ಅನಿತಾ ಕುಮಾರಸ್ವಾಮಿ ಪ್ರಮಾಣವಚನ, ಪತಿ-ಪತ್ನಿ ಬರೆಯಲಿದ್ದಾರೆ ಇತಿಹಾಸ
Recommended Video

ಬೆಂಗಳೂರು, ನವೆಂಬರ್ 15: ರಾಮನಗರ ವಿಧಾಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರಿ ಅಂತರದಿಂದ ಗೆದ್ದು ಬಂದ ಅನಿತಾ ಕುಮಾರಸ್ವಾಮಿ ಅವರು ಇಂದು ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸಭಾ ಅಧ್ಯಕ್ಷರ ಕೊಠಡಿಯಲ್ಲಿಯೇ ಅನಿತಾ ಕುಮಾರಸ್ವಾಮಿ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸ್ಪೀಕರ್ ರಮೇಶ್ ಕುಮಾರ್ ಅವರು ಅಧಿಕಾರಿ ಮತ್ತು ಗೌಪ್ಯತೆಯ ಪ್ರಮಾಣವಚನವನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾ ಕಾರ್ಯದರ್ಶಿ ಮೂರ್ತಿ ಹಾಗೂ ರಾಮನಗರದ ಹಲವು ಜೆಡಿಎಸ್ ಮುಖಂಡರು ಸ್ಥಳದಲ್ಲಿ ಹಾಜರಿದ್ದರು. ಅನಿತಾ ಕುಮಾರಸ್ವಾಮಿ ಅವರು ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಇದೇ ಮೊದಲ ಬಾರಿಗೆ ಸಿಎಂ ಹಾಗೂ ಅವರ ಪತ್ನಿ ಒಟ್ಟಿಗೆ ವಿಧಾನಸಭೆಗೆ ಬರಲಿದ್ದಾರೆ. ಈ ಹಿಂದೆ ಈ ರೀತಿಯ ಘಟನೆ ಆಗಿಲ್ಲ.

ಎಚ್ಡಿಕೆ ರಾಜೀನಾಮೆಯಿಂದ ಉಪಚುನಾವಣೆ
ಕುಮಾರಸ್ವಾಮಿ ಅವರು ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಗೆದ್ದರು. ಆ ನಂತರ ಚನ್ನಪಟ್ಟಣ ಉಳಿಸಿಕೊಂಡು ರಾಮನಗರಕ್ಕೆ ರಾಜೀನಾಮೆ ಸಲ್ಲಿಸಿದರು. ಹಾಗಾಗಿ ಇಲ್ಲಿ ಉಪಚುನಾವಣೆ ನಡೆಯಿತು. ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧಿಸಿದ್ದರು.

ಏಕಪಕ್ಷ ಗೆಲುವು ಸಾಧಿಸಿದ ಅನಿತಾ
ರಾಮನಗರ ಚುನಾವಣೆ ಅಂಗಳದಲ್ಲಿ ಜೆಡಿಎಸ್ ಅನಿತಾ ಕುಮಾರಸ್ವಾಮಿ ಮತ್ತು ಬಿಜೆಪಿಯಿಂದ ಎಲ್.ಚಂದ್ರಶೇಖರ್ ಮಾತ್ರ ಕಣದಲ್ಲಿದ್ದರು. ಆದರೆ ಮತದಾನಕ್ಕೆ ಎರಡು ದಿನ ಇದ್ದಾಗ ಬಿಜೆಪಿ ಅಭ್ಯರ್ಥಿ ಸಹ ಕಣದಿಂದ ಹಿಂದೆ ಸರಿದರು. ಹೀಗಾಗಿ ಅನಿತಾ ಕುಮಾರಸ್ವಾಮಿ ಅವರಿಗೆ ಎದುರಾಳಿಯೇ ಇಲ್ಲದಾಗಿ ಭಾರಿ ಅಂತರದಿಂದ ಗೆಲುವು ಸಾಧಿಸಿದರು.

ಪತಿಯ ದಾಖಲೆ ಮುರಿದ ಪತ್ನಿ
ರಾಮನಗರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಅನಿತಾ ಕುಮಾರಸ್ವಾಮಿ ಅವರು ಅವರ ಪತಿ ಕುಮಾರಸ್ವಾಮಿ ಅವರ ದಾಖಲೆಯನ್ನೇ ಅಳಿಸಿಹಾಕಿದ್ದಾರೆ. ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಿಂದ ಗೆದ್ದ ಕುಮಾರಸ್ವಾಮಿ ಅವರ ದಾಖಲೆಯನ್ನು ದೂಳಿಪಟ ಮಾಡಿ 1,25,043 ಮತಗಳನ್ನು ಗಳಿಸಿ ಭಾರಿ ಅಂತರದಿಂದ ಗೆಲುವು ಸಾಧಿಸಿದರು.

ಸಚಿವ ಸ್ಥಾನ ವರಿಷ್ಠರ ನಿರ್ಧಾರ
ಪ್ರಮಾಣವಚನ ಸ್ವೀಕಾರದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನಿತಾ ಕುಮಾರಸ್ವಾಮಿ ಅವರು, ಗೆಲ್ಲಿಸಿದ ಮತದಾರರ ಆಶೋತ್ತರಗಳಿಗೆ ಅನುಗುಣವಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಸಚಿವ ಸ್ಥಾನದ ಬಗ್ಗೆ ನನಗೆ ಮಾಹಿತಿ ಇಲ್ಲ ಆ ಬಗ್ಗೆ ಪಕ್ಷದ ವರಿಷ್ಠರು ನಿರ್ಣಯಿಸುತ್ತಾರೆ ಎಂದು ಅವರು ಹೇಳಿದರು.

ಎರಡನೇ ಬಾರಿ ಶಾಸಕಿ
ಅನಿತಾ ಕುಮಾರಸ್ವಾಮಿ ಅವರು ಇದು ಎರಡನೇ ಬಾರಿ ಶಾಸಕಿ ಆಗಿದ್ದಾರೆ. ಕಳೆದ ಚುನಾವಣೆಯಲ್ಲಿ (2013) ಚನ್ನಪಟ್ಟಣದ ಯೋಗೇಶ್ವರ್ ಅವರ ವಿರುದ್ಧ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಸೋತಿದ್ದರು. ಈ ಮೊದಲು 2008 ರಲ್ಲಿ ಮಧುಗಿರಿ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದು ಶಾಸಕಿ ಆಗಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications