ಬಿಜೆಪಿ ನಾಯಕರ ಮಕ್ಕಳೂ ಸರ್ಕಾರಿ ಶಾಲೆಯಲ್ಲಿ ಓದಿದ್ದಾರೆ; ಎಚ್‌ಡಿಕೆಗೆ ಟಾಂಗ್ ಕೊಟ್ಟ ಅಶ್ವಥ್ ನಾರಾಯಣ

ರಾಮನಗರ, ಫೆಬ್ರವರಿ 11: "ನಮ್ಮ ಪಕ್ಷದ ಹಲವು ನಾಯಕರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದಿದ್ದಾರೆ. ಇದರ ಬಗ್ಗೆ ಹೇಳಿಕೆ ನೀಡಿದ್ದಾರಲ್ಲಾ ಅವರ ಮನೆ ಮಕ್ಕಳು ಓದುತ್ತಿದ್ದಾರಾ?," ಎಂದು ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಶಾಲಾ- ಕಾಲೇಜುಗಳಲ್ಲಿ ಶಾಂತಿ ಕಾಪಾಡಲು ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಂಡಿದೆ ಎಂದು ರಾಮನಗರ ಜಿಲ್ಲಾ ಪಂಚಾಯತ್‌ನಲ್ಲಿ ಸಚಿವ ಅಶ್ವಥ್ ನಾರಾಯಣ ಹೇಳಿದರು.

ಬಿಜೆಪಿಯ ಯಾರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಾರೆ ಎಂದು ಪ್ರಶ್ನಿಸಿದ್ದ ಮಾಜಿ ಸಿಎಂ ಎಚ್‌ಡಿಕೆಗೆ ಸಚಿವ ಅಶ್ವಥ್ ನಾರಾಯಣ ರಾಮನಗರದಲ್ಲಿ ತಿರುಗೇಟು ನೀಡಿದ್ದಾರೆ.

BJP Leaders Children Studied in Government Schools Says Minister Ashwath Narayan

"1995ರಲ್ಲಿ ಕಾನೂನು ತಂದಿರುವವರು ಯಾರು. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇದೆ, ಅಲ್ಲಿ ಏನು ನಿಲುವು ತೆಗೆದುಕೊಂಡಿದ್ದಾರೆ. ಯಾವ ಶಾಲೆಯಾದರೂ ಸಹ ಧಾರ್ಮಿಕ ಸಮವಸ್ತ್ರಕ್ಕೆ ಅವಕಾಶ ಇಲ್ಲ. ಸರ್ಕಾರಿ ಆಗಲಿ, ಖಾಸಗಿ ಆಗಲಿ ಅವಕಾಶ ಇಲ್ಲ. ಹಿಂದೂ, ಮುಸ್ಲಿಂ, ಕ್ರೈಸ್ತರಾಗಲಿ ಎಲ್ಲರಿಗೂ ಈ ಕಾನೂನು ಅನ್ವಯವಾಗಲಿದೆ. ಎಲ್ಲದರಲ್ಲಿಯೂ ರಾಜಕೀಯ ಮಾಡುವುದನ್ನು ಬಿಟ್ಟು ಸ್ಪಷ್ಟ ನಿಲುವು ತೆಗೆದುಕೊಳ್ಳಲಿ. ಇವತ್ತು ನ್ಯಾಯಾಲಯ ಸಹ ಸ್ಪಷ್ಟ ನಿಲುವು ಕೊಟ್ಟಿದೆ. ಮಕ್ಕಳಲ್ಲಿ ಕುತೂಹಲ ಇರುತ್ತದೆ, ಯಾರೋ ಒಬ್ಬರೂ ಮಾಡ್ತಾರೆ ಅಂತಾ ಬೇರೆಯವರೂ ಮಾಡುತ್ತಾರೆ," ಎಂದರು.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದು, ಸುಮ್ಮನೇ ಗಾಳಿಯಲ್ಲಿ ಗುಂಡು ಎಂಬುದು ಬೇಡ. ರಾಜಕೀಯವಾಗಿ ಮಾತನಾಡುವುದು ಬೇಡ. ಸಾಕ್ಷಿ ಇದ್ದರೆ ಅದನ್ನು ಸಾಬೀತು ಮಾಡಲಿ ಎಂದು ಸವಾಲೆಸೆದರು.

ಹಾಗೆಯೇ ಯುವತಿಗೆ ಕೆಲ ಸಂಘಟನೆ 5 ಲಕ್ಷ ಬಹುಮಾನ ನೀಡಿದ ವಿಚಾರವಾಗಿ, ಆ ಸಂದರ್ಭದಲ್ಲಿ ಯುವತಿ ಮಾತನಾಡಿದ್ದಾಳೆ. ಆದರೆ ಅದನ್ನೇ ದೊಡ್ಡ ಸಾಧನೆ ಎಂದು ಬಿಂಬಿಸುವುದು ಬೇಡ. ಇಂತಹ ವಿಚಾರಕ್ಕೆ ಪ್ರಚೋದನೆ ಬೇಡ ಎಂದು ಸಚಿವರು ಇದೇ ವೇಳೆ ತಿಳಿಸಿದರು.

BJP Leaders Children Studied in Government Schools Says Minister Ashwath Narayan

ಇನ್ನು ಶಾಲಾ- ಕಾಲೇಜು ಪ್ರಾರಂಭ ವಿಚಾರವಾಗಿ ಸ್ಪಷ್ಟನೆ ನೀಡಿದ ಸಚಿವ ಅಶ್ವಥ್ ನಾರಾಯಣ, ಸಮಯ ನೋಡಿ ಹತ್ತನೇ ತರಗತಿವರೆಗೆ ಪ್ರಾರಂಭ ಮಾಡುತ್ತೇವೆ. ನಂತರ ಕಾಲೇಜು ಪ್ರಾರಂಭದ ನಿರ್ಧಾರ ಮಾಡುತ್ತೇವೆ. ಹಾಗೆಯೇ ಸ್ಥಳೀಯ ಪರಿಸ್ಥಿತಿ ನೋಡಿ, ಜಿಲ್ಲಾಧಿಕಾರಿ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆಗೆ ಚರ್ಚೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಇದಲ್ಲದೆ ಶಾಲಾ- ಕಾಲೇಜಿನಲ್ಲಿ ಮೊಬೈಲ್ ಬಳಕೆ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಹಿಜಾಬ್ ಗಲಾಟೆಯ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಇದು ಡಿಜಿಟಲ್ ಯುಗ, ಕಲಿಕೆಗೂ ಬೇಕಾಗುತ್ತದೆ. ಇದರಿಂದ ಸಕಾರಾತ್ಮಕವೂ ಇದೇ, ನಕಾರಾತ್ಮಕವೂ ಇದೆ. ಕೆಲವು ಚಟುವಟಿಕೆಗಳಿಗೆ ನಿರ್ಬಂಧ ತರುವುದನ್ನು ಮಾಡುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಇದೇ ವೇಳೆ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+