ರಾಮನಗರ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ 100 ಕೋಟಿ ರೂ. ಆಸ್ತಿ ಒಡತಿ
Recommended Video

ರಾಮನಗರ, ಅಕ್ಟೋಬರ್ 15: ರಾಮನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್.ಡಿ. ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಸೋಮವಾರ ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿ ವಿವರವನ್ನು ನೀಡಿದ್ದಾರೆ.
ಅವುಗಳ ಒಟ್ಟಾರೆ ಮೌಲ್ಯ ಸುಮಾರು 100ಕೋಟಿ ರೂ.ಗಳಷ್ಟಿದ್ದು, ಅವರು 8.14 ಕೋಟಿ ರೂ. ಮೊತ್ತದ ಸಾಲವನ್ನೂ ಹೊಂದಿದ್ದಾರೆ.
ರಾಜ್ಯ ಚುನಾವಣಾ ಆಯೋಗಕ್ಕೆ ನಾಮಪತ್ರ ಮತ್ತು ಅಫಿಡವಿಟ್ ಸಲ್ಲಿಸಿರುವ ಅನಿತಾ ಕುಮಾರಸ್ವಾಮಿ, ತಾವು ಬಿ.ಇ. ಪದವೀಧರೆ ಎಂಬ ಮಾಹಿತಿ ನೀಡಿದ್ದಾರೆ. ಅದರೊಂದಿಗೆ ಚರ ಹಾಗೂ ಸ್ಥಿರಾಸ್ತಿಯ ವಿವರಗಳನ್ನು ಭರ್ತಿ ಮಾಡಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದಾಗಿ ರಾಮನಗರ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಅದಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಒಮ್ಮತದ ಅಭ್ಯರ್ಥಿಯಾಗಿ ಜೆಡಿಎಸ್ನಿಂದ ಅನಿತಾ ಕುಮಾರಸ್ವಾಮಿ ಕಣಕ್ಕಿಳಿಯುತ್ತಿದ್ದಾರೆ.

68.79 ಕೋಟಿ ರೂ. ಹೂಡಿಕೆ
ಕಸ್ತೂರಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ನಲ್ಲಿ 68.79 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. ಅಲ್ಲದೆ, 17.6 ಕೋಟಿ ರೂ. ಸಾಲ ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಅವರ ಬಳಿ ಇರುವ ಚರಾಸ್ತಿ ಮೌಲ್ಯ 94 ಕೋಟಿ ರೂ. ಜಯನಗರ ನಾಲ್ಕನೇ ಬ್ಲಾಕ್ನಲ್ಲಿ 14 ಕೋಟಿ ಮೌಲ್ಯದ ಕಟ್ಟಡವಿದೆ. ದೊಡ್ಡನಕುಂಟೆ ಬಳಿ 16 ಕೋಟಿ ರೂ ಮೌಲ್ಯದ ಕಟ್ಟಡ ಮಾಲೀಕರಾಗಿದ್ದಾರೆ.

76.35 ಲಕ್ಷ ರೂ ಆದಾಯ
2017-18ನೇ ಸಾಲಿನಲ್ಲಿ 76.35 ಲಕ್ಷ ರೂಪಾಯಿ ಆದಾಯ ಬಂದಿರುವುದಾಗಿ ಅಫಿಡವಿಟ್ನಲ್ಲಿ ಉಲ್ಲೇಖಿಸಲಾಗಿದೆ. ತಮ್ಮ ಬಳಿ 2660 ಗ್ರಾಂ ಚಿನ್ನ, 17 ಕೆ.ಜಿ. ಬೆಳ್ಳಿ, 40 ಕ್ಯಾರೆಟ್ ವಜ್ರ ಸೇರಿದಂತೆ 93.33 ಲಕ್ಷ ಮೌಲ್ಯದ ಆಭರಣ ಇದೆ ಎಂದು ಘೋಷಿಸಿದ್ದಾರೆ. 8.29 ಲಕ್ಷ ಮೌಲ್ಯದ ಹಾರ್ಲೆ ಡೆವಿಡ್ಸನ್ ಬೈಕ್ ಮತ್ತು 20 ಲಕ್ಷ ರೂಪಾಯಿ ಮೌಲ್ಯದ ವಾಹನ ತಮ್ಮ ಹೆಸರಿನಲ್ಲಿದೆ ಎಂದು ತಿಳಿಸಿದ್ದಾರೆ.

ವಿವಿಧೆಡೆಗಳಿಂದ ಸಾಲ
ವಿವಿಧ ವ್ಯಕ್ತಿ, ಸಂಸ್ಥೆ ಹಾಗೂ ಬ್ಯಾಂಕುಗಳಿಂದ 93.39 ಕೋಟಿ ರೂ ಸಾಲ ಪಡೆದಿರುವುದಾಗಿ ತಿಳಿಸಿದ್ದಾರೆ. ತಮ್ಮ ಹೆಸರಿನಲ್ಲಿ 42 ಲಕ್ಷ ರೂ. ನಗದು, 1.90 ಕೋಟಿ ರೂಪಾಯಿ ಠೇವಣಿ ಇರಿಸಲಾಗಿದೆ. ವಿವಿಧ ಹಣಕಾಸು ಸಂಸ್ಥೆಗಳಿಂದ ಸುಮಾರು 8.14 ಕೋಟಿ ಸಾಲ ಪಡೆದಿರುವುದಾಗಿ ವಿವರಿಸಿದ್ದಾರೆ. ಕೈಯಲ್ಲಿ 42 ಲಕ್ಷ ರೂಪಾಯಿ ನಗದು ಹಣವಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಒಮ್ಮತದ ಅಭ್ಯರ್ಥಿ
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡಲ್ಲಿಯೂ ಗೆಲುವು ಕಂಡಿದ್ದರು. ಬಳಿಕ ತವರು ಕ್ಷೇತ್ರವಾದ ರಾಮನಗರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಹೀಗಾಗಿ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಕಳೆದ ಮಂಗಳವಾರ ರಾಮನಗರ ತಾಲೂಕು ಘಟಕದ ಮುಖಂಡರು ಅನಿತಾ ಕುಮಾರಸ್ವಾಮಿ ಅವರ ಹೆಸರು ಘೋಷಣೆ ಮಾಡಿದ್ದರು. ಆದರೆ, ಕೆಲವು ಕಾರ್ಯಕರ್ತರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದ್ದರಿಂದ, ದೇವೇಗೌಡರು ಬುಧವಾರ ಮತ್ತೊಮ್ಮೆ ಸಭೆ ನಡೆಸಿದರು.
ಸ್ಥಳೀಯ ಮುಖಂಡರ ಮನವೊಲಿಸಿದ ಬಳಿಕ ಅನಿತಾ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ರಾಮನಗರ ಜೆಡಿಎಸ್ನ ನೆಲೆಯಾಗಿರುವುದರಿಂದ ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಗೋಜಿಗೆ ಹೋಗದೆ ಜೆಡಿಎಸ್ಗೆ ಬೆಂಬಲ ಘೋಷಿಸಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications