ಸೂರೇ ಸರಿಯಿಲ್ಲದ ಬ್ರಹ್ಮಣೀಪುರದ ಸರಕಾರಿ ಶಾಲೆ, ನೋಡೋರೆ ಇಲ್ಲವೆ!
ರಾಮನಗರ, ನವೆಂಬರ್ 20: ಸರಕಾರಿ ಶಾಲೆ ಅಂದರೆ ಎಲ್ಲ ಮೂಲ ಸೌಕರ್ಯಗಳಿರುತ್ತವೆ ಎಂಬುದು ನಿರೀಕ್ಷೆ. ಆದರೆ ಇಲ್ಲೊಂದು ಸರಕಾರಿ ಶಾಲೆಯಲ್ಲಿ ಸೌಕರ್ಯವೇ ಮರೀಚಿಕೆಯಾಗಿದೆ. ಛಾವಣಿ ಕಿತ್ತು ಬೀಳುತ್ತಿರುವ ಕೊಠಡಿಗಳಲ್ಲೇ ವಿದ್ಯಾರ್ಥಿಗಳು ಪಾಠ ಕೇಳುವ ಸ್ಥಿತಿ ಬಂದಿದೆ. ಇನ್ನು ಶೌಚಾಲಯದ ಸ್ಥಿತಿಯಂತೂ ಆ ದೇವರಿಗೇ ಪ್ರೀತಿ.
ಹಾಳಾಗಿರುವ ಶಾಲಾ ಕಟ್ಟಡ, ಅಲ್ಲಲ್ಲಿ ಕಿತ್ತು ಹೋದ ಛಾವಣಿ, ಹೊರಭಾಗದಲ್ಲಿಯೇ ಕುಳಿತು ಪಾಠ ಕೇಳುವ ವಿದ್ಯಾರ್ಥಿಗಳು...-ಇಂಥ ದೃಶ್ಯ ನೋಡಬೇಕು ಅಂದರೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ರಹ್ಮಣೀಪುರ ಗ್ರಾಮಕ್ಕೆ ಬರಬೇಕು. ಒಂದರಿಂದ ಏಳನೇ ತರಗತಿಯವರೆಗೂ ಇರುವ ಈ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 92 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಇಲ್ಲಿ ಸರಿಯಾದ ಕೊಠಡಿಗಳಿಲ್ಲ. ಕಳಪೆ ಕಾಮಗಾರಿಯಿಂದಾಗಿ ಛಾವಣಿ ಸಂಪೂರ್ಣ ಹಾಳಾಗಿ, ಚಕ್ಕೆ ಕಿತ್ತು ಬೀಳುತ್ತಿದೆ. ಇನ್ನು ಮಳೆಗಾಲದಲ್ಲಂತೂ ವಿದ್ಯಾರ್ಥಿಗಳ ಮೇಲೆ ನೀರು ಸುರಿಯುತ್ತದೆ. ಯಾವಾಗ ಛಾವಣಿ ಬೀಳುತ್ತದೋ ಎಂಬ ಆತಂಕದಲ್ಲಿ ಪಾಠ ಕೇಳುವ ಪರಿಸ್ಥಿತಿ ಇದೆ.
ಛಾವಣಿ ಕುಸಿಯಬಹುದೆಂಬ ಆತಕದಲ್ಲಿ ವಿದ್ಯಾರ್ಥಿಗಳನ್ನು ಶಾಲೆಯ ಹೊರಾಂಗಣದಲ್ಲಿ ಕೂರಿಸಿ ಪಾಠ ಮಾಡಲಾಗುತ್ತಿದೆ. ಇಲ್ಲಿರುವ ಶೌಚಾಲಯಗಳು ಸಹ ಹದಗೆಟ್ಟಿದ್ದು, ಗಿಡ-ಗಂಟಿ ಬೆಳೆದು ಹಾವು, ಹಲ್ಲಿಗಳಿಗೆ ವಾಸಸ್ಥಾನವಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು ಅಧಿಕಾರಿಗಳಿಗೆ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ.

ಈ ಬಗ್ಗೆ ಶಾಲೆ ಮುಖ್ಯ ಶಿಕ್ಷಕಿಯನ್ನು ಕೇಳಿದರೆ, ಶಾಲೆಯ ಸಮಸ್ಯೆಗಳ ಕುರಿತು ಮೇಲಧಿಕಾರಿಗಳಿಗೆ ಪತ್ರ ಬರೆದಿದ್ದೇವೆ. ಅವರು ಬಂದು ಪರಿಶೀಲನೆ ಮಾಡಿದ್ದಾರೆ ಎನ್ನುತ್ತಾರೆ.
ಸರಕಾರಿ ಶಾಲೆಗಳನ್ನು ಉಳಿಸಿ ಎಂದು ಜನಪ್ರತಿನಿಧಿಗಳು ಕೇವಲ ಬಾಯಲ್ಲಿ ಹೇಳುತ್ತಿದ್ದಾರೆ. ಆದರೆ ಉಳಿಸಲು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕಪಡಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications