ಮಹಿಳೆಯರಿಗೆ ಮರ್ಯಾದೆ ಕೊಡೋದು ಹೀಗೇನಾ? ಎಚ್ಡಿಕೆ ವಿರುದ್ಧ ಬಿಜೆಪಿ ಮಹಿಳಾ ನಗರಸಭೆ ಸದಸ್ಯರ ಆಕ್ರೋಶ
ಚನ್ನಪಟ್ಟಣ, ಆಗಸ್ಟ್ 17: ಮಂಗಳವಾರ ನಗರದ ನಗರಸಭೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮ ವಿರೋಧಿಸಿ ಬಿಜೆಪಿ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದ ವೇಳೆ ಮಾಜಿ ಮುಖ್ಯಮಂತ್ರಿ ಹಾಗೂ ಕ್ಷೇತ್ರದ ಶಾಸಕ ಎಚ್.ಡಿ.ಕುಮಾರಸ್ವಾಮಿ ನಿಮ್ಮ ನಾಟಕ ನನ್ನ ಮುಂದೆ ನಡೆಯುವುದಿಲ್ಲ ಎಂಬ ಹೇಳಿಕೆಯನ್ನು ಬಿಜೆಪಿ ಮಹಿಳಾ ಸದಸ್ಯರು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರಸಭೆಯ ಬಿಜೆಪಿ ಮಹಿಳಾ ಸದಸ್ಯ ಸುಮಾ ರವೀಶ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , "ಏನ್ ನಾಟಕ ಮಾಡ್ತೀರಾ.. ಡ್ರಾಮಾ ಕಂಪನಿಯವರ" ಎಂದು ಕುಮಾರಸ್ವಾಮಿ ಯವರು ಹೇಳಿರುವುದು ನಮಗೆ ತುಂಬಾ ನೋವು ತಂದಿದೆ. ಮುಖ್ಯಮಂತ್ರಿಗಳಾಗಿದ್ದವರು ಹೆಣ್ಣುಮಕ್ಕಳಿಗೆ ಮರ್ಯಾದೆ ಕೊಡೂ ರೀತಿ ಇದೆನಾ" ಎಂದು ತಮ್ಮ ಆಕ್ರೋಶ ಹೊರಹಾಕಿದರು.
ನಗರಸಭೆಯ ಅಧಿಕಾರಿಗಳು ಹಾಗೂ ಅಧ್ಯಕ್ಷರು ಬಿಜೆಪಿ ನಗರಸಭಾ ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳದೆ ನೀತಿಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಅಲ್ಲದೇ ಸದಸ್ಯರಿಗೆ ಯಾವುದೇ ಮಾಹಿತಿ ನೀಡದೆ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ ಎಂದು ನಮ್ಮ ಸಮಸ್ಯೆ ಹೇಳಿಕೊಂಡು ಹೋಗಿದ್ದೆ ತಪ್ಪಾಯ್ತಾ, ಅವರು ಆ ರೀತಿ ಮಾತನಾಡಿದ್ದು ಸರಿನಾ? ಎಂದು ಪ್ರಶ್ನೆ ಮಾಡಿದರು.

ಅಲ್ಲದೇ ನಗರಸಭೆಯ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆ. ಜೆಡಿಎಸ್ ಸದಸ್ಯರ ವಾರ್ಡ್ ಗಳಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಆದರೆ ಬಿಜೆಪಿ ಸದಸ್ಯರು ಪ್ರತಿನಿಧಿಸುವ ವಾರ್ಡಗಳಿಗೆ ಮಾತ್ರ ಅನುದಾನ ಹಂಚಿಕೆ ಮಾಡಿಲ್ಲ. ಬಿಜೆಪಿ ಸದಸ್ಯರಿರುವ ವಾರ್ಡಗಳಲ್ಲಿ ಕುಮಾರಸ್ವಾಮಿಗೆ ಜನರು ಮತ ನೀಡಿಲ್ಲವೇ, ಬಿಜೆಪಿ ಸರಕಾರ ನೀಡಿರುವ ನಗರಾಭಿವೃದ್ಧಿ ಅನುದಾನದಲ್ಲಿ ತಾರತಮ್ಯ ಮಾಡುವುದು ಎಷ್ಟು ಸರಿ? ಎಂದು ಬಿಜೆಪಿ ಸದಸ್ಯರು ಪ್ರಶ್ನೆಮಾಡಿದರು.
ಮಹಿಳೆಯ ಸದಸ್ಯರೊಂದಿಗೆ ಸೌಜನ್ಯದಿಂದ ವರ್ತಿಸಿದ ಇವರ ಪತ್ನಿ ಸಹ ಶಾಸಕಿಯಾಗಿದ್ದಾರೆ. ಈ ರೀತಿ ಮಾತಾಡೋದು ಸರಿಯಲ್ಲಾ. ಮಂಡ್ಯದಲ್ಲಿ ಲೋಕಸಭೆ ಎಲೆಕ್ಷನ್ ನಲ್ಲೂ ಸುಮಲತಾ ಅವರನ್ನ ಅವಮಾನಿಸಿದ್ದರು ಎಂದು ನಗರದ 15ನೇ ವಾರ್ಡ್ ಬಿಜೆಪಿ ಸದಸ್ಯೆ ಸುಮಾ ರವೀಶ್ ಎಚ್ಡಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಿಎಂ ಎಚ್ಡಿಕೆ ಪ್ರತಿಕ್ರಿಯೆ
ಸ್ವಚ್ಚತಾ ವಾಹನಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿದೆ ಎಂದು ಕೆಲವು ಸದಸ್ಯರು ಪ್ರಶ್ನೆಮಾಡಿದರು. ಈ ಬಗ್ಗೆ ಅಧಿಕಾರಿಗಳು ಹಾಗೂ ನಗರಸಭೆಯ ಅಧ್ಯಕ್ಷರನ್ನು ವಿಚಾರಿಸಿದ್ದೇನೆ. ಕಾರ್ಯಕ್ರಮಕ್ಕೆ ಯಾವುದೇ ಆಮಂತ್ರಣ ಪತ್ರ ಮುದ್ರಿಸಿಲ್ಲ, ಕೇವಲ ಪೋನ್ ಮೂಲಕ ಶಿಷ್ಟಾಚಾರದಂತೆ ಎಲ್ಲರಿಗೂ ಮಾಹಿತಿ ನೀಡಿದ್ದೇವೆ. ಅಲ್ಲದೇ ಎಲ್ಲಾ ಸದಸ್ಯರಿಗೆ ಮೆಸೇಜ್ ಕೂಡ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಅನುದಾನ ಹಂಚಿಕೆಯಲ್ಲಿ ಏನೇ ತಾರತಮ್ಯ ನಡೆದಿದ್ದರೆ, ಇದೇ 20 ರಂದು ಸಭೆ ನಡೆಸಿ ಸರಿಪಡಿಸುವುದಾಗಿ ಭರವಸೆ ನೀಡಿದ್ದೇನೆ. ಆದರೆ ಕೆಲವರು ಉದ್ದೇಶಪೂರ್ವಕವಾಗಿ ಕಾರ್ಯಕ್ರಮದಲ್ಲಿ ಗೊಂದಲ ಮೂಡಿಸುವ ಪ್ರಯತ್ನ ನಡೆಸಿದ್ದಾರೆ. ಅವರಿಗೆ ಮಾಜಿ ಶಾಸಕರು ಎತ್ತಿಕ್ಕಿದ್ದಾರೋ ನನಗೆ ಗೊತ್ತಿಲ್ಲ ಅಥವಾ ಅವರಿಗೆ ಮಾಹಿತಿ ಇಲ್ಲದೇ ಇರಬಹುದು, ಮಾಜಿ ಶಾಸಕರನ್ನು ಮೆಚ್ಚಿಸಲು ಇವರು ಇಂತಹ ಕೆಲಸಕ್ಕೆ ಕೈ ಹಾಕಿರಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications