ರಾಮನಗರ: ಅಭ್ಯರ್ಥಿ ಕೈಕೊಟ್ಟರು ಬಿಜೆಪಿಯ ಪ್ರಚಾರ ನಿಂತಿಲ್ಲ! ಏನೀ ತಂತ್ರ?
ರಾಮನಗರ, ನವೆಂಬರ್ 02: ರಾಮನಗರ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮರ್ಮಾಘಾತವನ್ನು ಅವರ ಅಭ್ಯರ್ಥಿ ನೀಡಿದ್ದಾರೆ. ಚುನಾವಣೆ ಒಂದು ದಿನ ಇದ್ದಾಗ ಅಭ್ಯರ್ಥಿ ಎಲ್.ಚಂದ್ರಶೇಖರ್ ಕಾಂಗ್ರೆಸ್ ತೆಕ್ಕೆಗೆ ಸೇರಿಕೊಂಡಿದ್ದಾರೆ. ಆದರೆ ರಾಮನಗರ ಬಿಜೆಪಿ ಕಾರ್ಯಕರ್ತರು ಛಲ ಬಿಟ್ಟಿಲ್ಲ.
ಹೌದು, ಅಭ್ಯರ್ಥಿ ಕೈಕೊಟ್ಟರೇನಂತೆ ಕಾರ್ಯಕರ್ತರು ತಮ್ಮ ಛಲ ಬಿಟ್ಟಿಲ್ಲ, ಅಭ್ಯರ್ಥಿ ಇಲ್ಲದಿದ್ದರೂ ಬಿಜೆಪಿ ಪರ ಪ್ರಚಾರವನ್ನು ನಿಲ್ಲಿಸಿಲ್ಲ.
ನಿನ್ನೆಗೆ ಬಹಿರಂಗ ಪ್ರಚಾರ ಅಂತ್ಯವಾಗಿರುವ ಕಾರಣ ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರು ಹೊಸ ಕರಪತ್ರಗಳನ್ನು ಹಿಡಿದು ಮನೆ-ಮನೆಗೆ ಹೋಗಿ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ. ಅಭ್ಯರ್ಥಿಗೆ ಬೇಡ ಬಿಜೆಪಿ ಪಕ್ಷವನ್ನು ನೋಡಿ ಮತ ಹಾಕಿ ಎಂದು ಕೇಳಿಕೊಳ್ಳುತ್ತಿದ್ದಾರೆ.
ಅಭ್ಯರ್ಥಿ ಎಲ್.ಚಂದ್ರಶೇಖರ್ ಕೈಕೊಡುತ್ತಿದ್ದಂತೆ ರಾತ್ರೋರಾತ್ರಿ ಹೊಸ ಕರಪತ್ರಗಳನ್ನು ಅಚ್ಚು ಮಾಡಿಸಿರುವ ರಾಮನಗರ ಬಿಜೆಪಿ, ಅಭ್ಯರ್ಥಿ ಚಿತ್ರದ ಜಾಗದಲ್ಲಿ ಬಿಜೆಪಿಯ ಚಿಹ್ನೆ ಕಮಲದ ಚಿಹ್ನೆ, ಅಭ್ಯರ್ಥಿ ಹೆಸರಿನ ಜಾಗದಲ್ಲಿ 'ದೇಶ ಮೊದಲು' ಎಂದು ಮುದ್ರಿಸಿ ಮತ ಕೇಳುತ್ತಿದೆ.

ಚಂದ್ರಶೇಖರ್ ಮೇಲೆ ಭಾರಿ ಆಕ್ರೋಶ
ಮತದಾನ ಎರಡು ದಿನ ಇದ್ದಾಗ ಕೈಕೊಟ್ಟ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಮೇಲೆ ರಾಮನಗರ ಬಿಜೆಪಿ ಕಾರ್ಯಕರ್ತರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಂದ್ರಶೇಖರ್ ಅವರ ಪ್ರತಿಕೃತಿ ದಹಿಸಿದ್ದಾರೆ, ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದಾರೆ. ಅಣಕು ಶವಯಾತ್ರೆ ನಡೆಸಿದ್ದಾರೆ.

ರಾಜ್ಯ ಬಿಜೆಪಿ ಮೇಲೂ ಆಕ್ರೋಶ
ರಾಜ್ಯ ಬಿಜೆಪಿ ಮೇಲೂ ರಾಮನಗರ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿರುವ ನಿಷ್ಠಾವಂತ ಕಾರ್ಯಕರ್ತರಿದ್ದರೂ ಸಹ ಹೊರಗಿನಿಂದ (ಕಾಂಗ್ರೆಸ್) ಬಂದ ವ್ಯಕ್ತಿಗೆ ಟಿಕೆಟ್ ನೀಡಿದ ರಾಜ್ಯ ಬಿಜೆಪಿ ನಿರ್ಣಯಕ್ಕೂ ರಾಮನಗರ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೋಟಾ ಪರವಾಗಿಯೂ ಕೆಲವರ ಪ್ರಚಾರ
ಬಿಜೆಪಿಯ ಕೆಲವು ಕಾರ್ಯಕರ್ತರು ಮತದಾನದಂದು ನೋಟಾ ಬಟನ್ ಪ್ರಯೋಗಿಸುವಂತೆಯೂ ಪ್ರಚಾರ ಮಾಡುತ್ತಿದ್ದಾರೆ. ಸುಪ್ರಿಂ ಕೋರ್ಟ್ ಅನ್ವಯ ನೋಟಾಕ್ಕೆ ಬಹುಮತ ಬಂದರೆ ಮತದಾರರ ಆಯ್ಕೆ ಗೌರವಿಸಿ ಅಲ್ಲಿ ಮರು ಚುನಾವಣೆ ಮಾಡಲಾಗುವುದಿಲ್ಲ. ಆದರೆ ನೋಟಾಕ್ಕೆ ಬಹುಮತ ಬರುವುದು ಅತ್ಯಂತ ಕಷ್ಟ ಸಾಧ್ಯ.

ಕಣದಲ್ಲಿ ಉಳಿದಿದ್ದು ಒಬ್ಬರೇ
ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಅವರು ಕಣದಿಂದ ಹಿಂದೆ ಸರಿದಂತೆ ಪ್ರಸ್ತುತ ರಾಮನಗರ ಉಪಚುನಾವಣೆ ಕಣದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಜೆಡಿಎಸ್ನ ಅನಿತಾ ಕುಮಾರಸ್ವಾಮಿ ಅವರು ಮಾತ್ರವೇ ಕಣದಲ್ಲಿ ಉಳಿದಿರುವ ಮುಖ್ಯ ಅಭ್ಯರ್ಥಿ ಹಾಗಾಗಿ ಅವರ ಗೆಲುವು ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications