. ನಾನು ಕೂಡ ಸಮ್ಮಿಶ್ರ ಸರ್ಕಾರದಲ್ಲಿ ಸಚಿವನಾಗಿದ್ದವನು. ನನಗೆ ತಿಳಿದ ಹಾಗೆ ಯಾವುದೇ ಫೋನ್ ಟ್ರ್ಯಾಪ್ ಮಾಡಿಸಿಲ್ಲ" ಎಂದು ಹೇಳಿದರು.

BJP Is Building Grave For Disqualified Said DK Shivakumar In Kanakapur

ಮೇಕೆದಾಟು ಯೋಜನೆ : ಕೇಂದ್ರದ ವಿರುದ್ಧ ಡಿಕೆಶಿ ಅಸಮಾಧಾನ! ಮೇಕೆದಾಟು ಯೋಜನೆ : ಕೇಂದ್ರದ ವಿರುದ್ಧ ಡಿಕೆಶಿ ಅಸಮಾಧಾನ!

ಸಿಎಂ ಪರಿಹಾರ ನಿಧಿಗೆ ಹಣ ನೀಡುವ ಬಗ್ಗೆ ಶಾಸಕರೆಲ್ಲ ಕೂತು ಚರ್ಚೆ ನಡೆಸಿ ಶಾಸಕರ ನಿಧಿಯಿಂದ ಸಹಾಯ ಒದಗಿಸುವುದಾಗಿ ತಿಳಿಸಿದರು.

English summary
The BJP is building grave for disqualified" said former minister DK Shivakumar in kanakapura.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X