Get Updates
Get notified of breaking news, exclusive insights, and must-see stories!

ಬರ ಪರಿಶೀಲನೆಗೆ ಬಂದು ಬಡಿದಾಡಿಕೊಂಡ ಬಿಜೆಪಿ ನಾಯಕರು: ಚನ್ನಪಟ್ಟಣ ತಾಲೂಕು ಅಧ್ಯಕ್ಷನಿಗೆ ಕಪಾಳ ಮೋಕ್ಷ

ರಾಮನಗರ, ನವೆಂಬರ್‌ 09: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ ತವರು ಜಿಲ್ಲೆ ರೇಷ್ಮೆನಾಡು ರಾಮನಗರದ ಬರ ಪ್ರದೇಶ ಪರಿಶೀಲನೆಯ ಸಮಯದಲ್ಲಿ ಬಿಜೆಪಿ ನಾಯಕರು ಪರಸ್ಪರ ಬಡಿದಾಡಿಕೊಂಡಿರ ಘಟನೆ ನಡೆದಿದೆ.

ವಿಧಾನಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಇಂದು ರಾಮನಗರ ಜಿಲ್ಲೆಯಲ್ಲಿ ಬರ ಅಧ್ಯಯನ ಕೈಗೊಂಡಿದ್ದ ಸಮಯದಲ್ಲಿ‌ ವಿಧಾನಪರಿಷತ್ ಸದಸ್ಯ ದೇವೇಗೌಡ ಹಾಗೂ ಚನ್ನಪಟ್ಟಣ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷರ ನಡುವೆ ಗಲಾಟೆ ನಡೆದಿದೆ. ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ ಬಹಿರಂಗವಾಗಿಯೇ ತಮ್ಮ ಪಕ್ಷದ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ್ದಾರೆ.

inspection-the-drought-created-a-fight

ರಾಮನಗರದ ವಿಭೂತಿ ಕೆರೆ ಗ್ರಾಮದಲ್ಲಿ ಬರ ಅಧ್ಯಯನಕ್ಕೆ ವಿಭೂತಿಕೆರೆ ಗ್ರಾಮಕ್ಕೆ ವಿಧಾನಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜ್, ತಾಲೂಕು ಅಧ್ಯಕ್ಷರು ಹಾಗೂ ಬಿಜೆಪಿ ಮುಖಂಡರ ಒಳಗೊಂಡ ತಂಡ ಭೇಟಿ ನೀಡಿದರು. ರೈತ ಜಮೀನಿಗೆ ಭೇಟಿ ನೀಡಿ ಮಳೆ ಕೊರತೆಯಿಂದಾಗಿ ಹಾನಿಗೀಡಾದ ರಾಗಿ ಬೆಳೆಯನ್ನು ಪರಿಶೀಲನೆ ನಡೆಸಿ ರೈತರಿಂದ ಮಾಹಿತಿ ಪಡೆದುಕೊಂಡರು.

ನೊಂದ ರೈತರೊಂದಿಗೆ ಸಂವಾದ ನಂತರ ಮಾಧ್ಯಗಳೊಂದಿಗೆ ಮಾಹಿತಿ ಹಂಚಿಕೊಂಡ ನಂತರ ಸ್ಥಳೀಯ ಬಿಜೆಪಿ ಮುಖಂಡರ ಮನೆಗೆ ತೆರಳಿದರು. ಸ್ಥಳೀಯ ಮುಖಂಡರ ಮನೆಯಿಂದ ಹೊರ ಬರುವ ಸಮಯದಲ್ಲಿ‌ ಮುಂಬರುವ ಪದವೀಧರ ಚುನಾವಣೆ ವಿಚಾರವಾಗಿ ದೇವೇಗೌಡ ಹಾಗೂ ಜಯರಾಮ್ ನಡುವೆ ಮಾತಿಗೆ ಮಾತು ಬೆಳದಿದೆ. ಈ ವೇಳೆ ತಮ್ಮ ಪಕ್ಷದ ಮುಖಂಡ ಜಯರಾಮ್ ಕಪಾಳಕ್ಕೆ ಬಾರಿಸಿದ್ದಾರೆ. ಅಲ್ಲದೇ ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ. ಬಳಿಕ ಇಬ್ಬರನ್ನು ಸ್ಥಳೀಯ ನಾಯಕರು ಸಮಾಧಾನಪಡಿಸಿದ್ದಾರೆ.

inspection-the-drought-created-a-fight

ಆ.ದೇವೇಗೌಡರ ವಿರುದ್ಧ ಪಕ್ಷಕ್ಕೆ ದೂರು ಕೊಡಲು ನಿರ್ಧಾರ

ಚನ್ನಪಟ್ಟಣ ತಾಲೂಕು ಬಿಜೆಪಿ ಅಧ್ಯಕ್ಷ ಕೆಲಗೆರೆ ಜಯರಾಮ್ ತಮ್ಮ ಮೇಲೆ ಆ.ದೇವೇಗೌಡ ಹಲ್ಲೆ ಮಾಡಿದ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಅ.ದೇವೇಗೌಡ ಪರ ವರಿಗಾಗಿ ದುಡಿಮೆ ಮಾಡಿದ್ದೇನೆ. ಅವರ ವಿಧಾನ ಪರಿಷತ್ ಚುನಾವಣೆಯಲ್ಲಿ ಅವರಿಗೆ ಮತಹಾಕಿಸಿದ್ದೇನೆ. ನಾನು ಅವರಿಗಾಗಿ ದುಡಿದ ಪ್ತತಿಫಲವಾಗಿ ಇಂದು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಎಲ್‌ಎಲ್‌ಸಿ ಚುನಾವಣೆ ವಿಚಾರವಾಗಿ ಮಾತನಾಡುತ್ತಾ ಹೊಡೆದರು. ಇದು ನನಗೆ ಬಹಳ ದುಃಖವಾಗಿದೆ. ನಾನು ಈ ಘಟನೆಯ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರಿಗೆ ದೂರು ಕೊಡುತ್ತೇನೆ. ನಾನು 30 ವರ್ಷದಿಂದ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ. ಆದರೆ ಇಂತಹ ಕೃತ್ಯ ಮುಂದೆ ಯಾರಿಗೂ ಆಗಬಾರದು. ಅವರಿಗೆ ಪಕ್ಷದಲ್ಲಿ ಯಾವ ರೀತಿ ತೊಂದರೆ ಆಗುತ್ತಿದೆಯೋ ಗೊತ್ತಿಲ್ಲ. ಈ ರೀತಿ ನಡೆದುಕೊಂಡದ್ದು ತಪ್ಪು ಎಂದು ಚನ್ನಪಟ್ಟಣ ತಾಲೂಕು ಬಿಜೆಪಿ ಅಧ್ಯಕ್ಷ ಕೆಲಗೆರೆ ಜಯರಾಮ್ ಹೇಳಿಕೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+