ರಾಮನಗರ: ರೈಸ್ ಮಿಲ್ನಲ್ಲಿ ನಾಡ ಬಾಂಬ್ ಸ್ಫೋಟ, ವ್ಯಕ್ತಿ ಕೈ ಛಿದ್ರ ಛಿದ್ರ
ರಾಮನಗರ, ಡಿಸೆಂಬರ್ 03: ತೆಂಗಿನಕಾಯಿ ಎಂದುಕೊಂಡು ಕೈಯಲ್ಲಿ ಹಿಡಿದಿದ್ದ ನಾಡ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ನೇರಳೆಹಳ್ಳಿ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೋಲಾರದ ಮೂಲದ ನಿವಾಸಿ ಕೌಶದ್ (25) ನೇರಳೆಹಳ್ಳಿ ದೊಡ್ಡಿ ಗ್ರಾಮದ ಅಕ್ಕಿ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಕ್ಕಿಯ ಮೇಲೆ ತೆಂಗಿನಕಾಯಂತಹ ವಸ್ತುವು ಬಿದ್ದಿತ್ತು. ಇದನ್ನು ಗಮನಿಸಿದ ಕೌಶದ್ ಆ ವಸ್ತುವನ್ನು ಕೈಯಲ್ಲಿ ಹಿಡಿದು ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಸ್ಫೋಟಗೊಂಡಿದೆ. ಇನ್ನು ಕೌಶಿದ್ ವಸ್ತುವನ್ನು ಏನೆಂದು ತಿಳಿಯಲು ಚಚ್ಚಿದ್ದಾರೆ ಎನ್ನಲಾಗಿದೆ. ಸ್ಫೋಟಗೊಂಡ ಬಳಿಕ ನಾಡ ಬಾಂಬ್ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಕೌಶದ್ ಕೈಗೆ ಗಂಭೀರ ಗಾಯವಾಗಿದೆ. ಸ್ಫೋಟದ ರಭಸಕ್ಕೆ ಕೌಶದ್ ಬಲಗೈ ಹಸ್ತದ ಎರಡು ಬೆರಳು ಛಿದ್ರ ಛಿದ್ರವಾಗಿದೆ. ಸದ್ಯ ಕೌಶದ್ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಇನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಾಡುಹಂದಿ ಬೇಟೆಗೆ ಇಟ್ಟಿದ್ದ ನಾಡಬಾಂಬ್ ಸ್ಫೋಟವಾಗಿರುವ ಶಂಕೆ ವ್ಯಕ್ತವಾಗಿದೆ.
ಪಾರ್ಟ್ ಟೈಂ ಜಾಬ್ ಆಫರ್: ವ್ಯಕ್ತಿಗೆ 12 ಲಕ್ಷ ಪಂಗನಾಮ
ಸಾಮಾಜಿಕ ಜಾಲತಾಣದಲ್ಲಿ ಬಂದ ಪಾರ್ಟ್ ಟೈಂ ಜಾಬ್ ಆಫರ್ ನಂಬಿ ವ್ಯಕ್ತಿಯೊಬ್ಬ 12 ಲಕ್ಷ ರೂ ಕಳೆದುಕೊಂಡಿರುವ ಘಟನೆ ಬಿಡದಿಯ ಬೈರಮಂಗಲ ಗ್ರಾಮದಲ್ಲಿ ನಡೆದಿದೆ. ಬೈರಮಂಗಲ ಗ್ರಾಮದ ಯುವಕನಿಗೆ ವ್ಯಾಟ್ಸಾಪ್ಗೆ ಪಾರ್ಟ್ ಟೈಂ ಜಾಬ್ ಇದೆ ಎನ್ನುವ ಸಂದೇಶ ಬಂದಿತ್ತು.
ಆ ಸಂದೇಶದ ಲಿಂಕ್ ಓಪನ್ ಮಾಡಿದಾಗ ಟೆಲಿಗ್ರಾಂ ಖಾತೆಯಲ್ಲಿ ಮತ್ತೊಂದು ಲಿಂಕ್ ಓಪನ್ ಆಗಿ ಅಲ್ಲಿ ಗೂಗಲ್ನಲ್ಲಿ ರೆಸ್ಟೋರೆಂಟ್ಗಳಿಗೆ ರೆಂಟಿಗ್ಸ್ ಕೊಟ್ಟು ಅದರ ಸ್ಕ್ರೀನ್ ಶಾಟ್ ಮಾಡಿ ಟೆಲಿಗ್ರಾಂನಲ್ಲಿ ವಾಪಸ್ಸು ಕಳಿಸಿದಾಗ ಹಣವನ್ನ ಕಳುಹಿಸುತ್ತೇವೆ. ಒಟ್ಟು 22 ಟಾಸ್ಕ್ ಮುಗಿಸಿದರೆ ಒಂದು ದಿನಕ್ಕೆ 7,500 ರೂ ನಿಮಗೆ ಬರುತ್ತದೆ ಎಂದು ಹೇಳಿ ನಂಬಿಸಲಾಗಿತ್ತು.
ಇದನ್ನ ನಂಬಿದ ಆತ ಟಾಸ್ಕ್ಗಳನ್ನು ಪೂರೈಸಲು ಆರಂಭಿಸಿದ್ದ. ಟಾಸ್ಕ್ ಪೂರೈಸಿ ಹಣ ಕೇಳಿ, ಬ್ಯಾಂಕ್ ಖಾತೆ ವಿವರ ಪಡೆದಿದ್ದಾರೆ. ಹಣ ಖಾತೆಗೆ ಹಾಕಲಾಗಿದೆ ಆದರೆ ರಾಂಗ್ ಆಡರ್ ಪಾಸ್ ಆಗಿದೆ ಇದನ್ನು ಸರಿಪಡಿಸಬೇಕಾದರೆ 5 ಲಕ್ಷ ಹಣ ಆಗುತ್ತದೆ ಎಂದು ಹೇಳಿದ್ದಾರೆ. ಇದನ್ನ ನಂಬಿ ಹಣವನ್ನು ಅವರು ನೀಡಿದ ಖಾತೆಗೆ ಹಾಕಿದ್ದಾನೆ. ಹೀಗೆ ಹಂತಹಂತವಾಗಿ 12 ಲಕ್ಷ ರೂ ಕಳೆದುಕೊಂಡ ಮೇಲೆ ವಂಚನೆಗೊಳಾಗಿರುವುದು ತಿಳಿದು ಬಂದಿದೆ. ಘಟನೆ ಸಂಬಂಧ ಯುವಕ ರಾಮನಗರ ಸಿ.ಇ.ಎನ್ ಅಪರಾದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
-
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Horoscope March 2: ಈ ರಾಶಿಯವರಿಗೆ ಸಕಾರಾತ್ಮಕ ಪ್ರಗತಿ, ಮೇಷ-ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
Gold Rate : ಆಭರಣ ಪ್ರಿಯರಿಗೆ ಬಿಗ್ ಶಾಕ್; ಭಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ದರ, ಇಲ್ಲಿದೆ ಇಂದಿನ ಬೆಲೆ ಪಟ್ಟಿ -
Iran Vs America, Israel ಯುದ್ಧ ತೀವ್ರ: ಗಲ್ಫ್ ರಾಷ್ಟ್ರಗಳಿಗೂ ವ್ಯಾಪಿಸಿದ ಸಂಕಷ್ಟ; ಈ ಕ್ಷಣದ 10 ಪ್ರಮುಖ ಬೆಳವಣಿಗೆಗಳು -
ಯುದ್ಧದ ನಡುವೆಯೂ ಸರ್ವಧರ್ಮ ಸಮನ್ವಯತೆ ಸಂದೇಶ: ನಮ್ ಭಾರತ ಅಂದ್ರೆ ಹೀಗೆ ಅಂತಾ ವಿಶ್ವಕ್ಕೆ ಸಾರಿದ ಸಂಜು ಸ್ಯಾಮ್ಸನ್ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ಕರ್ನಾಟಕದ ಅಲಿಪುರದಲ್ಲಿ ಇರಾನ್ ನಾಯಕ ಖಮೇನಿ ಅಂದು ಆಡಿದ್ದ ಮಾತುಗಳೇನು ? -
Donald Trump: ಅಮೆರಿಕ, ಇಸ್ರೇಲ್ Vs ಇರಾನ್ ಯುದ್ಧದ ಬಗ್ಗೆ ಬಿಗ್ ಅಪ್ಡೇಟ್ಸ್ ಕೊಟ್ಟ ಡೊನಾಲ್ಡ್ ಟ್ರಂಪ್, ಏನದು












Click it and Unblock the Notifications