ಕೇವಲ ಒಂದು ಸ್ಥಾನ ಗೆದ್ದು ಮಾಗಡಿ ಪುರಸಭೆ ಅಧಿಕಾರ ಹಿಡಿದ ಬಿಜೆಪಿ
ರಾಮನಗರ, ನವೆಂಬರ್ 12: ರಾಮನಗರ ಜಿಲ್ಲೆಯ ಮಾಗಡಿ ಪುರಸಭೆಯಲ್ಲಿ ಪ್ರಥಮ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಮಾಗಡಿ ಪುರಸಭೆ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಸದಸ್ಯೆ ಭಾಗ್ಯಲಕ್ಷ್ಮಮ್ಮ ಗುರುವಾರ ಪದಗ್ರಹಣ ಮಾಡಿದರು. ಬಿಜೆಪಿ ಪಕ್ಷ ಮಾಗಡಿ ಪುರಸಭೆಯ ಇತಿಹಾಸದಲ್ಲೇ, ಅದರಲ್ಲೂ ಕೇವಲ ಒಂದು ಸ್ಥಾನ ಗೆದ್ದು ಅಧಿಕಾರದ ಗದ್ದುಗೆ ಏರಿದೆ.
ಪುರಸಭೆಯಲ್ಲಿ ಚುನಾಯಿತರಾದ ಏಕೈಕ ಅಭ್ಯರ್ಥಿ ಭಾಗ್ಯಲಕ್ಷ್ಮಮ್ಮ ಅವಿರೋಧವಾಗಿ ಆಯ್ಕೆಯಾಗಿ ಗೆದ್ದು, ಮಾಗಡಿ ಪುರಸಭೆ ಅಧ್ಯಕ್ಷ ಸ್ಥಾನದ ಪದಗ್ರಹಣ ಮಾಡಿದರು.

ಮಾಗಡಿ ಹಾಲಿ ಶಾಸಕ ಎ.ಮಂಜುನಾಥ್ ಮತ್ತು ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ನಡುವಿನ ತಿಕ್ಕಾಟದಿಂದ ಕೇವಲ ಒಂದೇ ಸ್ಥಾನ ಗೆದ್ದಿದ್ದ ಬಿಜೆಪಿಯ ಭಾಗ್ಯಲಕ್ಷ್ಮಮ್ಮ ಅವಿರೋಧವಾಗಿ ಆಯ್ಕೆಯಾಗಬೇಕಾಯಿತು. ಇನ್ನು ಪುರಸಭೆಯಲ್ಲಿ ಜೆಡಿಎಸ್-12, ಕಾಂಗ್ರೆಸ್-10 ಹಾಗೂ ಬಿಜೆಪಿ-1 ಸ್ಥಾನ ಗಳಿಸಿದ್ದವು.
ಪುರಸಭೆಯ ಅಧಿಕಾರದ ಚುಕ್ಕಾಣಿ ಹಿಡಿಯವ ಹಠಕ್ಕೆ ಬಿದ್ದ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ, ಜೆಡಿಎಸ್ ಪಕ್ಷದ ಇಬ್ಬರು ಸದಸ್ಯರನ್ನು ತಮ್ಮ ಸೆಳೆಯಲು ಯಶಸ್ವಿಯಾದರು.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ತಪ್ಪಿಸುವ ಜೆಡಿಎಸ್ ಪ್ರಯತ್ನದಿಂದ ಒಂದೇ ಸ್ಥಾನ ಗೆದ್ದಿದ್ದ ಬಿಜೆಪಿ ಅವಿರೋಧವಾಗಿ ಪುರಸಭೆಯ ಅಧಿಕಾರ ಅಲಂಕಾರಿಸಿದೆ.
ಇದೇ ಸಂದರ್ಭದಲ್ಲಿ ಪುರಸಭೆ ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಭಾಗ್ಯಲಕ್ಷ್ಮಮ್ಮ ಅವರನ್ನು ಬಿಜೆಪಿ ಮುಖಂಡ ಹಾಗೂ ಬೆಂಗಳೂರು ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕ ಬಸವರಾಜು ಅಭಿನಂದಿಸಿದರು.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications